ಡಿಸಿಸಿ ಬ್ಯಾಂಕ್‌ನಿಂದಲೇ ಸಬ್ಸಿಡಿ ಸಾಲ ವಿತರಣೆ


Team Udayavani, Aug 28, 2019, 1:17 PM IST

kolar-tdy-1

ಕೋಲಾರ ಜಿಪಂ ಸಭಾಂಗಣದಲ್ಲಿ ಮಂಗಳವಾರ ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು.

ಕೋಲಾರ: ಸರ್ಕಾರ ಅನುಷ್ಠಾನಗೊಳಿಸುತ್ತಿರುವ ಅನೇಕ ಯೋಜನೆಗಳ ಸೌಲಭ್ಯಗಳು, ಸಬ್ಸಿಡಿಗಳು, ರಾಷ್ಟ್ರೀಕೃತ ಬ್ಯಾಂಕ್‌ ಮೂಲಕ ಪಡೆಯುವಲ್ಲಿ ಸಾಕಷ್ಟು ಸಮಸ್ಯೆಗಳಾಗುತ್ತಿದೆ ಎಂದು ಶಾಸಕ ಹಾಗೂ ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ವಾಣಿಜ್ಯ ಬ್ಯಾಂಕ್‌ಗಳಿಗೆ ಎಲ್ಲಾ ರೀತಿಯ ಸೌಕರ್ಯ ನೀಡಿದ್ದರೂ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ, ಕೇವಲ ಠೇವಣಿ ಪಡೆದುಕೊಳ್ಳಲು ಇಲ್ಲಿಗೆ ಬಂದಿವೆ, ಅದರಲ್ಲಿ ಸೌಕರ್ಯ ಪಡೆದುಕೊಳ್ಳಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಹರಾಜು ಬೆದರಿಕೆ: ಸಕಾಲದಲ್ಲಿ ಪ್ರಯೋಜನೆ ತಲುಪು ತ್ತಿಲ್ಲ, ಸರ್ಕಾರಿ ಸಾಲ ಪಡೆದುಕೊಳ್ಳಲು ಆಸ್ತಿ ಅಡ ಮಾನ ಇಡಬೇಕಾಗುತ್ತದೆ. ಸಾಲ ಕೊಟ್ಟ ಮೇಲೆ ಮೊದಲ ತಿಂಗಳಿಂದಲೇ ರಕ್ತ ಹೀರಲು ಶುರು ಮಾಡುತ್ತಾರೆ. ಅಂತಹ ಸಂದರ್ಭದಲ್ಲಿ ಕಟ್ಟದಿದ್ದರೆ ಆಸ್ತಿ ಹರಾಜು ಹಾಕುವ ಬೆದರಿಕೆ ಹಾಗುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ತಪ್ಪಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳಲ್ಲಿ ಯೋಜನೆಗಳನ್ನು ಡಿಸಿಸಿ ಬ್ಯಾಂಕ್‌ ಮೂಲಕವೇ ಫ ಲಾನುಭವಿಗೆ ಕಲ್ಪಿಸುವ ಪ್ರಸ್ತಾವನೆಗೆ ಜು.23ರಂದು ಸಮ್ಮತಿಸಿರುವ ಆರ್ಥಿಕ ಇಲಾಖೆ, ಕೋಲಾರ ಜಿಲ್ಲೆ ಯಲ್ಲಿ ಪ್ರಾಯೋಗಿಕ ಅನುಷ್ಠಾನಕ್ಕೆ ನಿರ್ದೇಶನ ನೀಡಿದೆ ಎಂದು ಹೇಳಿದರು.

ದಲ್ಲಾಳಿಗಳ ಓಡಾಟ ನಿಲ್ಲಿಸಿ: ಸಿಬ್ಬಂದಿ ಮತ್ತು ಫಲಾನು ಭವಿಗಳು ಬಿಟ್ಟರೆ ಮೂರನೇ ವ್ಯಕ್ತಿಗಳು ಕಚೇರಿಯಲ್ಲಿ ಓಡಾಡಲು ಬಿಡಬೇಡಿ ಎಂದು ನಿಗಮಗಳ ಅಧಿಕಾರಿಗಳಿಗೆ ರಮೇಶ್‌ಕುಮಾರ್‌ ಆದೇಶಿಸಿದರು.

