ಸೋಂಕಿತನ ಪತ್ತೆಗೆ ಇನ್ನೂ ಹುಡುಕಾಟ


Team Udayavani, Jun 9, 2020, 7:06 AM IST

sonkita-hudukata

ಕೋಲಾರ: ಐದು ದಿನಗಳ ಹಿಂದೆ ಜಿಲ್ಲೆಯಿಂದ ನಾಪತ್ತೆಯಾಗಿರುವ ಕೋವಿಡ್‌ 19 ಪಾಸಿಟಿವ್‌ ವ್ಯಕ್ತಿಗಾಗಿ ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ ಹುಡುಕಾಟ ಮುಂದುವರಿಸಿದೆ. ನಗರದ ಎಪಿಎಂಸಿ ಸಮೀಪದ ಹೋಟೆಲ್‌ ಒಂದರಲ್ಲಿ  ಕೆಲಸ ಮಾಡಲು ಆಗಮಿಸಿದ್ದ ಮಂಡ್ಯ ಜಿಲ್ಲೆ ಮೂಲದ ನಲವತ್ತು ವರ್ಷದ ವ್ಯಕ್ತಿ ತಾನಾಗಿಯೇ ಕೋವಿಡ್‌ 19 ಪರೀಕ್ಷೆಗಾಗಿ ಗಂಟಲ ದ್ರವ ನೀಡಿದ್ದನು.

ಈತನಿಗೆ ಕೋವಿಡ್‌ 19 ಪಾಸಿಟಿವ್‌ ಇರುವುದು ಪತ್ತೆಯಾದ ಕ್ಷಣದಿಂದ ತನ್ನ ಮೊಬೈಲ್‌  ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದನು. ಕೊನೆಯ ಕರೆ ಸ್ಪೀಕರಿಸಿದ ಸಂದರ್ಭದಲ್ಲಿ ತಾನು ಬಂಗಾರಪೇಟೆಯಲ್ಲಿದ್ದೇನೆ ಎಂದು ತಿಳಿಸಿದ್ದ ವ್ಯಕ್ತಿ, ಆನಂತರ ಮೊಬೈಲ್‌ ಆಫ್ ಮಾಡಿಕೊಂಡು ಜಿಲ್ಲಾಡಳಿತ ಹಾಗೂ ಪೊಲೀಸ್‌  ಇಲಾಖೆಯ ತಲೆಬಿಸಿಗೆ ಕಾರಣವಾಗಿದ್ದಾನೆ.

ದೂರು ದಾಖಲು: ಕೋವಿಡ್‌ 19 ಪಾಸಿಟಿವ್‌ ವ್ಯಕ್ತಿ ನಾಪತ್ತೆಯಾದ ಘಟನೆಯನ್ನು ಗಂಭೀರವಾಗಿ ಸ್ಪೀಕರಿಸಿರುವ ಜಿಲ್ಲಾ ಆರೋಗ್ಯ ಇಲಾಖೆಯು ಪಾಸಿಟಿವ್‌ ವ್ಯಕ್ತಿ ನಾಪತ್ತೆಯಾಗಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಹಾಗೆಯೇ  ಈತನನ್ನು ಹೋಟೆಲ್‌ ಕೆಲಸಕ್ಕೆ ಇಟ್ಟುಕೊಂಡು ಮೂರು ದಿನ ಕೆಲಸ ಮಾಡಿಸಿಕೊಂಡು ಊಟ ಹಾಕಿ, ಹೋಟೆಲ್‌ ಪಾರ್ಸೆಲ್‌ ಕಟ್ಟಿಕೊಡುವ ಕೆಲಸ ನೀಡಿ, ಅಂತಿಮವಾಗಿ 600 ರೂ. ನೀಡಿ ನಾಪತ್ತೆಯಾಗಲು ಕಾರಣರಾಗಿರುವ ಹೋಟೆಲ್‌  ಮಾಲಿಕ ಚೇತನ್‌ ಎಂಬುವರ ಮೇಲೂ ಮಾಹಿತಿ ನೀಡದ ಆರೋಪದ ಮೇಲೆ ದೂರು ದಾಖಲಿಸಲಾಗಿದೆ.

ಹೋಟೆಲ್‌ ಮಾಲಿಕ ಚೇತನ್‌ ತನ್ನ ಹೋಟೆಲ್‌ನಲ್ಲಿ ಕೆಲಸಕ್ಕಿದ್ದ ವ್ಯಕ್ತಿ ಪಾಸಿಟಿವ್‌ ಎಂದು ತಿಳಿಯುತ್ತಿದ್ದಂತೆಯೇ ಹೋಟೆಲ್‌  ಮುಚ್ಚಿಸುತ್ತಾರೆಂಬ ಭೀತಿಯಲ್ಲಿ ಆತನನ್ನು ಕಳುಹಿಸಿಕೊಟ್ಟಿದ್ದಾರೆಂದು ಆರೋಗ್ಯ ಇಲಾಖೆ ಅಧಿಕಾರಿಗಳು ದೂರುತ್ತಾರೆ. ಆದರೂ, ಇದೀಗ ಹೋಟೆಲ್‌ ಮುಚ್ಚಿಸಿದ್ದು, ಅದರ ಮಾಲೀಕರು ಹಾಗೂ ಪಾರ್ಸೆಲ್‌ ಪಡೆದವರನ್ನು ಗುರುತಿಸಿ  ಕ್ವಾರಂಟೈನ್‌ ಮಾಡಲಾಗಿದೆ.

