ಗ್ರಾಮಗಳಲ್ಲಿನ ಸಮಸ್ಯೆ ಬಗೆಹರಿಸಿ
Team Udayavani, Oct 1, 2019, 5:28 PM IST
ಕೋಲಾರ: ತಾಲೂಕಿನ ತೊರದೇವಂಡಹಳ್ಳಿ ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿನ ಸಮಸ್ಯೆ ಪರಿಹಾರಕ್ಕೆ ಒತ್ತು ನೀಡುವಂತೆ ಕರ್ನಾಟಕ ಪ್ರಾಂತ ರೈತ ಸಂಘ ಗ್ರಾಪಂ ಮುಂದೆ ಧರಣಿ ನಡೆಸಿತು.
ಕುಡಿಯುವ ನೀರು, ಚರಂಡಿ, ರಸ್ತೆ, ಇಸ್ವತ್ತು, ಬೀದಿದೀಪ, ಮನೆ, ನಿವೇಶನ ಹಾಗೂ ಸ್ವತ್ಛತೆ ಕೈಗೊಳ್ಳುತ್ತಿಲ್ಲ, ಕೇಂದ್ರ, ರಾಜ್ಯದ ಯೋಜನೆಗಳು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಪಿಡಿಒ ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ, ನಿತ್ಯ ಕಚೇರಿಗೆ ಅಲೆದಾಡುವಂತಾಗಿದೆ. ವಿನಾಕಾರಣ ಕಾಲಹರಣ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಕೆಪಿಆರ್ಎಸ್ ಜಿಲ್ಲಾ ಕಾರ್ಯದರ್ಶಿ ಟಿ.ಎಂ.ವೆಂಕಟೇಶ್ ಮಾತನಾಡಿ, ಗ್ರಾಪಂ ವ್ಯಾಪ್ತಿಯ ನಿವೇಶನ ರಹಿತರನ್ನು ಗುರುತಿಸಿ ಮನೆ ಕಟ್ಟಿಕೊಳ್ಳಲು ಜಾಗ ನೀಡಬೇಕು. ಎಸ್ಸಿ, ಎಸ್ಟಿಗೆ ಮೀಸಲಾದ ಹಣವನ್ನು ಪಾರದರ್ಶಕವಾಗಿ ಉಪಯೋಗಿಸಬೇಕು. ಬಹುತೇಕ ಗ್ರಾಮಗಳಲ್ಲಿನ ಚರಂಡಿ ದುರಸ್ತಿ ಮಾಡಿ ವರ್ಷಗಳೇ ಕಳೆದಿವೆ. ಇದರಿಂದಾಗಿ ಸೊಳ್ಳೆಗಳು ಹೆಚ್ಚಾಗಿ ಮಲೇರಿಯಾ ಮತ್ತಿತರರ ಮಾರಕ ರೋಗಗಳು ಕಾಣಿಸಿಕೊಳ್ಳುತ್ತಿವೆ ಎಂದರು. ಕೆಪಿಆರ್ಎಸ್ ತಾಲೂಕು ಅಧ್ಯಕ್ಷ ಎನ್.ಎನ್.ಶ್ರೀರಾಮ್ ಮಾತನಾಡಿ, ಉದ್ಯೋಗ ಖಾತ್ರಿಯಲ್ಲಿ ವೈಯಕ್ತಿಕ ಕೆಲಸಗಳು ಮಾಡಿದವರಿಗೆ ಬಿಲ್ ನೀಡಲು ತುಂಬಾ ವಿಳಂಬವಾಗುತ್ತಿದೆ ಎಂದರು.
ಕೆಪಿಆರ್ಎಸ್ ತಾಲೂಕು ಗೌರವಾಧ್ಯಕ್ಷ ಕುರ್ಕಿ ದೇವರಾಜ್, ತಾಲೂಕು ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಮುಖಂಡರಾದ ಎಸ್.ರಮೇಶ್, ಗಂಗಮ್ಮ, ರಾಮರೆಡ್ಡಿ, ಆಲಹಳ್ಳಿ ವೆಂಕಟೇಶಪ್ಪ, ಎಚ್.ಎಂ.ಆಂಜಿನಪ್ಪ, ದಸ್ತ್ಗಿರಿ, ಸುಶೀಲಮ್ಮ, ಸಿ.ನಾಗರಾಜ್ ಭಾಗವಹಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು