ವಿಶೇಷ ಚೇತನರ ಕೌಶಲ್ಯಾಭಿವೃದ್ಧಿಗೆ ಕ್ರಮ

ಚಿಲಿಪಿಲಿ ಮೇಳ, ಬೇಸಿಗೆ ಶಿಬಿರ ಸಮಾರೋಪದಲ್ಲಿ ನಿರ್ದೇಶಕ ವೆಂಕಟರಾಮ್‌

Team Udayavani, May 20, 2019, 1:06 PM IST

kolar-tdy-7..

ಕೋಲಾರ ಬುದ್ಧಿಮಾಂದ್ಯರ ವಸತಿ ಶಾಲೆಯಲ್ಲಿ ನಡೆದ ಚಿಲಿಪಿಲಿ ಮೇಳ, ಬೇಸಿಗೆ ಶಿಬಿರ ಸಮಾರೋ ಪದಲ್ಲಿ ವಿಶೇಷ ಚೇತನರ ಸಬಲೀಕರಣ ಇಲಾಖೆ ಉಪನಿರ್ದೇಶಕ ವೆಂಕಟರಾಂ ಮಾತನಾಡಿದರು.

ಕೋಲಾರ: ವಿಶೇಷ ಚೇತನ ಮಕ್ಕಳಲ್ಲಿ ಕೌಶಲ್ಯಾಭಿವೃದ್ಧಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ತಿಂಗಳಿಗೆ ಒಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ವಿಶೇಷ ಚೇತನರ ಸಬಲೀಕರಣ ಇಲಾಖೆ ಉಪನಿರ್ದೇಶಕ ವೆಂಕಟರಾಮ್‌ ಹೇಳಿದರು.

ನಗರ ಹೊರವಲಯದ ಅಂತರಗಂಗಾ ಬುದ್ಧಿಮಾಂದ್ಯರ ವಸತಿ ಶಾಲೆಯಲ್ಲಿ ಇಂಚರ ಸಂಸ್ಥೆ ಹಾಗೂ ಬೆಸ್ಟ್‌ ಗ್ರಾಮೀಣಾಭಿವೃದ್ಧಿ ಮತ್ತು ತರಬೇತಿ ಸಂಸ್ಥೆ ಹಮ್ಮಿಕೊಂಡಿದ್ದ ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗಾಗಿ ಚಿಲಿಪಿಲಿ ಮೇಳ, ಬೇಸಿಗೆ ಶಿಬಿರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಮಾತಿಗಿಂತ ಕೆಲಸದ ಕಡೆಗೆ ಆಸಕ್ತಿವಹಿಸುವುದು ಹೆಚ್ಚು ಉತ್ತಮ. ಹೀಗಾಗಿ ಪ್ರತಿಯೊಬ್ಬರೂ ಸುಮ್ಮನೆ ಕೂರದೆ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಅಂಗವಿಕಲರು ಎಂದು ಕೊರಗಿಕೊಂಡಿರುವ ಅವಶ್ಯಕತೆಯಿಲ್ಲ. ನಿಮಗೆ ಸಹಕಾರಿಯಾಗಿ ಇಲಾಖೆಯು ಎಂದಿಗೂ ಜತೆಯಲ್ಲಿದ್ದು, ಕೌಶಲ್ಯಾಭಿವೃದ್ಧಿಗೆ ಬೇಕಾದ ಮಾರ್ಗದರ್ಶನ ನೀಡಲು ಸೂಕ್ತ ಕಾರ್ಯಕ್ರಮ ಪ್ರತಿ ತಿಂಗಳು ನಡೆಸಲಾಗುವುದು. ತರಬೇತಿ ಮೂಲಕ ಉತ್ತಮ ಸಂಪನ್ಮೂಲ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಇಂಚರ ಸಂಸ್ಥೆಯ ನಾರಾಯಣಸ್ವಾಮಿ, ಎಲ್ಲ ಸರ್ಕಾರಗಳು, ಜನಪ್ರತಿನಿಧಿಗಳು ಮಕ್ಕಳ ಬಗ್ಗೆ ಮಾತನಾಡುತ್ತಾರೆ. ಆದರೆ, ಅವರಿಗಾಗಿ ಪ್ರತ್ಯೇಕ ಬಜೆಟ್ ಇದುವರೆಗೂ ನೀಡದಿರುವುದು ವಿಷಾಧನೀಯ. ಮಕ್ಕಳಿಗಾಗಿ ವಿಶೇಷ ಪ್ಯಾಕೇಜ್‌ ನೀಡಿ ಇಂತಹ ಪ್ರಾಯೋಗಿಕ ಕಾರ್ಯಕ್ರಮ ಹೆಚ್ಚಾಗಿ ಹಮ್ಮಿಕೊಂಡಿದ್ದೇ ಆದಲ್ಲಿ ಪ್ರಯೋಜನಕಾರಿಯಾಗಿ ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂದು ವಿವರಿಸಿದರು.

