ಚಿಕಿತ್ಸೆ ನೀಡದ ವೈದ್ಯರ ವಿರುದ್ಧ ಕಿಡಿ
ಸೂಕ್ತ ಕ್ರಮಕ್ಕೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ, ಮನವಿ ಸಲ್ಲಿಕೆ
Team Udayavani, May 12, 2019, 10:50 AM IST
ಮುಳಬಾಗಿಲು ಸರ್ಕಾರಿ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷ್ಯ ಖಂಡಿಸಿ ರೈತ ಸಂಘದ ಕಾರ್ಯಕರ್ತರು ಆಡಳಿತ ವೈದ್ಯಾಧಿಕಾರಿ ರಾಜೇಶ್ಬಾಬುಗೆ ಮನವಿ ಸಲ್ಲಿಸಿದರು.
ಮುಳಬಾಗಿಲು: ನಗರದ ಸರ್ಕಾರಿ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ. ಖಾಸಗಿ ನರ್ಸಿಂಗ್ ಹೋಂಗೆ ಹೋಗುವಂತೆ ಒತ್ತಡ ಹಾಕುತ್ತಾರೆ. ಹಳ್ಳಿಗಳಲ್ಲಿ ತಲೆ ಎತ್ತಿರುವ ನಕಲಿ ಕ್ಲಿನಿಕ್ಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ರೈತ ಸಂಘ ಪ್ರತಿಭಟನೆ ನಡೆಸಿ, ಆಡಳಿತ ವೈದ್ಯಾಧಿಕಾರಿ ರಾಜೇಶ್ಬಾಬುಗೆ ಮನವಿ ಸಲ್ಲಿಸಿತು.
ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಸರ್ಕಾರಿ ಆಸ್ಪತ್ರೆಗೆ ಮೂಲ ಸೌಲಭ್ಯಗಳಿಲ್ಲ, ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಉತ್ತಮ ಚಿಕಿತ್ಸೆ ದೊರೆಯುತ್ತಿಲ್ಲ. ವೈದ್ಯರು ಮತ್ತು ಸಿಬ್ಬಂದಿ ಖಾಸಗಿ ನರ್ಸಿಂಗ್ ಹೋಂಗಳಿಗೆ ದಾಖಲಾಗುವಂತೆ ಒತ್ತಾಯಿಸುತ್ತಾರೆ, ಸರ್ಕಾರ ಕೋಟ್ಯಂತರ ರೂ. ಹಣ ಬಿಡುಗಡೆ ಮಾಡಿ, ಯಂತ್ರೋಪಕರಣ ನೀಡಿದ್ದರೂ ಸಮರ್ಪಕವಾಗಿ ಉಪಯೋಗಿಸುವಲ್ಲಿ ಆಡಳಿತ ಮಂಡಳಿ ವಿಫಲವಾಗಿದೆ ಎಂದು ಆರೋಪಿಸಿದರು.
ಆಸ್ಪತ್ರೆ ಮುಂಭಾಗ ವಾಹನ ನಿಲ್ಲಿಸಲು ಪಾರ್ಕಿಂಗ್ ವ್ಯವಸ್ಥೆಯಿಲ್ಲ. ಆಸ್ಪತ್ರೆಯಲ್ಲಿ ಅಗತ್ಯ ಸಿಬ್ಬಂದಿ ಇಲ್ಲ, ಫೈರಿಂಗ್ ಸಿಲೆಂಡರ್ಗಳನ್ನು ರೀಫಿಲ್ ಮಾಡಿಸದೇ ಮೂಲೆಗೆ ಎಸೆಯಲಾಗಿದೆ. ಮಧುಮೇಹ, ಬಿ.ಪಿ ಮಾತ್ರೆಗಳು ಔಷಧಿಗೆ ತಕ್ಕಷ್ಟು ಪೂರೈಕೆಯಾಗುತ್ತಿಲ್ಲ. ಸ್ಕ್ಯಾನಿಂಗ್, ಇಸಿಜಿ ಖಾಸಗಿ ಆಸ್ಪತ್ರೆಗಳಲ್ಲಿ ಮಾಡಿಸಿಕೊಳ್ಳಬೇಕಾಗಿದೆ. ಆಸ್ಪತ್ರೆಯಲ್ಲಿ ನೀರಿನ ಪಿಲ್ಟರ್ ರಿಪೇರಿ ಮಾಡಿಸಿ, ಹೆರಿಗೆಗೆ ಬರುವವರ ಬಳಿ ಯಾವುದೇ ಕಾರಣಕ್ಕೂ ಹಣಕ್ಕೆ ಒತ್ತಾಯ ಮಾಡಬಾರದು ಎಂದು ಆಗ್ರಹಿಸಿದರು.
ತಾಲೂಕು ಅಧ್ಯಕ್ಷ ಫಾರುಕ್ಪಾಷ ಮಾತನಾಡಿ, ಆಸ್ಪತ್ರೆಗಳಲ್ಲಿ ಕೆಲವು ವೈದ್ಯರು ಬಡರೋಗಿಗಳಿಗೆ ಚಿಕಿತ್ಸೆ ನೀಡಲು ಮಧ್ಯವರ್ತಿಗಳನ್ನು ನೇಮಕ ಮಾಡಿಕೊಂಡಿರುವುದನ್ನು ಕೂಡಲೇ ನಿಲ್ಲಿಸಬೇಕು. ರೋಗಿಗಳಿಗೆ ಇಂಜೆಕ್ಷನ್ ಹಾಕುವುದರಿಂದ ಹಿಡಿದು ಮಾತ್ರೆಗಳು ನೀಡುವವರೆಗೂ ನಡೆಯುತ್ತಿರುವ ಲಂಚದಾವಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.
ಗ್ರಾಮೀಣ ಆಸ್ಪತ್ರೆಗಳಲ್ಲಿ 24 ಗಂಟೆ ವೈದ್ಯರು, ಸಿಬ್ಬಂದಿ ವಾಸವಿರಬೇಕು, ಖಾಸಗಿ ಮಡಿಕಲ್ಗಳಿಗೆ ಚೀಟಿ ಬರೆದುಕೊಡುವುದನ್ನು ನಿಲ್ಲಿಸಬೇಕು. ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಮಾಡುವುದನ್ನು ತಡೆಯಬೇಕು. ಹಾವು, ನಾಯಿ ಕಡಿತದ ಚುಚ್ಚುಮದ್ದನ್ನು ಎಲ್ಲಾ ಆಸ್ಪತ್ರೆಗಳಲ್ಲೂ ಲಭ್ಯವಿರುವಂತೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು. ಹಸಿರು ಸೇನೆ ತಾಲೂಕು ಅಧ್ಯಕ್ಷ ಯಲುವಳ್ಳಿ ಪ್ರಭಾಕರ್, ಮೇಲಗಾಣಿ ವಿಜಯಪಾಲ್, ನಲ್ಲಾಂಡಹಳ್ಳಿ ಶಂಕರ್, ಜುಬೇರ್ಪಾಷಾ, ಅಣ್ಣಹಳ್ಳಿ ನಾಗರಾಜ್, ಶ್ರೀನಿವಾಸ್, ವೆಂಕಟರಮಣಪ್ಪ, ಅಹಮದ್ಪಾಷಾ, ಲಾಯರ್ಮಣಿ, ಹೆಬ್ಬಿಣಿ ಆನಂದರೆಡ್ಡಿ, ಸಾಗರ್, ರಂಜೀತ್, ಅಂಬ್ಲಿಕಲ್ ಮಂಜುನಾಥ್, ಸುಪ್ರಿಂಚಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?