ಜಿಲ್ಲೆಯ ಕೆಲ ಶಾಸಕರು ಬಿಜೆಪಿ ಸೇರ್ತಾರೆ
ಬಿಎಸ್ವೈ ಸಿಎಂ ಮಾಡಲು ಸಹಕಾರ ನೀಡುವ ಸೂಚನೆ ಸಿಕ್ಕಿದೆ: ಸಂಸದ ಮುನಿಸ್ವಾಮಿ
Team Udayavani, May 25, 2019, 4:12 PM IST
ಕೋಲಾರ: ಲೋಕಸಭಾ ಚುನಾವಣೆಯ ವಿಜಯೋತ್ಸವದ ಸಂಭ್ರಮದಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಜಿಲ್ಲೆಯ ಕೆಲವು ಶಾಸಕರು ಸಹಕಾರ ನೀಡುವ ಶುಭ ಸೂಚನೆ ಸಿಕ್ಕಿದೆ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನಗಳಿಸಲಿದ್ದು, ಬಿ.ಎಸ್.ಯಡಿಯೂರಪ್ಪ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾಗಿದೆ. ಮೈತ್ರಿ ಸರ್ಕಾರದಲ್ಲಿನ ವೈಫಲ್ಯದಿಂದ ಕೆಲವು ಶಾಸಕರು ಬಿಜೆಪಿಗೆ ಬರುವುದು ನಿಶ್ಚಿತ ಎಂದು ಹೇಳಿದರು.
8 ವಿಧಾನಸಭಾ ಕ್ಷೇತ್ರಗಳನ್ನು ಕಾಂಗ್ರೆಸ್ ಮುಕ್ತವನ್ನಾಗಿ ಮಾಡುವುದೇ ನನ್ನ ಗುರಿ, ಇದಕ್ಕೆ ಕಾರ್ಯಕರ್ತರ ಸಹಕಾರ ನೀಡಬೇಕು ಎಂದು ಕೋರಿದ ಅವರು, ತಮ್ಮ ಗೆಲುವಿಗೆ ಸಹಕಾರ ನೀಡಿದ ವಿವಿಧ ಪಕ್ಷಗಳ ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದರು.
ಕೃತಜ್ಞತೆ: 8 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರನ್ನು ಮಾಡುವ ಮೂಲಕ ಕಾಂಗ್ರೆಸ್ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಮೂಲಕ ಶಾಪ ವಿಮೋಚನೆ ಗೊಳಿಸಬೇಕು. ಇದಕ್ಕೆ ಅವಕಾಶ ಕಲ್ಪಿಸಿರುವ ನಿಮಗೆಲ್ಲ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.
ಬಿಜೆಪಿ ಬಾಗಿಲು ತಟ್ಟುತ್ತಿದ್ದಾರೆ: ರಾಜ್ಯದಲ್ಲಿ ಮೈತ್ರಿ ಸರ್ಕಾರ ಉರುಳುವ ಸೂಚನೆಗಳು ಹೆಚ್ಚಾಗಿ ಕಾಣುತ್ತಿದ್ದು, ಈಗಾಗಲೇ ಶಾಸಕರೇ ಬಿಜೆಪಿ ಬಾಗಿಲು ತಟ್ಟುತ್ತಿದ್ದಾರೆ. ಇನ್ನು ಕೆಲವರು ಪ್ರಯತ್ನದಲ್ಲಿದ್ದಾರೆ. ಅದರೆ ಅವಕಾಶವಾದಿಗಳಿಗೆ ನಮ್ಮಲ್ಲಿ ಜಾಗವಿಲ್ಲ ಎಂದು ಬಿಜೆಪಿ ವರಿಷ್ಠರು ತಿಳಿಸಿದ್ದಾರೆ. ನಮ್ಮ ಆಡಳಿತದ ಅವಧಿಯಲ್ಲಿ ಕೆ.ಎಚ್.ಮುನಿಯಪ್ಪ ಅವರ ರೀತಿ ಕೆಲಸ ಮಾಡದೆ ಇರುವವರನ್ನು ದೂರ ಇಡಲಾಗುತ್ತದೆ ಎಂದು ಹೇಳಿದರು.
ವಿಶ್ರಾಂತಿ ನೀಡಿದ್ದಾರೆ: ಕ್ಷೇತ್ರದ ಜನರ ಮೇಲೆ ನನಗೆ ಮೊದಲಿಂದಲೂ ವಿಶ್ವಾಸವಿತ್ತು, ಅವರು ಎಂದಿಗೂ ಹಣ ಆಮಿಷಗಳಿಗೆ ಆಸೆ ಪಟ್ಟವರಲ್ಲ ಎಂಬುವುದು ನನಗೆ ತಿಳಿದಿದೆ. ಕೆ.ಎಚ್.ಮುನಿಯಪ್ಪ ಕಳೆದ 28 ವರ್ಷಗಳಿಂದ ಸಂಸದರಾಗಿ ಯಾವುದೇ ಅಭಿವೃದ್ಧಿ ಮಾಡದೆ ಅನ್ಯಾಯ ಮಾಡಿದ್ದರು. ಜನತೆ ಬೇಸತ್ತು ಈ ಚುನಾವಣೆಯಲ್ಲಿ ಅವರಿಗೆ ವಿಶ್ರಾಂತಿ ನೀಡಿದ್ದಾರೆ ಎಂದು ಹೇಳಿದರು.
