ರೈತ ಅಭಿವೃದ್ಧಿ ಪ್ರಾಧಿಕಾರ ಆರಂಭಿಸಿ


Team Udayavani, Nov 24, 2020, 4:50 PM IST

ರೈತ ಅಭಿವೃದ್ಧಿ ಪ್ರಾಧಿಕಾರ ಆರಂಭಿಸಿ

ಕೋಲಾರ: ದೇಶದ ಬೆನ್ನೆಲುಬು ರೈತರ ಸಮಗ್ರ ಏಳಿಗೆಗಾಗಿ ರೈತ ಅಭಿವೃದ್ಧಿ ಪ್ರಾಧಿಕಾರ ರಚಿಸುವಂತೆ ಆಗ್ರಹಿಸಿ ಸಾಮೂಹಿಕ ನಾಯಕತ್ವದಡಿಯ ರೈತ ಸಂಘದಿಂದ ಅಪರ ಜಿಲ್ಲಾಧಿಕಾರಿ ಸ್ನೇಹಾ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣ ಗೌಡ ಮಾತನಾಡಿ, ರೈತರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿ ಅಧಿಕಾರಕ್ಕೆ ಬರುವ ಸರ್ಕಾರಗಳಿಗೆ ಆ ಬಳಿಕ ಅಧಿಕಾರದಲ್ಲಿದ್ದಾಗ ರೈತರ ಸಮಸ್ಯೆ ಕಣ್ಣಿಗೆ ಕಾಣಿಸುವುದಿಲ್ಲ.ಇತ್ತೀಚಿನ ದಿನಗಳಲ್ಲಿ ಯಾವ ಕಾರಣಕ್ಕಾಗಿ ಜಾತಿಗೆ ಒಂದು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಮಾಡುತ್ತಿದ್ದಾರೆ ಎನ್ನುವುದು ಯಾರಿಗೂ ಅರ್ಥವಾಗದ ವಿಚಾರವೆಂದರು.

ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡಮಾತನಾಡಿ, ರೈತರ ಸಮಗ್ರ ಏಳಿಗೆಗಾಗಿರೈತ ಅಭಿವೃದ್ಧಿ ಪ್ರಾಧಿಕಾರವನ್ನುಮೊದಲು ಸರ್ಕಾರ ರಚನೆ ಮಾಡಲಿ. ಇದುವರೆಗಿನ ಸರ್ಕಾರಗಳು ರೈತರಅನುಕೂಲಕ್ಕಾಗಿ ಹೇಳಿಕೊಳ್ಳುವಂತಹಯಾವುದೇ ಕೆಲಸ ಮಾಡಿಕೊಟ್ಟಿಲ್ಲ.ಈಗಿನ ಸರ್ಕಾರಕ್ಕೆ ರೈತರ ಮೇಲೆ ಕಾಳಜಿ ಇದ್ದಿದ್ದೇ ಆದಲ್ಲಿ ಜಾತಿಗೊಂದು ಅಭಿವೃದ್ಧಿ ಪ್ರಾಕಾರ ರಚಿಸುವ ಮುನ್ನ ರೈತರ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಿ ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಸ್ನೇಹ, ಮನವಿಯನ್ನು ಕೂಡಲೇ ಸರ್ಕಾರಕ್ಕೆಕಳುಹಿಸುವ ಭರವಸೆ ನೀಡದರು. ತಾಲೂಕಾಧ್ಯಕ್ಷ ಈಕಂಬಳ್ಳಿ ಮಂಜು ನಾಥ್‌, ಬಂಗಾರಪೇಟೆ ತಾಲೂಕಾದ್ಯಕ್ಷ ಐತಾಂಡಹಳ್ಳಿ ಮಂಜುನಾಥ್‌, ಚಾಂದ್‌ ಪಾಷಾ, ನವಾಜ್‌, ಜಮೀರ್‌, ಕಿರಣ್‌, ಜಾವೇದ್‌, ಸ್ವಸ್ತಿಕ್‌ ಶಿವು, ಪೊಮ್ಮರಹಳ್ಳಿ ನವೀನ್‌ ಮತ್ತಿತರರಿದ್ದರು.