ತಂಡ ರಚನೆ: ಕೋವಿಡ್‌ 19 ಪಾಸಿಟಿವ್‌ ವ್ಯಕ್ತಿ ನೆರೆಯ ಆಂಧ್ರಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ತಲೆ ಮರೆಸಿಕೊಂಡಿರಬಹುದು ಎಂಬ ಶಂಕೆಯ ಮೇಲೆ ಆತನನ್ನು ಹುಡುಕಲು ಪೊಲೀಸ್‌ ಇಲಾಖೆ ತಂಡವೊಂದನ್ನು ರಚಿಸಿದೆ.  ಇಲಾಖೆಯ ಮೇಲಧಿಕಾರಿಗಳು ನೆರೆ ರಾಜ್ಯಗಳ ಪೊಲೀಸ್‌ ಇಲಾಖೆಗೂ ಈ ಕುರಿತು ಮಾಹಿತಿ ನೀಡಿ ಹುಡುಕಾಟಕ್ಕೆ ಸಹಕರಿಸುವಂತೆ ಕೋರಿದ್ದಾರೆ. ಕೋವಿಡ್‌ 19 ಪಾಸಿಟಿವ್‌ ವ್ಯಕ್ತಿಯ ಮೊಬೈಲ್‌ನಿಂದ ಹೊರ ಹೋಗಿರುವ ಕರೆಗಳ ಜಾಡು ಹಿಡಿದು ತನಿಖೆ ಮುಂದುವರಿಸುತ್ತಿರುವ ಪೊಲೀಸರಿಗೆ  ಪಾಸಿಟಿವ್‌ ವ್ಯಕ್ತಿ ಆಂಧ್ರಪ್ರದೇಶದ ಕುಪ್ಪಂನಲ್ಲಿರಬಹುದು ಎಂಬ ಸುಳಿವು ದೊರೆ  ತಿದ್ದು, ಹುಡುಕಾಟ ಸಾಗಿದೆ.

ಮತ್ತೂಂದು ಮೂಲದ ಪ್ರಕಾರ ನಾಪತ್ತೆಯಾಗಿರುವ ವ್ಯಕ್ತಿ ಕಳ್ಳತನ  ಮಾಡುವ ಹವ್ಯಾಸ ಹೊಂದಿದ್ದು, ತನ್ನ ಜಾಡು ಪೊಲೀಸರಿಗೆ ಸಿಗಬಾರದೆಂಬ ಉದ್ದೇಶ ದಿಂದಲೇ ನಾಪತ್ತೆಯಾಗಿದ್ದಾನೆಂಬ ಮಾಹಿತಿ ಯೂ ಹೊರ ಬಿದ್ದಿದೆ. ಒಂದು ವೇಳೆ ಈತ ಗಡಿಯ ಮೂರು ರಾಜ್ಯಗಳಲ್ಲಿ ಓಡಾಡಿದ್ದರೆ ಈತನ  ಜಾಡನ್ನು ಪತ್ತೆ ಹಚ್ಚಿ ಈತನಿಂದ ಸೋಂಕು ಹರಡಿರಬಹುದಾದ ವ್ಯಕ್ತಿಗಳನ್ನು ಗುರುತಿಸಿ ಕ್ವಾರಂಟೈನ್‌ ಮಾಡುವುದು ಕರ್ನಾಟಕ, ಆಂಧ್ರಪ್ರದೇಶ ಹಾಗೂ ತಮಿಳುನಾಡು ಪೊಲೀಸ್‌ ಅಧಿಕಾರಿಗಳಿಗೆ ದೊಡ್ಡ ಕೆಲಸವಾಗಲಿದೆ.

ಕೋಲಾರ ಜಿಲ್ಲೆಯಿಂದ ಕೋವಿಡ್‌ 19 ಪಾಸಿಟಿವ್‌ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ಹಾಗೂ ಈತನ ಮಾಹಿತಿ ಮುಚ್ಚಿಟ್ಟ ಹೋಟೆಲ್‌ ಮಾಲೀಕರ ಮೇಲೆ ಎರಡು ಪ್ರತ್ಯೇಕ ದೂರುಗಳನ್ನು ದಾಖಲಿಸಲಾಗಿದೆ. ಪಾಸಿಟಿವ್‌ ವ್ಯಕ್ತಿಯನ್ನು ನೆರೆಯ  ಆಂಧ್ರಪ್ರದೇಶ ಹಾಗೂ ತಮಿಳುನಾಡುಗಳಲ್ಲಿ ಹುಡುಕಲಾಗುತ್ತಿದೆ.
-ಡಾ.ಚಾರಿಣಿ, ಕೋವಿಡ್‌-19, ಜಿಲ್ಲಾ ನೋಡಲ್‌ ಅಧಿಕಾರಿ

* ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar: ಕುರ್ಚಿಗೆ ಅಧಿಕಾರಿಗಳಿಬ್ಬರ ತಿಕ್ಕಾಟ; ಕೆಲಸ ಸ್ಥಗಿತ

Kolar: ಕುರ್ಚಿಗೆ ಅಧಿಕಾರಿಗಳಿಬ್ಬರ ತಿಕ್ಕಾಟ; ಕೆಲಸ ಸ್ಥಗಿತ

11

Drinking water: ಜಾತ್ರೆಗೆ ಬಂದ ರಾಸುಗಳಿಗೆ ಕುಡಿಯಲು ನೀರಿಲ!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.