ಸಾಮೂಹಿಕ ಶ್ರಮ: ಕೆ.ಎಚ್.ಮುನಿಯಪ್ಪ ವಿರುದ್ಧ ಶಾಸಕ ಕೆ.ಶ್ರೀನಿವಾಸಗೌಡ, ಮಾಜಿ ಶಾಸಕರಾದ ಕೊತ್ತೂರು ಮಂಜುನಾಥ್, ಡಾ.ಸುಧಾಕರ್, ಮಂಜುನಾಥ್ಗೌಡ ಸೇರಿದಂತೆ ಅನೇಕರು ಪಕ್ಷಭೇದ ಮರೆತು ಒಂದು ವೇದಿಕೆಯನ್ನೇ ಸಿದ್ಧಪಡಿಸಿದ್ದರು. ಜತೆಗೆ ಬಿಜೆಪಿ ಮುಖಂಡರು ಕಾರ್ಯಕರ್ತರು ಎಲ್ಲರೂ ಸೇರಿ ಸಾಮೂಹಿಕವಾಗಿ ಶ್ರಮಿಸಿದ್ದರಿಂದ ನಾನು 2 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲವು ಸಾಧಿಸಲು ಸಾಧ್ಯವಾಯಿತು ಎಂದು ತಿಳಿಸಿದರು.
ಬಹುದಿನಗಳ ಕನಸು ನನಸು: ಮಾಜಿ ಶಾಸಕ ಎ.ನಾಗರಾಜ್ ಮಾತನಾಡಿ, ಬಿಜೆಪಿಯ ಬಹುದಿನದ ಕನಸು ನನಸಾಗಿದೆ. ನಮ್ಮ ಈ ಖುಷಿಯನ್ನು ಮುಂದಿನ 25ವರ್ಷಗಳವರೆಗೆ ಕಾಪಾಡಿ ಕೊಳ್ಳಬೇಕು. ಜನರ ವಿಶ್ವಾಸ ಪಡೆಯುವಂತ ಜನಪರವಾದ ಕೆಲಸಗಳನ್ನು ಮಾಡಬೇಕು. ಕೇಂದ್ರದಲ್ಲಿ ಕಳೆದ 5 ವರ್ಷ ನಮ್ಮದೆ ಸರ್ಕಾರ ಇದ್ದರೂ ನಾಮನಿರ್ದೆಶನಗಳು ಮಾಡದೆ ಯಾರಿಗೂ ಯಾವೂದೇ ಸ್ಥಾನ ಮಾನ ಸಿಗಲಿಲ್ಲ ಅದನ್ನು ಕೇಳುವಂತವವರು ಇರಲಿಲ್ಲ ಈಗಾ ಮುನಿಸ್ವಾಮಿಯವನ್ನು ಆಯ್ಕೆ ಮಾಡಿದ್ದು ಅವರು ನಾಮನಿರ್ದೇಶನಗಳನ್ನು ಮಾಡಲು ಕೇಂದ್ರದಲ್ಲಿ ಒತ್ತಾಯಿಸುವಂತಾಗಬೇಕು. ಕಷ್ಟ ಪಟ್ಟು ಶ್ರಮಿಸಿದ ಕಾರ್ಯಕರ್ತರಿಗೆ ಸ್ಥಾನಮಾನ ಕೊಡಿಸಬೇಕು ಎಂದು ಸಲಹೆ ನೀಡಿದರು.
ಬಹುತೇಕ ಖಚಿತ: ಜಿಲ್ಲಾಧ್ಯಕ್ಷ ಬಿ.ಪಿ.ವೆಂಕಟಮುನಿಯಪ್ಪ ಮಾತನಾಡಿ, ಜಿಲ್ಲೆಯ ಬಹುದಿನದ ಕನಸು ಮೋದಿಯವರ ಆಡಳಿತದ 2019ರಲ್ಲಿ ನನಸಾಗಿದೆ. ಮೋದಿ ಬಿಜೆಪಿಯ ಒಂದು ಶಕ್ತಿಯಾಗಿ ಹೊರಹೊಮ್ಮಿರುವ ಹಿನ್ನೆಲೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಆಡಳಿತ ಚುಕ್ಕಾಣಿ ಹಿಡಿಯುವುದಕ್ಕೆ ಬಹುಮತ ದೊರೆತಿದೆ ಎಂದು ಹೇಳಿದರು.
ಮುಖ್ಯವಾಹಿನಿ ತರುತ್ತೇವೆ: ಜಿಪಂ ಮಾಜಿ ಸದಸ್ಯ ಎಸ್. ಬಿ.ಮುನಿವೆಂಕಟಪ್ಪ, ಜಿಲ್ಲೆಯಲ್ಲಿ ಹೊಸ ಇತಿಹಾಸ ನಿರ್ಮಾಣ ವಾಗಿದೆ. ಮುಂದಿನ ಚುನಾವಣೆಗಳಲ್ಲಿ ಇದೇ ರೀತಿ ಕಾರ್ಯ ನಿರ್ವಹಿಸುವ ಮೂಲಕ ಚೈತನ್ಯ ತುಂಬುವಂತಾಗಬೇಕು ಬಡವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಜವಾಬ್ದಾರಿ ಸಂಸದರಾರಬೇಕು ಎಂದು ಹೇಳಿದರು.
ಪಕ್ಷದ ಜಿಲ್ಲಾ ಪ್ರಭಾರಿ ಪಾವಗಡ ಕೃಷ್ಣರೆಡ್ಡಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಾಸುದೇವರೆಡ್ಡಿ, ಗ್ರಾಮಾಂತರ ಘಕಟ ಜಿಲ್ಲಾಧ್ಯಕ್ಷ , ಬೈಚಪ್ಪ, ನಗರದ ಘಟಕದ ಅಧ್ಯಕ್ಷ ಮಾಗೇರಿ ನಾರಾಯಣಸ್ವಾಮಿ, ವಕ್ತಾರರಾದ ವಿಜಯಕುಮಾರ್, ಮಹೇಶ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