ಸ್ಕಂದಗಿರಿ,ಅವುಲುಬೆಟ್ಟಚಾರಣಕ್ಕೆಅನುಮತಿಕಡ್ಡಾಯ


Team Udayavani, Mar 15, 2018, 5:42 PM IST

KOL.jpg

ಚಿಕ್ಕಬಳ್ಳಾಪುರ: ಚಾರಣ ಪ್ರಿಯರೇ ಹುಷಾರ್‌.. ನೀವು ಅರಣ್ಯ ಇಲಾಖೆ ಅನುಮತಿ ಇಲ್ಲದೇ ದೃಢಿಕೃತ ಮಾರ್ಗದರ್ಶಕರಿಲ್ಲದೇ ಜಿಲ್ಲೆಯ ಅರಣ್ಯ ಪ್ರದೇಶ ಅದರಲ್ಲೂ ಐತಿಹಾಸಿಕ ಸ್ಕಂದಗಿರಿ ಹಾಗೂ ಅವುಲುಬೆಟ್ಟಕ್ಕೆ ಚಾರಣ
ನಡೆಸಿದರೆ ನೀವು ಬೇಹುಗಾರಿಕೆ ಪಡೆಯಿಂದ ಬಂಧನಕ್ಕೆ ಒಳಗಾಗಿ ಜೈಲು ಪಾಲಾಗುವುದು ಗ್ಯಾರೆಂಟಿ.

ಇತ್ತೀಚೆಗೆ ತಮಿಳುನಾಡಿನ ಥೇಣಿ ಜಿಲ್ಲೆಯ ಕುರಂಗಣಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಕೆಲವು ಮಂದಿ ವಿದ್ಯಾರ್ಥಿಗಳು ಅರಣ್ಯ ಇಲಾಖೆ ಅನುಮತಿ ಪಡೆಯದೇ ಅರಣ್ಯ ಪ್ರವೇಶ ಮಾಡಿ ಕೈಗೊಂಡಿದ್ದ ಚಾರಣದ ವೇಳೆ ಅಕಸ್ಮಿಕವಾಗಿ ಉಂಟಾದ ಕಾಡ್ಗಿಚ್ಚಿಗೆ ಸಿಲುಕು ಮೃತ ಪಟ್ಟ ನಂತರ ಎಚ್ಚೆತ್ತುಕೊಂಡಿರುವ ರಾಜ್ಯ ಅರಣ್ಯ ಕಾರ್ಯಪಡೆ ಈ ಆದೇಶವನ್ನು ಹೊರಡಿಸಿದ್ದು, ಅರಣ್ಯ ಪ್ರದೇಶದಲ್ಲಿ ಚಾರಣ ಕೈಗೊಳ್ಳಲು ಅವಕಾಶ ನೀಡುವ ಅಥವಾ ನಿಷೇಧಿಸುವ ಅಧಿಕಾರವನ್ನು ಜಿಲ್ಲೆಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ವಹಿಸಿದೆ.

ಆದೇಶದಲ್ಲಿನಿದೆ?: ರಾಜ್ಯದಲ್ಲಿ ಕೂಡ ಅನಧಿಕೃತವಾಗಿ ಅರಣ್ಯ ಪ್ರದೇಶದಲ್ಲಿ ಟ್ರಕ್ಕಿಂಗ್‌ ಮಾಡಲಾಗುತ್ತಿದೆಯೆಂಬ ದೂರುಗಳು ಸಾಕಷ್ಟು ಸಾರ್ವಜನಿಕರಿಂದ ಕೇಳಿ ಬರುತ್ತಿದ್ದು, ಇಂತಹ ಅನಧಿಕೃತವಾದ ಟ್ರೇಸ್‌ ಪಾಸ್‌ ಅಥವಾ ಇಲಾಖೆ ಅಧಿಕಾರಿಗಳು ಯಾವುದೇ ಅನುಮತಿ ಯಾವುದೇ ಅನುಮತಿ ಇಲ್ಲದೇ ಅರಣ್ಯ ಪ್ರವೇಶ ಆಗದ ರೀತಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚರ ವಹಿಸುವಂತೆ ತಿಳಿಸಿದೆ.

