ಮೆಡಿಕಲ್ ಕಾಲೇಜಿಗೆ ಶೀಘ್ರ 100 ಕೋಟಿ ಅನುದಾನ

ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ: ಅನರ್ಹ ಶಾಸಕ ಸುಧಾಕರ್‌ ಹೇಳಿಕೆ

Team Udayavani, Aug 16, 2019, 2:56 PM IST

kolar-tdy-1

ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿಯಲ್ಲಿ ರಾಜೀವ್‌ ಗಾಂಧಿ ಸೇವಾ ಕೇಂದ್ರದ ಉದ್ಘಾಟನೆ ಕಾರ್ಯಕ್ರಮದಲ್ಲಿ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಕೆ.ಸುಧಾಕರ್‌ ಮಾತನಾಡಿದರು.

ಚಿಕ್ಕಬಳ್ಳಾಪುರ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಸ್ಪಂದಿಸುವ ವಿಶ್ವಾಸ ಇದ್ದು, ರಾಜ್ಯದಲ್ಲಿ ನೂತನ ಸಚಿವ ಸಂಪುಟ ರಚನೆಯಾದ ಮೊದಲ ಸಂಪುಟ ಸಭೆಯಲ್ಲಿ ಜಿಲ್ಲೆಯ ವೈದ್ಯ ಕೀಯ ಕಾಲೇಜು ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿ ಯೂರಪ್ಪ 100 ಕೋಟಿ ಅನುದಾನ ನೀಡುವ ಭರವಸೆ ನೀಡಿದ್ದಾರೆ ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಕೆ.ಸುಧಾಕರ್‌ ತಿಳಿಸಿದರು.

ತಾಲೂಕಿನ ಅಗಲಗುರ್ಕಿಯಲ್ಲಿ ಗುರುವಾರ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ರಾಜೀವ್‌ಗಾಂಧಿ ಸೇವಾ ಕೇಂದ್ರದ ನೂತನ ಕಟ್ಟಡ ಉದ್ಘಾ ಟಿಸಿ ಮಾತನಾಡಿದ ಅವರು, ಸಿದ್ದ ರಾಮಯ್ಯ ಸರ್ಕಾರದಲ್ಲಿ ಮಂಜೂರಾದ ಮೆಡಿಕಲ್ ಕಾಲೇಜಿಗೆ ಹಿಂದಿನ ಮೈತ್ರಿ ಸರ್ಕಾರದಲ್ಲಿ ಬಿಡಿಗಾಸು ಕೂಡ ಒದಗಿಸಲಿಲ್ಲ ಎಂದು ಸುಧಾಕರ್‌ ಅಸಮಾದಾನ ವ್ಯಕ್ತಪಡಿಸಿದರು.

ಸಿಎಂ ಭರವಸೆ: ಈ ಭಾಗದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಮೆಡಿಕಲ್ ಕಾಲೇಜು ಆಗಬೇಕಿದ್ದು, ಇದಕ್ಕಾಗಿ ಸಿಎಂ ಯಡಿಯೂರಪ್ಪ ಮೊದಲ ಸಂಪುಟ ಸಭೆ ಯಲ್ಲಿ ನಿರ್ಧರಿಸಿ 100 ಕೋಟಿ ಅನು ದಾನ ನೀಡುವುದಾಗಿ ಭರವಸೆ ನೀಡಿ ದ್ದಾರೆ ಎಂದು ತಿಳಿಸಿದರು.

ನೀರಿಲ್ಲದೇ ಕೈಗಾರಿಕೆ ಬರಲ್ಲ: ಸಂಸದ ಬಿ.ಎನ್‌.ಬಚ್ಚೇಗೌಡ ಮಾತನಾಡಿ, ಈ ಭಾಗಕ್ಕೆ ಶಾಶ್ವತ ನೀರಾವರಿ ಕಲ್ಪಿಸ ಬೇಕೆಂಬುದು ಜನರ ಒತ್ತಾಸೆಯಾಗಿದೆ. ಅದಕ್ಕೆ ಪೂರಕವಾಗಿ ನಾವು ಕೂಡ ಮುಂದಿನ ದಿನಗಳಲ್ಲಿ ಜನರ ಬೇಡಿಕೆ ಯಾಗಿರುವ ನೀರಾವರಿ ಯೋಜನೆ ಗಳನ್ನು ಜಾರಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ.