ನೀವೂ ಸೇರಿಕೊಳ್ಳುತ್ತೀರಿ: ಅಧ್ಯಕ್ಷತೆವಹಿಸಿ ಮಾತನಾಡಿದ ಮನ್ವಂತರ ಪ್ರಕಾಶನದ ಅಧ್ಯಕ್ಷ ಅನಂತರಾಮ್‌, ದೈಹಿಕ-ಮಾನಸಿಕವಾಗಿ ಆರೋಗ್ಯದಿಂದ ಇರುವವರ ಸಾಧನೆಗಿಂತ ವಿಶೇಷ ಚೇತನರ ಸಾಧನೆಯು ಬೆಲೆಕಟ್ಟಲಾರದ್ದಾಗಿದೆ. ನಿಮ್ಮ ಮನಸ್ಸಿನಲ್ಲಿ ಅಡಗಿರುವ ಪ್ರತಿಭೆಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿದ್ದೇ ಆದಲ್ಲಿ ಭಾರತದ ಉತ್ತಮ ಪ್ರಜೆಗಳ ಸಾಲಿನಲ್ಲಿ ನೀವೂ ಸೇರಿಕೊಳ್ಳುತ್ತೀರಿ ಎಂದು ಹೇಳಿದರು.

ಅಳಿಲು ಸೇವೆ: ಮನುಷ್ಯರನ್ನು ಹೀಗೆ ಇರಬೇಕು ಎಂದು ದೇವರು ಸೃಷ್ಟಿಸಿಲ್ಲ. ಕಾರಣಾಂತರಗಳಿಂದಾಗಿ ವಿಶೇಷ ಚೇತನರಾಗಿದ್ದೀರಿ, ಅದಕ್ಕೆ ಸವಾಲಾಗಿ ನೀವು ಬೆಳೆಯಬೇಕೇ ಹೊರತು, ಕೊರಗಿ ಕೂರಬಾರದು ಎಂದ ಅವರು, ನಿಮಗೆ ಬೇಕಾದ ಅಗತ್ಯ ನೆರವನ್ನು ನಮ್ಮ ಸಂಸ್ಥೆಯಿಂದ ಅಳಿಲುಸೇವೆಯಂತೆ ನೀಡುವುದಾಗಿ ಭರವಸೆ ನೀಡಿದರು. ಬೆಸ್ಟ್‌ ಗ್ರಾಮೀಣಾಭಿವೃದ್ಧಿ ಮತ್ತು ತರಬೇತಿ ಸಂಸ್ಥೆಯ ಅಧ್ಯಕ್ಷೆ ಅನುರಾಧಾ ಮಾತನಾಡಿ, ಪ್ರತಿ ತಿಂಗಳೂ ಒಂದು ಕಾರ್ಯಕ್ರಮವನ್ನು ನಡೆಸಲು ಸಂಸ್ಥೆಯು ಸಿದ್ಧವಿದ್ದು, ಇಲಾಖೆಯಿಂದ ಸಹಕರಿಸಬೇಕು ಎಂದು ಉಪನಿರ್ದೇಶಕರಿಗೆ ಮನವಿ ಮಾಡಿದರು. ಅಂತರಗಂಗಾ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಶಂಕರ್‌, ಬೆಸ್ಟ್‌ ಗ್ರಾಮೀಣಾಭಿವೃದ್ಧಿ ಮತ್ತು ತರಬೇತಿ ಸಂಸ್ಥೆಯ ಶಮ್ಗರ್‌, ಸಿ.ವಿ.ನಾಗರಾಜ್‌, ಮಹಿಮಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.