ಜನಪ್ರಿಯತೆ ನಡುವೆ ಸಮಾನ ಹೋರಾಟ


Team Udayavani, May 10, 2018, 6:50 AM IST

Ramesh-kumar-Con-JDs.jpg

ಕೋಲಾರ: ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ನಲವತ್ತು ವರ್ಷಗಳಿಂದ ಇಬ್ಬರದೇ ಹವಾ. ಇವರ ಮಧ್ಯೆ ಮತ್ತೂಬ್ಬ ರಾಜಕಾರಣಿ ಪ್ರವೇಶಿಸಲು ಸಾಧ್ಯವಾಗಿಲ್ಲ. ರಾಜಕೀಯ ಪಕ್ಷಗಳಿಗೆ ಇವರಿಬ್ಬರ ಜನಪ್ರಿಯತೆಯೇ ಆಧಾರ.
ಕೋಲಾರ ಜಿಲ್ಲೆಯ ಉತ್ತರ ದಿಕ್ಕಿಗೆ ಆಂಧ್ರಪ್ರದೇಶದ ಅಂಚಿನಲ್ಲಿರುವ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ರಾಜಕಾರಣದ ಮೇಲೆ ರಾಯಲಸೀಮಾ ಪಾಳೇಗಾರಿಕೆ ಸಂಸ್ಕೃತಿಯ ದಟ್ಟ ಪ್ರಭಾವವಿದೆ. ಸಿದ್ದರಾಮಯ್ಯ ಸರಕಾರದಲ್ಲಿ ಆರೋಗ್ಯ ಸಚಿವರಾಗಿದ್ದ ರಮೇಶ್‌ ಕುಮಾರ ಹಾಗೂ ಕೋಲಾರ ಜಿಲ್ಲಾ ಜೆಡಿಎಸ್‌ ಜಿಲ್ಲಾಧ್ಯಕ್ಷರಾಗಿರುವ ಜಿ.ಕೆ.ವೆಂಕಟಶಿವಾರೆಡ್ಡಿಯವರು ಶ್ರೀನಿವಾಸಪುರ ಕ್ಷೇತ್ರದ ಜನಮಾನಸದಲ್ಲಿ ಬೆರೆತು ಹೋಗಿದ್ದಾರೆ.

ಕ್ಷೇತ್ರದಲ್ಲಿ 1978ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ರಮೇಶ್‌ ಕುಮಾರ ಗೆಲುವಿನ ನಗೆ ಬೀರಿದ್ದರು. ನಂತರ, 1983ರಲ್ಲಿ ಜಿ.ಕೆ.ವೆಂಕಟಶಿವಾರೆಡ್ಡಿ ಗೆಲುವು ಸಂಪಾದಿಸಿದ್ದರು. ಈ ಸೋಲು-ಗೆಲುವಿನ ಸರಪಳಿ ಕಳೆದ ಒಂಬತ್ತು ಚುನಾವಣೆಗಳಲ್ಲಿ ಮರುಕಳಿಸುತ್ತಲೇ ಇದೆ. ಇದೀಗ ಈ ಇಬ್ಬರೂ ಹತ್ತನೇ ಚುನಾವಣೆಯನ್ನು ಎದುರಿಸುತ್ತಿದ್ದಾರೆ.

