ಸೋಂಕು ತಡೆಗೆ ಎಸ್ಸೆಸ್ಸೆಲ್ಸಿ ಅಣಕು ಪರೀಕ್ಷೆ


Team Udayavani, Jun 16, 2020, 6:43 AM IST

anuku test

ಕೋಲಾರ: ಕೋವಿಡ್‌-19ರ ಸವಾಲನ್ನು ಮೆಟ್ಟಿನಿಂತು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಸಿದ್ಧವಾಗಿರುವ ಶಿಕ್ಷಣ ಇಲಾಖೆ ಮುನ್ನೆಚ್ಚರಿಕೆ ಕ್ರಮಗ ಳೊಂದಿಗೆ ತಾಲೂಕಿನ ನರಸಾಪುರ ವ್ಯಾಲಿ ಪಬ್ಲಿಕ್‌ ಶಾಲೆ ಕೇಂದ್ರದಲ್ಲಿ ಸೋಮವಾರ  ಯಶಸ್ವಿಯಾಗಿ ಅಣಕು ಪರೀಕ್ಷೆ ನಡೆಸಿತು. ಈ ಮೂಲಕ ಜೂ.25ರಿಂದ ಮೂಲ ಪರೀಕ್ಷೆಗೆ ಇಲಾಖೆ ಸನ್ನದ್ಧವಾಗಿದೆ ಎಂದು ಸಾಕ್ಷೀಕರಿಸ ಲಾಯಿತು. ಪರೀಕ್ಷೆ ಸಿದ್ಧತಾ ನೇತೃತ್ವ ವಹಿಸಿದ್ದ ಡಿಡಿಪಿಐ ಕೆ.ರತ್ನಯ್ಯ ಮಾತನಾಡಿ, ಕೋವಿಡ್‌  ಸಂಕಷ್ಟ ಇದೊಂದು ಅಪರೂಪದ್ದಾಗಿದ್ದು, ಇದನ್ನು ತಡೆಯುವ ಶಕ್ತಿ ನಮ್ಮ ಕೈಯಲ್ಲೇ ಇದೆ, ಮಕ್ಕಳಲ್ಲಿ ಹೆಜ್ಜೆಹೆಜ್ಜೆಗೂ ಅರಿವು ಮೂಡಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಮುನ್ನಡೆಯಲು ಅರಿವು ಮೂಡಿಸಲು ಅಣಕು ಪರೀಕ್ಷೆ  ಸಹಕಾರಿಯಾಗಿದೆ ಎಂದು ಹೇಳಿದರು.

ಪರೀಕ್ಷಾ ಸಿಬ್ಬಂದಿಗೂ ತಪಾಸಣೆ, ಸ್ಯಾನಿಟೈಸ್‌: ಪರೀಕ್ಷೆಗೆ ಬರುವ ಮಕ್ಕಳಿಗೆ ಮಾತ್ರವಲ್ಲ, ಅಲ್ಲಿ ಕೆಲಸ ಮಾಡುವ ಎಲ್ಲಾ ಸಿಬ್ಬಂದಿಯನ್ನೂ ಸಾಮಾಜಿಕ ಅಂತರದ ಸರದಿ ಸಾಲಿನಲ್ಲಿ ಥರ್ಮಲ್‌  ಟೆಸ್ಟಿಂಗ್‌ ಮಾಡಿ, ಸ್ಯಾನಿಟೈಸ್‌ ನೀಡಿ, ನಿಯಮಾನುಸಾರ ಮೊಬೆ„ಲ್‌ ವಶಕ್ಕೆ ಪಡೆದು ಕೇಂದ್ರದೊಳಗೆ ಕರೆಸಿಕೊಳ್ಳಲಾಯಿತು. ಅಣಕು ಪರೀಕ್ಷೆಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ಮೂಲ ಪರೀಕ್ಷೆಯನ್ನೂ ನಾವು  ಸೋಂಕು ಹರಡದಂತೆ ಮುನ್ನಚ್ಚರಿಕೆ ವಹಿಸಿ ಮಾಡಬಲ್ಲೆವು ಎಂದು ಸಾಬೀತು ಪಡಿಸಿದರು.

ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಬಸ್‌ ಸೌಲಭ್ಯ: ವ್ಯಾಲಿ ಪಬ್ಲಿಕ್‌ ಶಾಲೆ ಪರೀಕ್ಷಾ ಕೇಂದ್ರಕ್ಕೆ ಬರುವ ಶಾಲೆಗಳ ಮಕ್ಕಳನ್ನು ಖಾಸಗಿ ಶಾಲೆಗಳ ಸ್ಯಾನಿಟೆ„ಸ್‌ ಮಾಡಿದ ಬಸ್ಸಿನಲ್ಲೇ ಸಾಮಾಜಿಕ ಅಂತರ ಕಾಪಾಡಿ ಹತ್ತಿಸಿ ಕೇಂದ್ರಕ್ಕೆ ಕರೆತಂದರಲ್ಲದೇ,  ಇಲ್ಲಿಯೂ ಮಕ್ಕಳು ಅಂತರ ಕಾಯ್ದುಕೊಂಡೇ ಸರದಿ ಸಾಲಿನಲ್ಲಿ ಸಾಗುವಂತೆ ಮಾಡಲಾಯಿತು. ಕೇಂದ್ರಕ್ಕೆ ಸ್ಥಾನಿಕ ಜಾಗೃತಿ ದಳ ನೇಮಕ, ಕೊಠಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಜ್ವರ, ನೆಗಡಿ ಇರುವ ಮಕ್ಕಳಿಗೆ ಪ್ರತ್ಯೇಕ  ಕೊಠಡಿ ವ್ಯವಸ್ಥೆ, ಶೌಚಾಲಯಗಳು, ಕೈತೊಳೆಯಲು ನೀರು, ಸೋಪು, ಸೋಂಕು ನಿವಾರಕ ದ್ರಾವಣಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಾಕ್ಸ್‌  ಗಳ ರಚನೆ ಹೀಗೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲಾಯಿತು.

ವ್ಯಾಲಿ ಪಬ್ಲಿಕ್‌ ಶಾಲಾ ಆಡಳಿತ ಮಂಡಳಿಯ ಜಿ.ಸುಮಾ, ರವಿಕುಮಾರ್‌, ಸತೀಶ್‌ ಮತ್ತಿತರರು ಕಾಲಕಾಲಕ್ಕೆ ಅಣಕು ಪರೀಕ್ಷೆಗೆ ಸಿದ್ಧತೆ ನಡೆಸಿ ಸಹಕಾರ ನೀಡಿದರು. ಪರೀಕ್ಷಾ ನೋಡಲ್‌ ಅಧಿಕಾರಿ ಎ.ಎನ್‌. ನಾಗೇಂದ್ರಪ್ರಸಾದ್‌,  ಶಿಕ್ಷಣಾಧಿಕಾರಿ ಸಿ.ಆರ್‌. ಅಶೋಕ್‌, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್‌ .ನಾಗರಾಜಗೌಡ, ಎವೈಪಿಸಿ ಸಿದ್ದೇಶ್‌, ವಿಷಯ ಪರಿವೀಕ್ಷಕರಾದ ಶಶಿವಧನ, ಕೃಷ್ಣಪ್ಪ, ಗಾಯತ್ರಿ, ಡಿಪಿಒ ಮಂಜುನಾಥ್‌, ಮುಖ್ಯ ಅಧೀಕ್ಷಕ ಬಿ.ಎಂ.ಚಂದ್ರಪ್ಪ, ತಾಲೂಕು  ನೋಡಲ್‌ ಅಧಿಕಾರಿಗಳಾದ ಮುನಿರತ್ನಯ್ಯಶೆಟ್ಟಿ, ಸಿ.ಎಂ. ವೆಂಕಟರಮಣಪ್ಪ, ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ರುದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.