ಅಡ್ಡಿ ಆತಂಕದಲ್ಲೂ ಬೃಹತ್‌ ಶೋಭಾಯಾತ್ರೆ ಯಶಸ್ವಿ


Team Udayavani, Apr 11, 2022, 3:12 PM IST

ಅಡ್ಡಿ ಆತಂಕದಲ್ಲೂ ಬೃಹತ್‌ ಶೋಭಾಯಾತ್ರೆ ಯಶಸ್ವಿ

ಕೋಲಾರ: ಶ್ರೀರಾಮಸೇನಾ ವತಿಯಿಂದ ಶ್ರೀರಾಮನವಮಿ ಪ್ರಯುಕ್ತ ನಗರದ ಗಾಂಧಿವನದಲ್ಲಿ ಶ್ರೀರಾಮೋತ್ಸವ ಕಾರ್ಯಕ್ರಮದ ನಂತರ ನಡೆದ ಬೃಹತ್‌ ಶೋಭಾಯಾತ್ರೆಗೆ ಮೊದಲು ತಡೆಯೊಡ್ಡಿದ ಪೊಲೀಸರು ಡಿಜೆ ಸೌಂಡ್‌ಸಿಸ್ಟಮ್‌ ವಶಪಡಿಸಿಕೊಂಡು ಯಾತ್ರೆಗೆ ಕೆಲಕಾಲ ಅಡ್ಡಿಪಡಿಸಿದರಾದರೂ, ನಂತರ ನಡೆದ ಮಾತುಕತೆಗಳ ನಂತರ ಪೊಲೀಸರು ಸೂಚಿಸಿದ ಮಾರ್ಗದಲ್ಲಿ ಶೋಭಾಯಾತ್ರೆ ಸಾಗಲು ಅನುಮತಿ ಕೊಟ್ಟರು.

ಶ್ರೀರಾಮೋತ್ಸವ ಶೋಭಾಯಾತ್ರೆಗೆ ಚಾಲನೆ ನೀಡಲು ಪ್ರಮೋದ್‌ ಮುತಾಲಿಕ್‌ ಆಗಮಿಸುವ ಸುದ್ದಿ ಪೊಲೀಸರಿಗೂ ತಿಳಿಯದಂತೆ ರಹಸ್ಯ ಕಾಪಾಡಿಕೊಳ್ಳಲಾಗಿತ್ತು. ಮುತಾಲಿಕ್‌ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ದಿಢೀರ್‌ ಕಾಣಿಸಿಕೊಂಡಿದ್ದರಿಂದ ಪೊಲೀಸರು ವೇದಿಕೆ ಕಾರ್ಯಕ್ರಮ ಹಾಗೂ ಶೋಭಾಯಾತ್ರೆ ರದ್ದುಗೊಳಿಸಲು ಸೂಚಿಸಿ, ಶೋಭಾಯಾತ್ರೆ ಸಾಗದಂತೆ ಪೊಲೀಸರ ಸರ್ಪಗಾವಲು ಹಾಕಿದರು. ಈ ಸಂದರ್ಭದಲ್ಲಿ ಪೊಲೀಸರು ಪ್ರವೇಶಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಹಿಳೆಯರು, ಮಕ್ಕಳನ್ನು ಹೊರ ಕಳುಹಿಸಿದರು. ಶೋಭಾಯಾತ್ರೆ ನಡೆಯದು ಎಂಬ ಸಂದೇಶವೂ ರವಾನೆಯಾಯಿತು.

ಈ ವಿರೋಧದ ನಡುವೆಯೇ ಪ್ರಮೋದ್‌ ಮುತಾಲಿಕ್‌ ಶೋಭಾಯಾತ್ರೆಗೆ ಚಾಲನೆ ನೀಡಿದ ನಂತರ ಅವರನ್ನು ವಾಹನದಲ್ಲಿ ಹತ್ತಿಸಿ ವಾಪಸ್ಸು ಕಳುಹಿಸಲಾಯಿತು. ಶೋಭಾಯಾತ್ರೆ ಮುಂದುವರೆಸುವ ಸಂಬಂಧ ಸುಮಾರು 2 ಗಂಟೆಗಳ ಕಾಲ ನಡೆದ ಸಂಧಾನ, ಮಾತುಕತೆಗಳ ನಂತರ ಶೋಭಾಯಾತ್ರೆಯನ್ನು ಎಂ.ಜಿ.ರಸ್ತೆ ಮೂಲಕ ಕಾಲೇಜು ವೃತ್ತ, ಬಂಗಾರಪೇಟೆ ವೃತ್ತದಲ್ಲಿ ಹಾದು ಡೂಂಲೈಟ್‌ ವೃತ್ತದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮಕ್ಕೆ ಕರೆತರಲು ಒಪ್ಪಿಗೆ ನೀಡಲಾಯಿತು.