ಹೇಮಾವತಿ ನೀರು ಈ ಭಾಗಕ್ಕೆ ತರ ಬೇಕೆಂಬುದು ನನ್ನ ಬಯಕೆ. ಸರ್ಕಾರದ ಮೇಲೆ ಒತ್ತಡ ತರುವ ಕೆಲಸ ಮಾಡು ತ್ತೇವೆ. ನೀರಾವರಿ ಇಲ್ಲದೇ ಈ ಭಾಗಕ್ಕೆ ಯಾವುದೇ ಕೈಗಾರಿಕೆಗಳು ಬರುವುದಿಲ್ಲ. ಕೈಗಾರಿಕೆಗಳು ಬಂದರೆ ಮಾತ್ರ ಈ ಭಾಗದ ಯುವಕರಿಗೆ ಉದ್ಯೋಗಾ ವಕಾಶಗಳು ಸಿಗುತ್ತವೆ.

ರೇಷ್ಮ ಬೆಳೆಗಾರರ ಪರ ಧ್ವನಿ: ಹಾಲು ಹಾಗೂ ರೇಷ್ಮೆ ಉತ್ಪಾದನೆಗೆ ಹೆಸರಾಗಿ ರುವ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ರೈತರನ್ನು ಉಳಿಸುವ ಕೆಲಸ ಮಾಡುತ್ತೇವೆ. ಕೇಂದ್ರ ಸರ್ಕಾರ ನನ್ನನ್ನು ಕೇಂದ್ರೀಯ ರೇಷ್ಮೆ ಮಂಡಳಿಗೆ ಸದಸ್ಯರ ನ್ನಾಗಿ ಮಾಡಿದೆ. ಅಲ್ಲಿ ಜಿಲ್ಲೆಯ ರೇಷ್ಮ ಬೆಳೆಗಾರರ ಪರ ಧ್ವನಿ ಎತ್ತುತ್ತೇನೆ ಎಂದರು.

ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಪಿ.ಎನ್‌.ಕೇಶವರೆಡ್ಡಿ, ತಾಲೂಕು ಪಂಚಾಯ್ತಿ ಅಧ್ಯಕ್ಷ ಬಿ.ಎಂ.ರಾಮುಸ್ವಾಮಿ, ಕೋಚಿಮುಲ್ ಮಾಜಿ ನಿರ್ದೇಶಕ ಕೆ.ವಿ.ನಾಗರಾಜ್‌, ಜಿಲ್ಲಾ ಪಂಚಾಯ್ತಿ ಸದಸ್ಯ ಕೆ.ಸಿ.ರಾಜಾಕಾಂತ್‌, ಗ್ರಾಪಂ ಅಧ್ಯಕ್ಷೆ ಸ್ವಾತಿ, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ನಾಗೇಶ್‌, ತಾಲೂಕು ಪಂಚಾಯ್ತಿಸದಸ್ಯರಾದ ಸತೀಶ್‌, ಅವಲಗುರ್ಕಿ ರಾಜಣ್ಣ, ಶ್ರೀನಿವಾಸ್‌, ಮಂಜುನಾಥ, ಜಯರಾಮ್‌, ಪಾಪಿ ರೆಡ್ಡಿ ಇದ್ದರು.

ವೇದಿಕೆ ಹಂಚಿಕೊಂಡ ಸುಧಾಕರ್‌,ಬಚ್ಚೇಗೌಡ:

ಕಳೆದ ಲೋಕಸಭಾ ಚುನಾವಣೆ ಮುಗಿದ ಬಳಿಕ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿಯಿಂದ ಆಯ್ಕೆಗೊಂಡಿರುವ ಸಂಸದ ಬಿ.ಎನ್‌.ಬಚ್ಚೇಗೌಡ ಜೊತೆ ಕಾಂಗ್ರೆಸ್‌ ಪಕ್ಷದ ಅನರ್ಹ ಶಾಸಕರಾಗಿರುವ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಕೆ.ಸುಧಾಕರ್‌ ಕಾಣಿಸಿಕೊಂಡು ಚರ್ಚೆಗೆ ಗ್ರಾಸವಾದರು. ನಾವು ಇಬ್ಬರು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿ ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡುತ್ತೇವೆ ಎಂದು ಇಬ್ಬರು ನಾಯಕರು ಕಾರ್ಯಕ್ರಮದಲ್ಲಿ ನೆರೆದಿದ್ದ ಜನತೆಗೆ ಅಭಯ ನೀಡಿದರು.

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.