ರಾಜ್ಯ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣ: ಎಇಇ


Team Udayavani, Dec 1, 2019, 11:43 AM IST

kolar-tdy-2

ಬೇತಮಂಗಲ: ಎರಡು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ರಾಜ್ಯ ಹೆದ್ದಾರಿ ದ್ವಿಪಥ ಕಾಮಗಾರಿಯನ್ನು 15 ದಿನಗಳೊಳಗೆ ಡಾಂಬರೀಕರಣಗೊಳಿಸಲಾಗುವುದುಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಇಇ ಮಲ್ಲಿಕಾರ್ಜುನ ಮೊಲಕೇರಿ ಭರವಸೆ ನೀಡಿದರು.

ಹೋಬಳಿಯ ಮೂಲಕ ಆಂಧ್ರ ಗಡಿವರೆಗೂ ಕೈಗೊಂಡಿರುವ ಈ ಕಾಮಗಾರಿಯನ್ನು ಶಾಸಕಿಎಂ.ರೂಪಕಲಾ ವೀಕ್ಷಣೆಗೆ ಆಗಮಿಸಿದ್ದ ವೇಳೆ ರಸ್ತೆಅಭಿವೃದ್ಧಿಯ ಬಗ್ಗೆ ವಿವರಣೆ ನೀಡಿದರು. ಬಿಲ್‌ ಬಾಕಿಇದ್ದ ಕಾರಣ ಕಾಮಗಾರಿಯನ್ನು ಗುತ್ತಿಗೆದಾರರು ನಿಲ್ಲಿಸಿದ್ದರು. ಶಾಸಕಿ ಎಂ.ರೂಪಕಲಾ ಮತ್ತು ಹಿಂದಿನ ಸಂಸದ ಕೆ.ಎಚ್‌.ಮುನಿಯಪ್ಪ ಈ ಬಗ್ಗೆ ಅನೇಕ ಬಾರಿ ಚರ್ಚಿಸಿದ್ದ ಪರಿಣಾಮ ಕಾಮಗಾರಿ ಪ್ರಾರಂಭಿಸಲಾಗಿದೆ. ಈಗಾಗಲೇ ಕಾಮಗಾರಿ ಪ್ರಾರಂಭಿಸಿದ್ದು, 15 ದಿನಗಳಲ್ಲಿ ಡಾಂಬರೀಕರಣಗೊಳಿಸಿ ಪೂರ್ಣಗೊಳಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಶಾಸಕಿ ಎಂ.ರೂಪಕಲಾ ಮಾತನಾಡಿ, ಬೆಂಗಳೂರಿನಿಂದ ಚೆನೈಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯನ್ನು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಲೋಕೊಪಯೋಗಿ ಇಲಾಖೆಯ ರಸ್ತೆಯನ್ನು ರಾಜ್ಯ ಹೆದ್ದಾರಿ ರಸ್ತೆಯಾಗಿ ಮೇಲ್ದಜೇಗೇರಿಸಲಾಗಿದೆ. ಬಂಗಾರಪೇಟೆಯ ನೆರಳೇಕೆರೆಯಿಂದ ಬೇತಮಂಗಲ ಮೂಲಕ ವಿ.ಕೋಟೆಯ ಗಡಿವರೆಗೂ ಮತ್ತು ಕ್ಯಾಸಂಬಳ್ಳಿಯಿಂದ ರಾಜಪೇಟೆ ರಸ್ತೆವರೆಗೂ ಒಟ್ಟು44 ಕಿ.ಮೀ. ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದರು.

ಬಹುದಿನಗಳ ಕನಸು: ಬೇತಮಂಗಲದಿಂದ ವಿ. ಕೋಟೆವರೆಗಿನ ರಸ್ತೆಯಲ್ಲೇ ದಶಕಗಳಿಂದಲೂ ಗುಂಡಿ ಬಿದ್ದು, ಸವಾರರಿಗೆ ಸಮಸ್ಯೆ ಆಗುತ್ತಿತ್ತು. ಮಳೆಗಾಲದಲ್ಲಿ ಗುಂಡಿಗಳಲ್ಲಿ ನೀರು ತುಂಬಿಕೊಂಡರೆ ಸಮಸ್ಯೆಯಾಗುತ್ತಿತ್ತು. ಬಿಸಿಲುಗಾಲದಲ್ಲಿಯೂರಸ್ತೆಯ ದೂಳು, ಜೆಲ್ಲಿ, ಮಣ್ಣಿನ ಸಮಸ್ಯೆಎದುರಿಸುತ್ತಿದ್ದರು ಎಂದು ಬೇಸರ ವ್ಯಕ್ತಪಡಿಸಿದರು. ಈ ರಸ್ತೆಯ ಬಹುದಿನಗಳ ಕನಸು ಇದೀಗ ಈಡೇರಲು ಕಾಲ ಕೂಡಿ ಬಂದಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ ಎಂದು ಹೇಳಿದರು.