26ಕ್ಕೆ ಜಿಲ್ಲಾ ಬಂದ್‌: ರೈತಸಂಘ :

ಶ್ರೀನಿವಾಸಪುರ: ಕೇಂದ್ರ-ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆಯಿಂದ ಕೃಷಿ ರಂಗ ದಿವಾಳಿಯಾಗುತ್ತಿದೆ ಎಂದು ಅಖೀಲ ಭಾರತ ಕ್ರಿಯಾ ಸಮಿತಿ ಮುಖಂಡ ಪಿ.ಆರ್‌.ಸೂರ್ಯನಾರಾಯಣ ವಿಷಾದಿಸಿದರು.

ಶ್ರೀನಿವಾಸಪುರ ಪಟ್ಟಣದಲ್ಲಿ ಪ್ರಾಂತ ರೈತ ಸಂಘ, ರಾಜ್ಯ ರೈತ ಸಂಘ, ಹಸಿರು ಸೇನೆ ಸಂಯಕ್ತಾಶ್ರಯದಲ್ಲಿ ನಡೆದಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಚುನಾವಣೆಗೆಮುನ್ನಮೋದಿಅವರುಸುಮಾರು ಬಹಿರಂಗ ಸಭೆಗಳಲ್ಲಿ ರೈತರನ್ನು ಉದ್ಧಾರ ಮಾಡುವುದಾಗಿ ಹೇಳಿ ರೈತರಿಗೆ ಮಾರಕವಾಗುವ ಸುಗ್ರೀವಾಜ್ಞೆ ಜಾರಿ ಮಾಡಿದ್ದಾರೆ. ಈ ಬಗ್ಗೆ ರೈತಪರಸಂಘಟನೆಗಳು ಈಗಾಗಲೇ ದೇಶವ್ಯಾಪ್ತಿ ಪ್ರತಿಭಟನೆ ನಡೆಸಿ ಖಂಡಿಸಿವೆ. ಹೀಗಾಗಿ ಸುಗ್ರೀವಾಜ್ಞೆ ಹಿಂಪಡೆಯಬೇಕೆಂದು  ಒತ್ತಾಯಿಸಿ ನ.26 ರಂದು ಅಖೀಲ ಭಾರತ ಬಂದ್‌ಕರೆಮೇರೆಗೆಜಿಲ್ಲೆಯನ್ನುಬಂದ್‌ ಮಾಡಲಾಗುತ್ತದೆ. ನ.27 ರಂದು ಜಿಲ್ಲಾ ಕೇಂದ್ರಗಳ ಕೇಂದ್ರ ಸರ್ಕಾರಿ ಕಚೇರಿಗಳ ಮುಂದೆ ಪಿಕೆಟಿಂಗ್‌ ನಡೆಸಲಾಗುತ್ತದೆ ಹೇಳಿದರು.

ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷ ಎನ್‌.ಜಿ.ಶ್ರೀರಾಮರೆಡ್ಡಿ ಮಾತನಾಡಿ, ನ.26 ರಂದು ರೈತರ ಬೇಡಿಕೆಗಳಿಗಾಗಿ, ಸುಗ್ರೀವಾಜ್ಞೆ ಹಿಂತೆಗೆದುಕೊಳ್ಳ ಬೇಕೆಂದುಒತ್ತಾಯಿಸಿ ಬಂದ್‌ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 50 ಕಡೆ ಹಾಗೂ ತಾಲೂಕಿನಲ್ಲಿ 7 ಕಡೆ ರಾಜ್ಯ ಹೆದ್ದಾರಿ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ.ಬಂದ್‌ದಿನ ಸಾರ್ವಜನಿಕರು ಸಹಕಾರ ನೀಡಬೇಕೆಂದರು.ಪಾತಕೋಟೆ ನವೀನ್‌ ಕುಮಾರ್‌, ನಂಜಪ್ಪ, ಎನ್‌ .ನಾಗಭೂಷಣ್‌, ಮಂಜುಳಾ ಇದ್ದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.