ಜಿಲ್ಲೆಗೆ ಎಸ್ಸೆಸ್ಸೆಲ್ಸಿ ಪ್ರಶ್ನೆಪತ್ರಿಕೆ ಆಗಮನ
Team Udayavani, Mar 18, 2019, 7:15 AM IST
ಕೋಲಾರ: ಜಿಲ್ಲಾದ್ಯಂತ ಮಾ.21ರಿಂದ 71 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಸಂಬಂ ಧ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ಬಿಗಿ ಬಂದೋಬಸ್ತ್ನಲ್ಲಿ ಪ್ರಶ್ನೆಪತ್ರಿಕೆಗಳನ್ನು ಬೆಳಗ್ಗೆ 11 ಗಂಟೆಗೆ ಕೋಲಾರಕ್ಕೆ ತರಲಾಯಿತು.
ನಗರದ ಡಿಡಿಪಿಐ ಕಚೇರಿ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಕಾಂಪೌಂಡ್ಗೇಟ್ಗೆ ಬೀಗ ಹಾಕಿ ಸಾರ್ವಜನಿಕರು ಒಳಗೆ ಪ್ರವೇಶಿಸದಂತೆ ಎಚ್ಚರಿಕೆ ವಹಿಸಲಾಗಿತ್ತು. ಡಿಡಿಪಿಐ ಕೆ.ರತ್ನಯ್ಯ ಹಾಗೂ ಪರೀಕ್ಷಾ ನೋಡೆಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ನೇತೃತ್ವದಲ್ಲಿ ಇಲಾಖೆ ಅಧಿಕಾರಿಗಳು ಬೆಂಗಳೂರಿನಿಂದ ಬೀಗಮುದ್ರೆಯೊಂದಿಗೆ ಆಗಮಿಸಿದ್ದ ವಾಹನದಿಂದ ಪ್ರಶ್ನೆಪತ್ರಿಕೆಗಳ ಬಂಡಲ್ಗಳನ್ನು ಪಡೆದುಕೊಂಡು ಸ್ಥಳದಲ್ಲೇ ಪರಿಶೀಲನೆ ನಡೆಸುತ್ತಿದ್ದುದು ಕಂಡು ಬಂತು.
ಆಯಾ ತಾಲೂಕುವಾರು ಪ್ರಶ್ನೆಪತ್ರಿಕೆ ಬಂಡಲ್ಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಿದ ನಂತರ ಅಧಿಕಾರಿಗಳು ಪರಿಶೀಲನೆ ನಡೆಸಿ ಬಂಡಲ್ ಮುದ್ರೆಗೆ ಯಾವುದೇ ಲೋಪವಾಗಿಲ್ಲ ಎಂಬುದನ್ನು ದೃಢಪಡಿಸಿಕೊಂಡರು.
ತಾಲೂಕುಗಳತ್ತ ಪ್ರಶ್ನೆಪತ್ರಿಕೆ: ಶಸ್ತ್ರಸಜ್ಜಿತ ಪೊಲೀಸ್ಬಂದೋಬಸ್ತ್ನಲ್ಲಿ ಆಯಾ ತಾಲೂಕುವಾರು ಪ್ರಶ್ನೆಪತ್ರಿಕೆಗಳನ್ನು ಬೀಗ ಮುದ್ರೆ ಹಾಕಿದ ಪೆಟ್ಟಿಗೆಗಳಲ್ಲಿ ತುಂಬಿ ಪ್ರತ್ಯೇಕ ವಾಹನದಲ್ಲಿ ಆ ವ್ಯಾಪ್ತಿಯ ಕ್ಷೇತ್ರಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಕಳುಹಿಸಿಕೊಡುವ ಕಾರ್ಯವನ್ನು ಪರೀಕ್ಷಾ ನೋಡೆಲ್ ಅ ಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ನಡೆಸಿದರು.
ಪ್ರಶ್ನೆಪತ್ರಿಕೆ ಸೋರಿಕೆಗೆ ಅವಕಾಶವಿಲ್ಲದಂತೆ ಕಟ್ಟೆಚ್ಚರ ವಹಿಸಿರುವ ಇಲಾಖೆ ಅಧಿಕಾರಿಗಳು, ಪ್ರಶ್ನೆಪತ್ರಿಕೆ ಬಂಡಲ್ಗಳನ್ನು ತುಂಬಿದ ವಾಹನಗಳು ಆಯಾ ತಾಲೂಕು ಮಾರ್ಗಾಧಿಕಾರಿಗಳ ನೇತೃತ್ವದಲ್ಲಿ ಹೋಗುವವರೆಗೂ ಕಚೇರಿ ಕಾಂಪೌಂಡ್ ಒಳಕ್ಕೆ ಸಾರ್ವಜನಿಕರಿಗೆ ನಿಷೇಧ ಹಾಕಿದ್ದುದು ಕಂಡು ಬಂತು.