ಈ ರಸ್ತೆಯ ಕಾಮಗಾರಿಯ ತಡೆ ಬಗ್ಗೆ ವಿವಿಧ ತಲೆ ಬರಹದಡಿಯಲ್ಲಿ ಪ್ರಕಟಿಸಿದ್ದ ವರದಿಯನ್ನು ಕಟ್‌ಮಾಡಿ ಅಧಿಕಾರಿಗಳ ಗಮನಕ್ಕೆ ತಂದು ಪ್ರತಿನಿತ್ಯ ಸವಾರರ ನರಕಯಾತನೆ ಬಗ್ಗೆ ವಿವರಿಸಿದ್ದೇವೆ. ತಾವು ಸಹ ಅಧಿಕಾರಿಗಳನ್ನು ಅನೇಕ ಬಾರಿ ಭೇಟಿ ಮಾಡಿ ಈ ಕೂಡಲೇ ಕಾಮಗಾರಿ ಆರಂಭಿಸುವಂತೆ ಮನವಿ ಮಾಡಿದ್ದೆ, ಕಳೆದ ವಾರದಿಂದ ಕಾಮಗಾರಿ ಪ್ರಾರಂಭಿಸಿದ್ದು, ಇದೀಗ ಎಇಇ ಅಧಿಕಾರಿಗಳು ಭೇಟಿ ನೀಡಿ 15 ದಿನಗಳೊಳಗೆ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು.

ಈ ಕೂಡಲೇ ಆಂಧ್ರದ ಗಡಿಭಾಗವಾದ ವೆಂಗಸಂದ್ರ ಕ್ರಾಸ್‌ ಮತ್ತು ಎನ್‌.ಜಿ ಹುಲ್ಕೂರುಮಾರ್ಗ ಮಧ್ಯೆ ರಸ್ತೆಯನ್ನು ಮೊದಲು ಡಾಂಬರೀಕರಣಗೊಳಿಸಿ ಈ 1 ಕಿ.ಮೀ. ರಸ್ತೆ ತೀರ ಹದಗಟ್ಟಿದ್ದು, ಸವಾರರಿಗೆ ತೀವ್ರ ಸಮಸ್ಯೆಯಾಗಿದೆ ಎಂದು ಅಧಿಕಾರಿಗಳು ಶಾಸಕಿ ಎಂ.ರೂಪಕಲಾ ಸೂಚಿಸಿದರು. ನಾಳೆಯಿಂದಲೇ ಈ ರಸ್ತೆ ದುರಸ್ತಿ ಮಾಡಿ ಡಾಂಬರು ಹಾಕುವುದಾಗಿ ಎಇಇ ಮಲ್ಲಿಕಾರ್ಜುನ್‌ ತಿಳಿಸಿದರು.

ಹಳೇ ಮದ್ರಾಸ್‌ ರಸ್ತೆ, ರಾಜ್ಯ ಹೆದ್ದಾರಿ: ಬೇತಮಂಗಲ ಬಸ್‌ ನಿಲ್ದಾಣದಿಂದ ಆಂಧ್ರಗಡಿಗೆ ಹಾದು ಹೋಗುವ ಹಳೇ ಮದ್ರಾಸ್‌ ರಸ್ತೆಯನ್ನು ಈ ಹಿಂದೆ ಬಳಸಲಾಗುತ್ತಿತ್ತು. ಆದರೆ, ಕಾಲಕ್ರಮೇಣ ಈ ರಸ್ತೆ ಬಿಟ್ಟು ಬದಲಿ ರಸ್ತೆ ಕೈಗೊಂಡಿದ್ದು, ಈ ಹಳೇಮದ್ರಾಸ್‌ ರಸ್ತೆ ಸಂಪೂರ್ಣವಾಗಿ ಒತ್ತುವರಿಯಾಗಿದೆಎಂದು ಹಲವರು ಆರೋಪಿಸಿದರು. ನಕಾಶೆಯಲ್ಲಿ ಇದೇ ರಸ್ತೆಯಲ್ಲೇ ರಾಜ್ಯ ಹೆದ್ದಾರಿ ಇದ್ದು, ಈ 300 ಮೀಟರ್‌ ರಸ್ತೆಯ ಮೂಲಕವೇ ಅಭಿವೃದ್ಧಿಪಡಿಸುವುದಾಗಿ ಅಧಿಕಾರಿಗಳು ತಿಳಿಸಿದರು.

ಜಿಪಂ ಮಾಜಿ ಸದಸ್ಯ ಅ.ಮು.ಲಕ್ಷ್ಮೀನಾರಾಯಣ್‌, ತಾಪಂ ಮಾಜಿ ಸದಸ್ಯ ವೆಂಕಟರಾಮ್‌,ಮುಖಂಡರಾದ ಬಲಿಜಪಲ್ಲಿ ಕೃಷ್ಣಮೂರ್ತಿ, ರಾಯಸಂದ್ರ ಮುನಿರಾಮ್‌, ಇತರೆ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.