ಎಸ್ಸಿ, ಎಸ್ಟಿ, ಹಿಂದುಳಿದ ವರ್ಗ ಹಾಗೂ ಅಲ್ಪಸಂ ಖ್ಯಾತರ ನಿಗಮಗಳಲ್ಲಿ ದೊರೆಯುವ ಯೋಜನೆಗಳ ಮಾಹಿತಿಯನ್ನು ಜನರಿಗೆ ತಿಳಿಸಿ, ಸದ್ಬಳಕೆ ಮಾಡಿ ಕೊಳ್ಳಬೇಕಾದ ಜವಾಬ್ದಾರಿ ನಿಮ್ಮೆಲ್ಲರದ್ದಾಗಿದೆ ಎಂದು ತಿಳಿಸಿದರು.

ಪೈಸೆಯೂ ಪೋಲಾದಂತೆ ನೋಡಿಕೊಳ್ಳಿ: ಸರ್ಕಾರ ದಿಂದ ಎಲ್ಲಾ ವರ್ಗಗಳ ಜನರಿಗೆ ಬರುವ ಅನುದಾನ ದಲ್ಲಿ ಒಂದು ಪೈಸೆಯೂ ಪೋಲಾಗದಂತೆ ಕಾರ್ಯ ವನ್ನು ನಿರ್ವಹಿಸಿ. ಬೆವರು ಸುರಿಸಿ ಸಾರ್ವಜನಿಕರು ತೆರಿಗೆ ಕಟ್ಟಿರುವ ಹಣ ಅದು. ಸುಮ್ಮನೇ ಫಲಾನು ಭವಿಗಳಿಗೆ ಸಿಗದೆ ಮಧ್ಯವರ್ತಿಗಳಿಗೆ ದೊರಕುವ ಹಾಗೆ ಮಾಡಿದರೆ ಅವರ ಪಾಯಿಖಾನೆ ತಿನ್ನುವಾಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಕಾಲದಲ್ಲಿ ಸಿಗುತ್ತಿಲ್ಲ: ಸರ್ಕಾರ ಹಲವು ಉಪ ಯೋಗಗಳಿಗಾಗಿ ಸಬ್ಸಿಡಿ ರೂಪದಲ್ಲಿ ಸಾಲವನ್ನು ಪಡೆಯಲು ಯೋಜನೆಗಳನ್ನು ತರುತ್ತಿದ್ದು, ಫಲಾನು ಭವಿಗಳು ಅದನ್ನು ಪಡೆಯಲು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಕಾಲದಲ್ಲಿ ಪೂರ್ಣ ಬೆಂಬಲ ಸಿಗುತ್ತಿಲ್ಲ. ಆದರಿಂದ ಈ ರೀತಿಯ ಸ್ಕೀಂಗಳನ್ನು ಪಡೆಯಲು ಡಿಸಿಸಿ ಬ್ಯಾಂಕ್‌ ಮೂಲಕ ಸುಲಭವಾಗುವ ಹಾಗೆ ಎಲ್ಲಾ ರೀತಿ ಕ್ರಮ ಮಾಡಲಾಗುತ್ತಿದೆ ಎಂದರು.

ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದು ಇನ್ನೂ ಹೆಚ್ಚಿನ ರೀತಿಯಲ್ಲಿ ಜನಗಳಿಗೆ ಉಪಯೋಗವಾಗುವಾಗೆ ಕೆಲಸಗಳನ್ನು ನಿರ್ವಹಿಸಿ ಎಂದು ಸೂಚಿಸಿದರು.

ವಿಧಾನ ಪರಿಷತ್‌ ಸದಸ್ಯ ನಜೀರ್‌ಅಹಮದ್‌, ಜಿಪಂ ಉಪಾಧ್ಯಕ್ಷೆ ಯಶೋದಮ್ಮ, ಡೀಸಿ ಜೆ. ಮಂಜುನಾಥ್‌, ಉಪವಿಭಾಧಿಕಾರಿ ಸೋಮಶೇಖರ್‌, ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಗೋವಿಂದ ಗೌಡ, ದಲಿತ ಮುಖಂಡ ಸಿ.ಎಂ.ಮುನಿಯಪ್ಪ, ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.