ಚಿಕಿತ್ಸೆ ನೀಡದ ವೈದ್ಯರ ವಿರುದ್ಧ ಕಿಡಿ

ಸೂಕ್ತ ಕ್ರಮಕ್ಕೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ, ಮನವಿ ಸಲ್ಲಿಕೆ

Team Udayavani, May 12, 2019, 10:50 AM IST

KOLAR-TDY-3..

ಮುಳಬಾಗಿಲು ಸರ್ಕಾರಿ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷ್ಯ ಖಂಡಿಸಿ ರೈತ ಸಂಘದ ಕಾರ್ಯಕರ್ತರು ಆಡಳಿತ ವೈದ್ಯಾಧಿಕಾರಿ ರಾಜೇಶ್‌ಬಾಬುಗೆ ಮನವಿ ಸಲ್ಲಿಸಿದರು.

ಮುಳಬಾಗಿಲು: ನಗರದ ಸರ್ಕಾರಿ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ. ಖಾಸಗಿ ನರ್ಸಿಂಗ್‌ ಹೋಂಗೆ ಹೋಗುವಂತೆ ಒತ್ತಡ ಹಾಕುತ್ತಾರೆ. ಹಳ್ಳಿಗಳಲ್ಲಿ ತಲೆ ಎತ್ತಿರುವ ನಕಲಿ ಕ್ಲಿನಿಕ್‌ಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ರೈತ ಸಂಘ ಪ್ರತಿಭಟನೆ ನಡೆಸಿ, ಆಡಳಿತ ವೈದ್ಯಾಧಿಕಾರಿ ರಾಜೇಶ್‌ಬಾಬುಗೆ ಮನವಿ ಸಲ್ಲಿಸಿತು.

ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಸರ್ಕಾರಿ ಆಸ್ಪತ್ರೆಗೆ ಮೂಲ ಸೌಲಭ್ಯಗಳಿಲ್ಲ, ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಉತ್ತಮ ಚಿಕಿತ್ಸೆ ದೊರೆಯುತ್ತಿಲ್ಲ. ವೈದ್ಯರು ಮತ್ತು ಸಿಬ್ಬಂದಿ ಖಾಸಗಿ ನರ್ಸಿಂಗ್‌ ಹೋಂಗಳಿಗೆ ದಾಖಲಾಗುವಂತೆ ಒತ್ತಾಯಿಸುತ್ತಾರೆ, ಸರ್ಕಾರ ಕೋಟ್ಯಂತರ ರೂ. ಹಣ ಬಿಡುಗಡೆ ಮಾಡಿ, ಯಂತ್ರೋಪಕರಣ ನೀಡಿದ್ದರೂ ಸಮರ್ಪಕವಾಗಿ ಉಪಯೋಗಿಸುವಲ್ಲಿ ಆಡಳಿತ ಮಂಡಳಿ ವಿಫ‌ಲವಾಗಿದೆ ಎಂದು ಆರೋಪಿಸಿದರು.

ಆಸ್ಪತ್ರೆ ಮುಂಭಾಗ ವಾಹನ ನಿಲ್ಲಿಸಲು ಪಾರ್ಕಿಂಗ್‌ ವ್ಯವಸ್ಥೆಯಿಲ್ಲ. ಆಸ್ಪತ್ರೆಯಲ್ಲಿ ಅಗತ್ಯ ಸಿಬ್ಬಂದಿ ಇಲ್ಲ, ಫೈರಿಂಗ್‌ ಸಿಲೆಂಡರ್‌ಗಳನ್ನು ರೀಫಿಲ್ ಮಾಡಿಸದೇ ಮೂಲೆಗೆ ಎಸೆಯಲಾಗಿದೆ. ಮಧುಮೇಹ, ಬಿ.ಪಿ ಮಾತ್ರೆಗಳು ಔಷಧಿಗೆ ತಕ್ಕಷ್ಟು ಪೂರೈಕೆಯಾಗುತ್ತಿಲ್ಲ. ಸ್ಕ್ಯಾನಿಂಗ್‌, ಇಸಿಜಿ ಖಾಸಗಿ ಆಸ್ಪತ್ರೆಗಳಲ್ಲಿ ಮಾಡಿಸಿಕೊಳ್ಳಬೇಕಾಗಿದೆ. ಆಸ್ಪತ್ರೆಯಲ್ಲಿ ನೀರಿನ ಪಿಲ್ಟರ್‌ ರಿಪೇರಿ ಮಾಡಿಸಿ, ಹೆರಿಗೆಗೆ ಬರುವವರ ಬಳಿ ಯಾವುದೇ ಕಾರಣಕ್ಕೂ ಹಣಕ್ಕೆ ಒತ್ತಾಯ ಮಾಡಬಾರದು ಎಂದು ಆಗ್ರಹಿಸಿದರು.

