ಅಡ್ಡಿ ಆತಂಕದಲ್ಲೂ ಬೃಹತ್‌ ಶೋಭಾಯಾತ್ರೆ ಯಶಸ್ವಿ


Team Udayavani, Apr 11, 2022, 3:12 PM IST

ಅಡ್ಡಿ ಆತಂಕದಲ್ಲೂ ಬೃಹತ್‌ ಶೋಭಾಯಾತ್ರೆ ಯಶಸ್ವಿ

ಕೋಲಾರ: ಶ್ರೀರಾಮಸೇನಾ ವತಿಯಿಂದ ಶ್ರೀರಾಮನವಮಿ ಪ್ರಯುಕ್ತ ನಗರದ ಗಾಂಧಿವನದಲ್ಲಿ ಶ್ರೀರಾಮೋತ್ಸವ ಕಾರ್ಯಕ್ರಮದ ನಂತರ ನಡೆದ ಬೃಹತ್‌ ಶೋಭಾಯಾತ್ರೆಗೆ ಮೊದಲು ತಡೆಯೊಡ್ಡಿದ ಪೊಲೀಸರು ಡಿಜೆ ಸೌಂಡ್‌ಸಿಸ್ಟಮ್‌ ವಶಪಡಿಸಿಕೊಂಡು ಯಾತ್ರೆಗೆ ಕೆಲಕಾಲ ಅಡ್ಡಿಪಡಿಸಿದರಾದರೂ, ನಂತರ ನಡೆದ ಮಾತುಕತೆಗಳ ನಂತರ ಪೊಲೀಸರು ಸೂಚಿಸಿದ ಮಾರ್ಗದಲ್ಲಿ ಶೋಭಾಯಾತ್ರೆ ಸಾಗಲು ಅನುಮತಿ ಕೊಟ್ಟರು.

ಶ್ರೀರಾಮೋತ್ಸವ ಶೋಭಾಯಾತ್ರೆಗೆ ಚಾಲನೆ ನೀಡಲು ಪ್ರಮೋದ್‌ ಮುತಾಲಿಕ್‌ ಆಗಮಿಸುವ ಸುದ್ದಿ ಪೊಲೀಸರಿಗೂ ತಿಳಿಯದಂತೆ ರಹಸ್ಯ ಕಾಪಾಡಿಕೊಳ್ಳಲಾಗಿತ್ತು. ಮುತಾಲಿಕ್‌ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ದಿಢೀರ್‌ ಕಾಣಿಸಿಕೊಂಡಿದ್ದರಿಂದ ಪೊಲೀಸರು ವೇದಿಕೆ ಕಾರ್ಯಕ್ರಮ ಹಾಗೂ ಶೋಭಾಯಾತ್ರೆ ರದ್ದುಗೊಳಿಸಲು ಸೂಚಿಸಿ, ಶೋಭಾಯಾತ್ರೆ ಸಾಗದಂತೆ ಪೊಲೀಸರ ಸರ್ಪಗಾವಲು ಹಾಕಿದರು. ಈ ಸಂದರ್ಭದಲ್ಲಿ ಪೊಲೀಸರು ಪ್ರವೇಶಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಹಿಳೆಯರು, ಮಕ್ಕಳನ್ನು ಹೊರ ಕಳುಹಿಸಿದರು. ಶೋಭಾಯಾತ್ರೆ ನಡೆಯದು ಎಂಬ ಸಂದೇಶವೂ ರವಾನೆಯಾಯಿತು.

ಈ ವಿರೋಧದ ನಡುವೆಯೇ ಪ್ರಮೋದ್‌ ಮುತಾಲಿಕ್‌ ಶೋಭಾಯಾತ್ರೆಗೆ ಚಾಲನೆ ನೀಡಿದ ನಂತರ ಅವರನ್ನು ವಾಹನದಲ್ಲಿ ಹತ್ತಿಸಿ ವಾಪಸ್ಸು ಕಳುಹಿಸಲಾಯಿತು. ಶೋಭಾಯಾತ್ರೆ ಮುಂದುವರೆಸುವ ಸಂಬಂಧ ಸುಮಾರು 2 ಗಂಟೆಗಳ ಕಾಲ ನಡೆದ ಸಂಧಾನ, ಮಾತುಕತೆಗಳ ನಂತರ ಶೋಭಾಯಾತ್ರೆಯನ್ನು ಎಂ.ಜಿ.ರಸ್ತೆ ಮೂಲಕ ಕಾಲೇಜು ವೃತ್ತ, ಬಂಗಾರಪೇಟೆ ವೃತ್ತದಲ್ಲಿ ಹಾದು ಡೂಂಲೈಟ್‌ ವೃತ್ತದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮಕ್ಕೆ ಕರೆತರಲು ಒಪ್ಪಿಗೆ ನೀಡಲಾಯಿತು.

ಶೋಭಾಯಾತ್ರೆಯಲ್ಲಿ ಜೈ ಶ್ರೀರಾಮ್‌ ಘೋಷಣೆ: ಶೋಭಾಯಾತ್ರೆಯಲ್ಲಿ ಸಹಸ್ರಾರು ಮಂದಿ ಯುವಕರು ಪಾಲ್ಗೊಂಡಿದ್ದು, ಜೈ ಶ್ರೀರಾಮ್‌ ಘೋಷಣೆ ಮುಗಿಲು ಮುಟ್ಟಿತ್ತು. ಮಾರ್ಗದುದ್ದಕ್ಕೂ ಪಟಾಕಿ ಸಿಡಿಸಿ, ಸಂಭ್ರಮಿಸಿದ ಯುವಕರು, ಭಗವಧ್ವಜಗಳನ್ನಿಡಿದು ಸಾಗುತ್ತಿದ್ದಂತೆ ಇಡೀ ಎಂ.ಜಿ.ರಸ್ತೆ ಕೇಸರಿಮಯವಾಯಿತು. ಇದೇ ಸಂದರ್ಭದಲ್ಲಿ ಎಂ.ಜಿ.ರಸ್ತೆಯಲ್ಲಿ ಬಜರಂಗದಳ ಮುಖಂಡ ಬಾಲಾಜಿ ಭಗವಧ್ವಜ ಹಾರಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್‌ ಭಾಗವಹಿಸಿದ್ದರು. ಶ್ರೀರಾಮಸೇನೆ, ಬಜರಂಗದಳ, ಆರ್‌ ಎಸ್‌ಎಸ್‌, ವಿಹಿಂಪ ಸೇರಿದಂತೆ ಹಿಂದೂಪರ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರಮೇಶ್‌ ರಾಜ್‌, ಪದಾಧಿಕಾರಿಗಳಾದ ಅರುಣ್‌, ಸುಮನ್‌,ನವೀನ್‌, ಸಚಿನ್‌ ಚಿನ್ನಪ್ಪ, ಶಬರೀಷ್‌, ಬಜರಂಗದಳ ಜಿಲ್ಲಾ ಸಂಚಾಲಕ ಬಾಬು, ಮುಖಂಡ ಬಾಲಾಜಿ, ವಿಜಯಕುಮಾರ್‌ ಮತ್ತಿತರರು ಶೋಭಾಯಾತ್ರೆಯ ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.