ವಿಧಾನಸಭಾ ಕ್ಷೇತ್ರಗಳ ಮರುವಿಂಗಡನೆಯ ನಂತರ 2008ರಲ್ಲಿ ಜಿ.ಕೆ.ವೆಂಕಟಶಿವಾರೆಡ್ಡಿ ತಮ್ಮ ಸರದಿಯ ಗೆಲುವನ್ನು ಸಂಪಾದಿಸಿಕೊಂಡರು. 2013ರಲ್ಲಿ ಕೆ.ಆರ್‌.ರಮೇಶ್‌ ಕುಮಾರ ಗೆಲುವಿನ ನಗೆ ಬೀರಿ ಸಚಿವರೂ ಆದರು. ಸೋಲು ಗೆಲುವಿನ ಸರಪಳಿಯಲ್ಲಿ ಈ ಬಾರಿ ಗೆಲುವಿನ ನಿರೀಕ್ಷೆಯಲ್ಲಿ ವೆಂಕಟಶಿವಾರೆಡ್ಡಿ ಇದ್ದಾರೆ. ಆದರೆ, ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳಿಂದ ತಮ್ಮ ಮರು ಆಯ್ಕೆ ಖಚಿತ ಎಂಬ ಆತ್ಮವಿಶ್ವಾಸದಲ್ಲಿ ರಮೇಶ್‌ ಕುಮಾರ ಇದ್ದಾರೆ.

ನಿರ್ಣಾಯಕ ಅಂಶಗಳು:
ಒಕ್ಕಲಿಗ ರೆಡ್ಡಿ ಜನಾಂಗದ ಮತಗಳಲ್ಲಿ ಜಿ.ಕೆ.ವೆಂಕಟಶಿವಾರೆಡ್ಡಿ ಅತಿ ಹೆಚ್ಚು ಮತಗಳನ್ನು ಗಿಟ್ಟಿಸಿಕೊಂಡರೆ, ಪರಿಶಿಷ್ಟ ಜಾತಿ ವರ್ಗದ ಮತಗಳಲ್ಲಿ ಅತಿ ಹೆಚ್ಚು ಮತಗಳನ್ನು ಬ್ರಾಹ್ಮಣ ಸಮೂದಾಯದ ರಮೇಶ್‌ ಕುಮಾರ ಗಿಟ್ಟಿಸಿಕೊಳ್ಳುತ್ತಾರೆ. ಮುಸ್ಲಿಮರು, ಬಲಜಿಗ ಹಾಗೂ ಹಿಂದುಳಿದ ವರ್ಗಗಳ ಮತಗಳನ್ನು ಬಹುತೇಕ ಇಬ್ಬರೂ ಸಮಾನವಾಗಿ ಹಂಚಿಕೊಳ್ಳುತ್ತಾರೆ. ಬಿಗಿ ಪೈಪೋಟಿಯ ನಡುವೆ ನಡೆಯುವ ಮತ ಕದನದಲ್ಲಿ ಗೆಲುವಿನ ಅಂತರ ಕಡಿಮೆಯೇ.

ಕ್ಷೇತ್ರದಲ್ಲಿ ಮಾದರಿಯೆನಿಸುವಂತೆ ಆಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಜನತೆ ಕೂಲಿ ರೂಪದಲ್ಲಿ ನನಗೆ ಮತ ಹಾಕಿ ಚುನಾವಣೆಯಲ್ಲಿ ಗೆಲ್ಲಿಸುತ್ತಾರೆಂಬ ನಂಬಿಕೆ ಇದೆ.
– ರಮೇಶ್‌ಕುಮಾರ್‌, ಕಾಂಗ್ರೆಸ್‌ ಅಭ್ಯರ್ಥಿ

ಶ್ರೀನಿವಾಸಪುರಕ್ಕೆ ಸುಳ್ಳು ಭರವಸೆಗಳನ್ನು ಕೊಟ್ಟವರ ಬಗ್ಗೆ ಕ್ಷೇತ್ರದ ಜನತೆಗೆ ಅರಿವಾಗಿದೆ. ಈ ಬಾರಿ ಕ್ಷೇತ್ರದಲ್ಲಿ ಜೆಡಿಎಸ್‌ ಪರವಾದ ಅಲೆ ಇದೆ. ಜನತೆ ನನ್ನನ್ನು ಬಹುಮತದಿಂದ ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆ.
– ಜಿ.ಕೆ.ವೆಂಕಟಶಿವಾರೆಡ್ಡಿ, ಜೆಡಿಎಸ್‌ ಅಭ್ಯರ್ಥಿ

– ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.