ತಾಲೂಕುವಾರು ಖಜಾನೆಯಲ್ಲಿ ಸಂರಕ್ಷಣೆ: ತಾಲೂಕು ಮಾರ್ಗಾ ಕಾರಿಗಳ ನೇತೃತ್ವದಲ್ಲಿ ಶಸ್ತ್ರಸಜ್ಜಿತ ಪೊಲೀಸರ ರಕ್ಷಣೆಯಲ್ಲಿ ಹೊರಟ ಪ್ರಶ್ನೆಪತ್ರಿಕೆ ಬಂಡಲ್ಗಳನ್ನು ಆಯಾ ತಾಲೂಕು ಖಜಾನೆಗಳಲ್ಲಿ ಠೇವಣಿ ಮಾಡಿ ಸಂರಕ್ಷಿಸಿಡಲು ಡಿಡಿಪಿಐ ಕೆ.ರತ್ನಯ್ಯ ಸೂಚನೆ ನೀಡಿದರು.
ಕೋಲಾರ ತಾಲೂಕಾದ್ಯಂತ ಇರುವ ಒಟ್ಟು 17 ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿ ಸಿದ ಪ್ರಶ್ನೆಪತ್ರಿಕೆಗಳನ್ನು ಜಿಲ್ಲಾ ಖಜಾನೆಯಲ್ಲಿ ಸಂರಕ್ಷಿಸಿಡಲಾಗಿದ್ದು, ಕ್ಷೇತ್ರ ಶಿಕ್ಷಣಾಧಿ ಕಾರಿ ಕೆ.ಎಸ್.ನಾಗರಾಜಗೌಡ, ತಾಲೂಕು ಪರೀಕ್ಷಾ ನೋಡೆಲ್ ಅಧಿಕಾರಿ ಮುನಿರತ್ನಯ್ಯಶೆಟ್ಟಿ ಪ್ರಶ್ನೆಪತ್ರಿಕೆಗಳ ಬಂಡಲ್ಗಳನ್ನು ತಮ್ಮ ಸುಪರ್ದಿಗೆ ಪಡೆದುಕೊಂಡು ಖಜಾನೆಗೆ ರವಾನಿಸಿದರು.
ಉಳಿದಂತೆ ಬಂಗಾರಪೇಟೆಯ 11 ಕೇಂದ್ರಗಳ ಪ್ರಶ್ನೆಪತ್ರಿಕೆಗಳು, ಮಾಲೂರಿನ 11 ಕೇಂದ್ರಗಳು, ಮುಳಬಾಗಿಲಿನ 10, ಕೆಜಿಎಫ್ನ 10, ಶ್ರೀನಿವಾಸಪುರದ 12 ಕ್ಷೇತ್ರಗಳ ಪ್ರಶ್ನೆಪತ್ರಿಕೆಗಳನ್ನು ಆಯಾ ತಾಲೂಕು ಖಜಾನೆಗಳಿಗೆ ಸಂರಕ್ಷಿಸಿಡಲು ಪೊಲೀಸ್ ಬಂದೋಬಸ್ತ್ನಲ್ಲಿ ಸಾಗಿಸಲಾಯಿತು.
ಈ ಸಂದರ್ಭದಲ್ಲಿ ಡಿಡಿಪಿಐ ಕೆ.ರತ್ನಯ್ಯ, ಪರೀಕ್ಷಾ ನೋಡೆಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್, ಶಿಕ್ಷಣಾ ಧಿಕಾರಿ ಸಿ.ಆರ್.ಅಶೋಕ್, ಬಿಇಒಗಳಾದ ಕೆ.ಎಸ್.ನಾಗರಾಜಗೌಡ, ಮಾಧವರೆಡ್ಡಿ, ಕೆಂಪಯ್ಯ, ಷಂಷೂನ್ನೀಸಾ, ಕೆಂಪರಾಮು, ವಿಷಯ ಪರಿವೀಕ್ಷಕರಾದ ಕೃಷ್ಣಪ್ಪ, ಶಶಿವಧನ, ಗಾಯತ್ರಿ, ಮುಖ್ಯ ಅಧೀಕ್ಷಕರಾದ ಪಟ್ನ ನಾಗರಾಜ್, ನಜೀರ್ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್