ಶೋಭಾಯಾತ್ರೆಯಲ್ಲಿ ಜೈ ಶ್ರೀರಾಮ್‌ ಘೋಷಣೆ: ಶೋಭಾಯಾತ್ರೆಯಲ್ಲಿ ಸಹಸ್ರಾರು ಮಂದಿ ಯುವಕರು ಪಾಲ್ಗೊಂಡಿದ್ದು, ಜೈ ಶ್ರೀರಾಮ್‌ ಘೋಷಣೆ ಮುಗಿಲು ಮುಟ್ಟಿತ್ತು. ಮಾರ್ಗದುದ್ದಕ್ಕೂ ಪಟಾಕಿ ಸಿಡಿಸಿ, ಸಂಭ್ರಮಿಸಿದ ಯುವಕರು, ಭಗವಧ್ವಜಗಳನ್ನಿಡಿದು ಸಾಗುತ್ತಿದ್ದಂತೆ ಇಡೀ ಎಂ.ಜಿ.ರಸ್ತೆ ಕೇಸರಿಮಯವಾಯಿತು. ಇದೇ ಸಂದರ್ಭದಲ್ಲಿ ಎಂ.ಜಿ.ರಸ್ತೆಯಲ್ಲಿ ಬಜರಂಗದಳ ಮುಖಂಡ ಬಾಲಾಜಿ ಭಗವಧ್ವಜ ಹಾರಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್‌ ಭಾಗವಹಿಸಿದ್ದರು. ಶ್ರೀರಾಮಸೇನೆ, ಬಜರಂಗದಳ, ಆರ್‌ ಎಸ್‌ಎಸ್‌, ವಿಹಿಂಪ ಸೇರಿದಂತೆ ಹಿಂದೂಪರ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರಮೇಶ್‌ ರಾಜ್‌, ಪದಾಧಿಕಾರಿಗಳಾದ ಅರುಣ್‌, ಸುಮನ್‌,ನವೀನ್‌, ಸಚಿನ್‌ ಚಿನ್ನಪ್ಪ, ಶಬರೀಷ್‌, ಬಜರಂಗದಳ ಜಿಲ್ಲಾ ಸಂಚಾಲಕ ಬಾಬು, ಮುಖಂಡ ಬಾಲಾಜಿ, ವಿಜಯಕುಮಾರ್‌ ಮತ್ತಿತರರು ಶೋಭಾಯಾತ್ರೆಯ ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

