ರಸ್ತೆ ದುರಸ್ತಿ ಕಾರ್ಯ ಕೈಗೊಂಡು 2 ತಿಂಗಳಾದ್ರೂ ಡಾಂಬರು ಹಾಕಿಲ್ಲ

ಪೆಗಳಪಲ್ಲಿ- ಸೋಮಯಾಜಲಹಳ್ಳಿ ಮಧ್ಯದ 2 ಕಿ.ಮೀ. ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ ತರುತ್ತಿದೆ

Team Udayavani, Jan 16, 2020, 3:17 PM IST

16-January-19

ಶ್ರೀನಿವಾಸಪುರ: ನಿತ್ಯ 30ಕ್ಕೂ ಹೆಚ್ಚು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಿತ್ತುಹಾಕಿ ತಿಂಗಳು ಕಳೆದರೂ ಇನ್ನೂ ಡಾಂಬರೀಕರಣ ಮಾಡಿಲ್ಲ. ಇದರಿಂದ ಈ ಭಾಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ.

ಜಲ್ಲಿ ಕಲ್ಲು ಮೇಲೆದ್ದು ವಾಹನ ಸವಾರರಿಗೆ, ಪಾದಚಾರಿಗಳಿಗೆ ಕಂಟಕ ತರುತ್ತಿವೆ. ಪೆಗಳಪಲ್ಲಿ ಹಾಗೂ ಸೋಮ ಯಾಜಲಹಳ್ಳಿ ಮಧ್ಯದ 2ಕಿ.ಮೀ. ಅಂತರದ ರಸ್ತೆ ಸ್ಥಿತಿ ಹೇಳತೀರದಾಗಿದೆ.

ಗ್ರಾಮಗಳು: ತಾಲೂಕಿನ ಪುಂಗನೂರು ರಸ್ತೆಯ ಪೆಗಳಪಲ್ಲಿಯಿಂದ ಸೋಮಯಾಜಲಹಳ್ಳಿಯ ವರಿಗೆ ಡಾಂಬರ್‌ ಹಾಕಲು ರಸ್ತೆ ಅಗೆದು ಎರಡು ತಿಂಗಳು ಮೇಲಾಗಿದೆ. ಈವರೆಗೂ ರಸ್ತೆಗೆ ಮುಕ್ತಿ ಸಿಕ್ಕಿಲ್ಲ. ಈ ರಸ್ತೆಯಲ್ಲಿ ಸೋಮ ಯಾಜಲಹಳ್ಳಿ, ಓಜಲಹಳ್ಳಿ, ಪೆಗಳಪಲ್ಲಿ, ಕೂಳಗುರ್ಕಿ, ಅಡವಿ ಚಂಬಕೂರು, ಪುರ್ನಪಲ್ಲಿ, ಬ್ರಾಹ್ಮಣಪಲ್ಲಿ, ದಿಗುವಪಲ್ಲಿ, ನೆರ್ನಹಳ್ಳಿ, ನಾರಾಯಣಪುರ, ಚೆನಯ್ಯ ಗಾರಿಪಲ್ಲಿ, ಗುಟ್ಟಪಲ್ಲಿ ಸೇರಿ 30ಕ್ಕೂ ಹೆಚ್ಚು ಹಳ್ಳಿಗಳ ಜನರು ಓಡಾಡುತ್ತಾರೆ. ಅದೇ ರೀತಿ ದ್ವಿಚಕ್ರ ವಾಹನ, ಬಸ್‌, ಕಾರು, ಟ್ರ್ಯಾಕ್ಟರ್‌ಗಳು, ಟೆಂಪೋಗಳು ಸಂಚರಿಸುತ್ತವೆ.

ಕಲ್ಲು ಮೇಲೆದ್ದಿವೆ: ಈ ರಸ್ತೆ ಆಂಧ್ರ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುತ್ತದೆ. ಸಾರಿಗೆ ವಾಹನಗಳು, ಲೋಡು ತುಂಬಿದ ಲಾರಿಗಳು ಓಡಾಡುತ್ತವೆ. ರಸ್ತೆಯಲ್ಲಿ ಜಲ್ಲಿ ಕಲ್ಲುಗಳು ಮೇಲೆದ್ದು ಚೂರಿಯಂತೆ ಕಾಣುತ್ತವೆ. ದ್ವಿಚಕ್ರ ವಾಹನಗಳಂತೂ ಭಯದ ನೆರಳಲ್ಲಿ ಓಡಾಡ ಬೇಕಾಗಿದೆ. ರಾತ್ರಿ ಸಮಯದಲ್ಲಿ ಸಂಚಾರ ಮಾಡು ವುದು ಇನ್ನೂ ಕಷ್ಟವಾಗುತ್ತದೆ.

ರಸ್ತೆಯಲ್ಲಿ ಜಲ್ಲಿಕಲ್ಲುಗಳು ಮೇಲೆದ್ದಿವೆ. ಬಸ್‌ ಸಂಚರಿ ಸುವಾಗ ರಸ್ತೆಯಲ್ಲಿ ದೂಳು ಏಳುತ್ತದೆ. ಈ ವೇಳೆ ಮುಂದಿನ ವಾಹನ ಕಾಣದೇ ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ. ಕೂಡಲೇ ಪಿಡಬ್ಲ್ಯೂಡಿ ಅಧಿಕಾರಿಗಳು ಡಾಂಬರುಹಾಕಿ ಸಮಸ್ಯೆ ಈಡೇರಿಸಬೇಕಿದೆ.
ರಾಮು,
ಶ್ರೀನಿವಾಸ್‌,ದ್ವಿಚಕ್ರ ವಾಹನ ಸವಾರ.

2.50 ಕೋಟಿ ರೂ.ಗೆ ಟೆಂಡರ್‌ ಆಗಿದೆ. ಗುತ್ತಿಗೆ ದಾರರು ಹಣ ಕೊಟ್ಟು ಅಗ್ರಿ ಮೆಂಟ್‌ ಮಾಡಬೇಕಾಗಿತ್ತು. ಅವರು ರಜಾದಲ್ಲಿ ಹೊರಗಿನ ಊರಲ್ಲಿದ್ದ ಕಾರಣ ತಡೆ ಆಗಿದೆ. ಯಾವ ಕಾಮಗಾರಿಗೆ ಕಾರ್ಯಾದೇಶ ಆಗಿಲ್ಲವೋ ಅಂತಹವುಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲು ಸರ್ಕಾರ ಸೂಚಿಸಿದೆ. ಆದ್ದರಿಂದ ವಿಳಂಬ ಆಗಿದೆ. ಅದೇ ರೀತಿ 2.75 ಕೋಟಿ ರೂ. ವೆಚ್ಚದ ದಿಂಬಾಲ ಕ್ರಾಸ್‌ನಿಂದ ಎಸ್‌ಪಿ ರಸ್ತೆ ವರೆಗಿನ ಕಾಮಗಾರಿಗೂ ತಡೆಯಾಗಿದೆ.
ಎಲ್‌.ಕೆ.ಶ್ರೀನಿವಾಸಮೂರ್ತಿ,
ಪಿಡಬ್ಲ್ಯೂಡಿ ಎಂಜಿನಿಯರ್‌

ಕೆ.ವಿ.ನಾಗರಾಜ್

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.