ಶಾಸಕರಿಗೆ ಕೋವಿಡ್‌: ವಿಶೇಷ ಪೂಜೆ


Team Udayavani, Sep 9, 2020, 12:35 PM IST

ಶಾಸಕರಿಗೆ ಕೋವಿಡ್‌: ವಿಶೇಷ ಪೂಜೆ

ಮಾಲೂರು: ಕೋವಿಡ್ ಸೋಂಕಿಗೆ ಒಳಗಾಗಿರುವ ಶಾಸಕ ಕೆ.ವೈ.ನಂಜೇಗೌಡ ಹಾಗೂ ಕುಟುಂಬ ವರ್ಗದವರು ಶೀಘ್ರ ಗುಣಮುಖರಾಗಲಿ ಎಂದು ತಾಲೂಕು ಕಾಂಗ್ರೆಸ್‌ನಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.

ಪಟ್ಟಣದ ಶಕ್ತಿ ದೇವತೆ ಮಾರಿಕಾಂಬ ದೇವಿ ದೇಗುಲದಲ್ಲಿ ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಏರ್ಪಡಿಸಿದ್ದ ವಿಶೇಷ ಪೂಜೆಯಲ್ಲಿ ಮಾತನಾಡಿದಮಾಸ್ತಿ ಬ್ಲಾಕ್‌ನ ಅಧ್ಯಕ್ಷ ಟಿ.ಮುನಿಯಪ್ಪ, ವಾರದಿಂದ ಶಾಸಕ ನಂಜೇಗೌಡ, ಅವರ ಕುಟುಂಬದ ಆರು ಸದಸ್ಯರಿಗೆ ಕೊರೊನಾ ಪಾಸಿಟಿವ್‌ ಬಂದಿರುವ ಕಾರಣ, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಶೀಘ್ರಗುಣಮುಖರಾಗುವ ಮೂಲಕ ತಾಲೂಕಿನ ಜನರ ಸೇವೆಗೆ ಸಿದ್ಧರಾಗಲಿ ಎಂದು ಹೇಳಿದರು.

ತಾಲೂಕಿನ ಜನತೆ ತುರ್ತು ಸೇವೆಗಳಿಗೆ ದೂರವಾಣಿಮೂಲಕವೇ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಸೂಚಿಸುತ್ತಿರುವ ಶಾಸಕರು, ಶೀಘ್ರ ಗುಣಮುಖರಾಗಿ, ತಾಲೂಕಿನ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬೇಕಾಗಿದೆ. ಇದರಿಂದ ಮಾಲೂರು ಪಟ್ಟಣದ ಶಕ್ತಿ ದೇವತೆ ಮಾರಿಕಾಂಬ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, 101 ತೆಂಗಿನ ಕಾಯಿ ಹೊಡೆಯುವ ಕಾರ್ಯ ಮಾಡಲಾಯಿತು ಎಂದು ತಿಳಿಸಿದರು.

ಪ್ರಧಾನ ಕಾರ್ಯದರ್ಶಿ ಮೈಲಾಂಡಹಳ್ಳಿ ನಾರಾಯಣ ಸ್ವಾಮಿ, ಸಂತೇಹಳ್ಳಿ ನಾರಾಯಣಸ್ವಾಮಿ, ಅಂಜನಿ ಸೋಮಣ್ಣ, ವಿಜಯನರಸಿಂಹ, ಅಶ್ವತ್‌ರೆಡ್ಡಿ, ಮಹಾ ಲಕ್ಷ್ಮೀ ಮತ್ತಿತರರು ಇದ್ದರು.

………………………………………………………………………………………………………………………………………………………

ಕೊಂಡರಾಜನಹಳ್ಳಿ: ವಿಶ್ವ ಸಾಕ್ಷರತಾ ದಿನ : ಕೋಲಾರ: ಕೊಂಡರಾಜನಹಳ್ಳಿ ಪಂಚಾಯ್ತಿಯು 2 ಎಕರೆ ಜಮೀನು ನೀಡಿದರೆ ರಾಜ್ಯಮಟ್ಟದ ಸೇವಾದಳ ತರಬೇತಿ ಕೇಂದ್ರವನ್ನು ನಿರ್ಮಾಣ ಮಾಡಲಾಗುವುದು ಎಂದು ಸೇವಾದಳ ಕಾರ್ಯದರ್ಶಿ ಎಸ್‌.ಸುಧಾಕರ್‌ ಹೇಳಿದರು.