1—–ssas

Chennai ದೊರೆಯಲಿದೆ ನಗರ ಪ್ರವಾಹ ನಿಯಂತ್ರಣ  ವ್ಯವಸ್ಥೆ :ದೇಶದಲ್ಲಿಯೇ ಮೊದಲ ಬಾರಿಗೆ

1-wewewqe

South Africa Tour; ಭಾರತೀಯ ತಂಡ ಡರ್ಬಾನ್‌ಗೆ ಆಗಮನ

1-sdsadsad

Sugar factory; ಎಥೆನಾಲ್‌ಗೆ ಕಬ್ಬಿನ ರಸ ಬಳಸದಿರಿ: ಕೇಂದ್ರ ಸರಕಾರ ನಿರ್ದೇಶನ 

1-sadsdsa-d

BJP ಜನರ ಆಯ್ಕೆ ಎನ್ನುವುದು ಸಾಬೀತು: 3 ರಾಜ್ಯಗಳ ಗೆಲುವಿನ ಬಗ್ಗೆ ಮೋದಿ ಬಣ್ಣನೆ

1-sadasdd

Pro Kabaddi-10; ಗುಜರಾತ್‌ಗೆ ಆಘಾತ: ಪಾಟ್ನಾ ಜಯಭೇರಿ

1-sadasd

Painkiller ‘ಮೆಫ್ತಾಲ್’ ಮಾತ್ರೆ ಅಡ್ಡಪರಿಣಾಮ ಬೀರುತ್ತದೆ: ಸರಕಾರದ ಎಚ್ಚರಿಕೆ

ARINDAM BAGCHI

PoK ಭಾರತದ ಭಾಗ; ಯಾವುದೇ ಕಾರಣಕ್ಕೂ ಹೇಳಿಕೆಯನ್ನು ಬದಲಿಸುವುದಿಲ್ಲ: MEA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dialysis machine: 8 ಡಯಾಲಿಸಿಸ್‌ ಯಂತ್ರಗಳ ಪೈಕಿ 5 ಸುಸ್ಥಿತಿ.!

Dialysis machine: 8 ಡಯಾಲಿಸಿಸ್‌ ಯಂತ್ರಗಳ ಪೈಕಿ 5 ಸುಸ್ಥಿತಿ.!

Viral fever: ಹವಾಮಾನ ವೈಪರೀತ್ಯ: ಹೆಚ್ಚಾದ ವೈರಲ್‌ ಫೀವರ್‌!

Viral fever: ಹವಾಮಾನ ವೈಪರೀತ್ಯ: ಹೆಚ್ಚಾದ ವೈರಲ್‌ ಫೀವರ್‌!

tdy-15

Cyber Crime: ಇಬ್ಬರಿಗೆ 48 ಲಕ್ಷ ರೂ.ವಂಚಿಸಿದ ಸೈಬರ್‌ ಕಳ್ಳರು

Telangana election: ತೆಲಂಗಾಣ: ಕಣದಲ್ಲಿ ಬರ್ರೆಲಕ್ಕನ  ಸದ್ದು ಜೋರು

Telangana election: ತೆಲಂಗಾಣ: ಕಣದಲ್ಲಿ ಬರ್ರೆಲಕ್ಕನ  ಸದ್ದು ಜೋರು

Agriculture: ಹಿಪ್ಪು ನೇರಳೆ ಕೃಷಿಯಲ್ಲಿ ಮರ ಪದ್ಧತಿ ಆವಿಷ್ಕರಿಸಿದ ರೈತನಿಗೆ ಸಿಗದ ಮನ್ನಣೆ

Agriculture: ಹಿಪ್ಪು ನೇರಳೆ ಕೃಷಿಯಲ್ಲಿ ಮರ ಪದ್ಧತಿ ಆವಿಷ್ಕರಿಸಿದ ರೈತನಿಗೆ ಸಿಗದ ಮನ್ನಣೆ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

1—–ssas

Chennai ದೊರೆಯಲಿದೆ ನಗರ ಪ್ರವಾಹ ನಿಯಂತ್ರಣ  ವ್ಯವಸ್ಥೆ :ದೇಶದಲ್ಲಿಯೇ ಮೊದಲ ಬಾರಿಗೆ

1-wewewqe

South Africa Tour; ಭಾರತೀಯ ತಂಡ ಡರ್ಬಾನ್‌ಗೆ ಆಗಮನ

cen

Politics: ಶೋಭಾ ಕರಂದ್ಲಾಜೆ, ರಾಜೀವ್‌ ಚಂದ್ರಶೇಖರ್‌,ಅರ್ಜುನ್‌ ಮುಂಡಾಗೆ ಹೆಚ್ಚುವರಿ ಖಾತೆ

vijayendra R Ashok

ಬೆಳಗಾವಿ ಕಲಾಪದಲ್ಲಿ BJP ಗಲಿಬಿಲಿ!- ಅಶೋಕ್‌, ವಿಜಯೇಂದ್ರ ನಡುವೆ ಧರಣಿ, ಸಭಾತ್ಯಾಗ ಗೊಂದಲ

china pnuemonia

China: ದೇಶಕ್ಕೆ ಚೀನ ಸೋಂಕು?- ದಿಲ್ಲಿ ಏಮ್ಸ್‌ನಲ್ಲಿ ಏಳು ಮಾದರಿ ಪಾಸಿಟಿವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.