ತಾಲೂಕು ಅಧ್ಯಕ್ಷ ಫಾರುಕ್‌ಪಾಷ ಮಾತನಾಡಿ, ಆಸ್ಪತ್ರೆಗಳಲ್ಲಿ ಕೆಲವು ವೈದ್ಯರು ಬಡರೋಗಿಗಳಿಗೆ ಚಿಕಿತ್ಸೆ ನೀಡಲು ಮಧ್ಯವರ್ತಿಗಳನ್ನು ನೇಮಕ ಮಾಡಿಕೊಂಡಿರುವುದನ್ನು ಕೂಡಲೇ ನಿಲ್ಲಿಸಬೇಕು. ರೋಗಿಗಳಿಗೆ ಇಂಜೆಕ್ಷನ್‌ ಹಾಕುವುದರಿಂದ ಹಿಡಿದು ಮಾತ್ರೆಗಳು ನೀಡುವವರೆಗೂ ನಡೆಯುತ್ತಿರುವ ಲಂಚದಾವಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಗ್ರಾಮೀಣ ಆಸ್ಪತ್ರೆಗಳಲ್ಲಿ 24 ಗಂಟೆ ವೈದ್ಯರು, ಸಿಬ್ಬಂದಿ ವಾಸವಿರಬೇಕು, ಖಾಸಗಿ ಮಡಿಕಲ್ಗಳಿಗೆ ಚೀಟಿ ಬರೆದುಕೊಡುವುದನ್ನು ನಿಲ್ಲಿಸಬೇಕು. ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಮಾಡುವುದನ್ನು ತಡೆಯಬೇಕು. ಹಾವು, ನಾಯಿ ಕಡಿತದ ಚುಚ್ಚುಮದ್ದನ್ನು ಎಲ್ಲಾ ಆಸ್ಪತ್ರೆಗಳಲ್ಲೂ ಲಭ್ಯವಿರುವಂತೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು. ಹಸಿರು ಸೇನೆ ತಾಲೂಕು ಅಧ್ಯಕ್ಷ ಯಲುವಳ್ಳಿ ಪ್ರಭಾಕರ್‌, ಮೇಲಗಾಣಿ ವಿಜಯಪಾಲ್, ನಲ್ಲಾಂಡಹಳ್ಳಿ ಶಂಕರ್‌, ಜುಬೇರ್‌ಪಾಷಾ, ಅಣ್ಣಹಳ್ಳಿ ನಾಗರಾಜ್‌, ಶ್ರೀನಿವಾಸ್‌, ವೆಂಕಟರಮಣಪ್ಪ, ಅಹಮದ್‌ಪಾಷಾ, ಲಾಯರ್‌ಮಣಿ, ಹೆಬ್ಬಿಣಿ ಆನಂದರೆಡ್ಡಿ, ಸಾಗರ್‌, ರಂಜೀತ್‌, ಅಂಬ್ಲಿಕಲ್ ಮಂಜುನಾಥ್‌, ಸುಪ್ರಿಂಚಲ ಇದ್ದರು.

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.