ನಗರದ ಕೊಂಡರಾಜನಹಳ್ಳಿ ಪಂಚಾಯ್ತಿ ಕಚೇರಿಯಲ್ಲಿ ಮಂಗಳವಾರ ಭಾರತ ಸೇವಾದಳ, ಕೋಲಾರ ರೋಟರಿ ಸೆಂಟ್ರಲ್‌ ಹಾಗೂ ಗ್ರಾಪಂ ಆಯೋಜಿಸಿದ್ದ ವಿಶ್ವ ಸಾಕ್ಷರತಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಪಿಡಿಒ ಬೈರಾರೆಡ್ಡಿ ಮಾತನಾಡಿ, ಪಂಚಾಯ್ತಿಯು ಸೇವಾದಳ ಹಾಕಿಕೊಟ್ಟ ಆದರ್ಶವನ್ನು ಪಾಲಿಸುತ್ತ, ಮುಂದಿನ ವರ್ಷ ಪಂಚಾಯ್ತಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಂಕಗಳಿಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಗುವುದು ಎಂದು ಘೋಷಿಸಿದರು. ಈ ವೇಳೆ ಪಂಚಾಯ್ತಿ ವ್ಯಾಪ್ತಿಯಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಸೇವಾದಳ ಜಿಲ್ಲಾ ಉಪಾಧ್ಯಕ್ಷ ಜಿ.ಶ್ರೀನಿವಾಸ್‌, ಕೋಲಾರ ಜಿಲ್ಲಾ ಡ್ರೈವಿಂಗ್‌ ಶಾಲೆ ಮಾಲಿಕರ ಸಂಘದ ಅಧ್ಯಕ್ಷ ಆರ್‌.ಗೋಪಾಲ್‌, ಗ್ರಾಪಂ ಮಾಜಿ ಉಪಾಧ್ಯಕ್ಷ ಶ್ರೀನಿವಾಸ್‌, ಮಾಲೂರು ಸೇವಾದಳ ಅಧ್ಯಕ್ಷ ಬಹಾದ್ದೂರ್‌, ಶ್ರೀನಿವಾಸಪುರ ಅಧ್ಯಕ್ಷ ಬಂಗವಾದಿ ನಾಗರಾಜ್‌,

ಸಂಘಟಕ ದಾನೇಶ್‌, ತಾಲೂಕು ಕಾರ್ಯದರ್ಶಿ ಶ್ರೀರಾಮ್‌, ಗ್ರಾಪಂ ಕಾರ್ಯದರ್ಶಿ ನಾರಾಯಣಸ್ವಾಮಿ, ಬಿಲ್‌ಕಲೆಕ್ಟರ್‌ ಶ್ರೀನಿವಾಸ್‌, ಮಾಜಿ ಸದಸ್ಯರಾದ ಚಲಪತಿ, ಕುಮಾರ್‌, ಸತೀಶ್‌, ವೆಂಕಟೇಶ್‌ ಇತರರು ಹಾಜರಿದ್ದರು.ಕೊಂಡರಾಜನಹಳ್ಳಿ ಮಂಜುಳ ಕಾರ್ಯಕ್ರಮ ನಿರೂಪಿಸಿ, ಅಂಕಿತರೊಂದಿಗೆ ಆಶಯ ಗೀತೆಗಳನ್ನು ಹಾಡಿದರು. ಸರ್ವಧರ್ಮ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮ ರಾಷ್ಟ್ರಗೀತೆ ಗಾಯನದೊಂದಿಗೆ ಮುಕ್ತಾಯಗೊಂಡಿತು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.