ಜೊತೆಗೆ ಟ್ರಕ್ಕಿಂಗ್‌ ಸ್ಥಳಗಳಲ್ಲಿ ಹೆಚ್ಚಿನ ಅನುಪಯುಕ್ತ ಕಸಕಡ್ಡಿ ಇದ್ದರೆ ತೆರವುಗೊಳಿಸುವಂತೆ ಬೇಸಿಗೆ ಮುಗಿಯುವರೆಗೂ ಟ್ರಕ್ಕಿಂಗ್‌ ಮಾರ್ಗಗಳ ಮೇಲೆ ನಿಗಾವಹಿಸಿ ಈಗಾಗಲೇ ಗುರುತಿಸಲಾದ ಟ್ರಕ್ಕಿಂಗ್‌ ಮಾರ್ಗಗಳಲ್ಲಿ ಮಾತ್ರ ಕ್ಯಾರಿಯಿಂಗ್‌ ಹಾಗೂ ಕ್ಯಾಪಾಸಿಟಿಗೆ ಅನುಗುಣವಾಗಿ ಟ್ರಕ್ಕಿಂಗ್‌ಗೆ ಅನುಮತಿ ನೀಡಲು ಸೂಚಿಸಿದೆ.

ಒಟ್ಟಿನಲ್ಲಿ ಬೇಸಿಗೆ ಆರಂಭದಲ್ಲಿಯೇ ತಮಿಳುನಾಡಿನಲ್ಲಿ ನಡೆದ ಕಾಡ್ಗಿಚ್ಚಿನಿಂದ 10 ಮಂದಿ ವಿದ್ಯಾರ್ಥಿಗಳು ಬಲಿಯಾದ ಪ್ರಕರಣ ರಾಜ್ಯದ ಅರಣ್ಯ ಇಲಾಖೆಗೆ ಪಾಠ ಕಲಿಸಿದ್ದು, ರಾಜ್ಯದ ಅರಣ್ಯ ಪ್ರದೇಶದಲ್ಲಿ ಟ್ರಕ್ಕಿಂಗ್‌ ಕೈಗೊಳ್ಳುವ ಚಾರಣ ಪ್ರಿಯರ ರಕ್ಷಣಗೆ ಹಲವು ಮಾರ್ಗೋಪಾಯಗಳನ್ನು ಕೈಗೊಳ್ಳುವಂತೆ ಮಾಡಿದೆ.

ಪರಿಸ್ಥಿತಿ ನೋಡಿಕೊಂಡು ಕ್ರಮ: ಡಾ. ಮಂಜುನಾಥ್‌
ಅರಣ್ಯ ಪ್ರದೇಶದೊಳಗೆ ಚಾರಣ ನಡೆಸುವುದಕ್ಕೆ ಇಲಾಖೆ ಯಾವುದೇ ನಿಷೇಧ ಹೇರಿಲ್ಲ. ಆದರೆ, ಇಲಾಖೆ ಅನುಮತಿ ಪಡೆದು ಚಾರಣ ಕೈಗೊಳ್ಳುವುದು ಕಡ್ಡಾಯ. ಜೊತೆಗೆ ಸ್ಥಳೀಯ ಪರಿಸ್ಥಿತಿಯನ್ನು ನೋಡಿಕೊಂಡು ಬೇಸಿಗೆ ಮುಗಿಯುವವರೆಗೂ ಚಾರಣಕ್ಕೆ ಅವಕಾಶ ನೀಡಬೇಕಾ ಅಥವಾ ಬೇಡವಾ ಎಂಬುದನ್ನು ನಿರ್ಧರಿಸಲು ಜಿÇÉೆಯ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ರಾಜ್ಯ ಅರಣ್ಯ ಪಡೆ ಅಧಿಕಾರ ನೀಡಿದೆ. ಅನಧಿಕೃತ ಚಾರಣ ನಡೆಸುವವರನ್ನು ಪತ್ತೆ ಮಾಡಲು ಬೇಹುಗಾರಿಕೆ ಪಡೆ ರಚಿಸಲು ಅರಣ್ಯ ಕಾರ್ಯಪಡೆ ಆದೇಶಿಸಿದೆ. ಚಿಕ್ಕಬಳ್ಳಾಪುರದ ಸ್ಕಂದರಿಗಿ ಬೆಟ್ಟದ ಚಾರಣಕ್ಕೆ ನಾವು ನಿಷೇಧ ಹೇರಿಲ್ಲ. ಪರಿಸ್ಥಿತಿ ನೋಡಿಕೊಂಡು ಕ್ರಮ ವಹಿಸುತ್ತೇವೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಡಿ.ಮಂಜುನಾಥ ತಿಳಿಸಿದ್ದಾರೆ.

ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.