ಹಿಪ್ಪುನೇರಳೆ ತೋಟಕ್ಕೆ ವಿಷ ಸಿಂಪಡಿಸಿದ ಕಿಡಿಗೇಡಿಗಳು
Team Udayavani, Jan 21, 2021, 12:23 PM IST
ಕೋಲಾರ: ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಕೆಲ ಕಿಡಿಗೇಡಿಗಳು ಗ್ರಾಮದಲ್ಲಿನ ಕೆಲ ಹಿಪ್ಪು ನೇರಳೆ ತೋಟಗಳಿಗೆ ವಿಷ ಸಿಂಪಡಿಸಿ ವಿಕೃತಿ ಮೆರೆದಿದ್ದಾರೆ. ಗ್ರಾಮದ ಸೀತಾರಾಮ, ಮಂಜುನಾಥ್, ಶಿವಾನಂದ, ರಮೇಶ್, ನಾಗರಾಜ್, ಎಂ.ರಮೇಶ್ ಅವರ ರೇಷ್ಮೆ ತೋಟಗಳಿಗೆ ವಿಷ ಸಿಂಪಡಿಸಿರುವ ಪರಿಣಾಮ ವಿಷಪೂರಿತ ಹಿಪ್ಪುನೇರಳೆ ಸೊಪ್ಪು ತಿಂದ ರೇಷ್ಮೆ ಹುಳುಗಳು ನರಳಾಡಿ ಸಾವನ್ನಪ್ಪಿವೆ.
ಇದನ್ನೂ ಓದಿ:ಕಾಡಾನೆಗಳಿಗೆ ರೆಡಿಯೋ ಕಾಲರ್ ಅಳವಡಿಕೆ
ಇನ್ನೇನು ಕೇವಲ 10 ದಿನಗಳಲ್ಲಿ ಗೂಡು ಕಟ್ಟುವ ಹಂತದಲ್ಲಿದ್ದ ರೇಷ್ಮೆ ಹುಳುಗಳು ಈ ರೀತಿಯಾಗಿ ಸಾವನ್ನಪ್ಪಿದ್ದು ರೈತರು ಕಣ್ಣೀರು ಹಾಕುವಂತಾಗಿದೆ. ಅಲ್ಲದೇ, ಲಕ್ಷಾಂತರ ರೂಪಾಯಿ ನಷ್ಟವುಂಟಾಗಿದೆ.ರೇಷ್ಮೆ ಇಲಾಖೆ ಅಧಿಕಾರಿಗಳು ರೇಷ್ಮೆ ತೋಟಕ್ಕೆ ಮತ್ತು ಹುಳು ಸಾಕಾಣಿಕೆ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಂಬಂಧಪಟ್ಟವರು ಈ ಘಟನೆ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಂಡು ನಷ್ಟ ಪರಿಹಾರ ತುಂಬಿಕೊಡುವಂತೆ ರೈತರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Yugadi: ಯುಗಾದಿ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