ನಿರ್ಭೀತ, ನ್ಯಾಯಯುತ ಮತದಾನಕ್ಕೆ ಸಲಹೆ
Team Udayavani, Mar 29, 2019, 1:07 PM IST
ಮುಳಬಾಗಿಲು: ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಮತದಾರರು ನ್ಯಾಯಯುತ ಹಾಗೂ ಮುಕ್ತ ಮತ್ತು ನಿರ್ಭೀತಿಯಿಂದ ಮತದಾನ ಮಾಡಲು ಪೌರಾಯುಕ್ತ ಎನ್.ರಾಜು ಮತ್ತು ತಾಪಂ ಇಒ ಡಾ.ಕೆ.ಸರ್ವೇಶ್ ಸಲಹೆ ನೀಡಿದರು
ಮುಳಬಾಗಿಲು ನಗರಸಭೆ ಕಾರ್ಯಾಲಯ ಮತ್ತು ತಾಪಂ ವತಿಯಿಂದ ಸ್ವೀಪ್ ಕಾರ್ಯಕ್ರಮದಡಿ ಕಡ್ಡಾಯ ಮತದಾನ ಮಾಡಲು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರಿಗೆ ಮತ್ತು ಕೆಎಸ್ಆರ್ಟಿಸಿ ಘಟಕದಲ್ಲಿ ವ್ಯವಸ್ಥಾಪಕ ದಯಾನಂದ್ ಒಳಗೊಂಡಂತೆ ಚಾಲಕರು ಮತ್ತು ನಿರ್ವಾಹಕರು ಹಾಗೂ ಸಿಬ್ಬಂದಿಗಳಿಗೆ ಜಾಗೃತಿ ಮೂಡಿಸಲಾಯಿತು.
ಈ ವೇಳೆ ಮಾತನಾಡಿದ ಪೌರಾಯುಕ್ತ ಎನ್.ರಾಜು, ಏ.18 ರಂದು ಲೋಕಸಭೆ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಮೂಲಕ ಮತದಾನ ನಡೆಯಲಿರುವುದರಿಂದ ಮತದಾರರು ಎಪಿಕ್ ಕಾರ್ಡ್ ಹಾಜರು ಪಡಿಸಿ ಮತದಾನ ಮಾಡಬೇಕಾಗಿರುತ್ತದೆ. ಚುನಾವಣಾ ಆಯೋಗವು ಹಲವಾರು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ.
ನ್ಯಾಯಯುತ ಹಾಗೂ ಮುಕ್ತ ಮತ್ತು ನಿರ್ಭೀತಿಯಿಂದ ಮತದಾನ ಮಾಡಲು 18 ವರ್ಷ ಮೇಲ್ಪಟ್ಟಿರಬೇಕಲ್ಲದೇ ಗುರುತಿಗಾಗಿ ಎಪಿಕ್ ಕಾರ್ಡ್ ಹೊಂದಿರಬೇಕು. ಮತಪಟ್ಟಿಯಲ್ಲಿ ಹೆಸರು ಖಾತ್ರಿ ಪಡಿಸಿಕೊಂಡು ಮತದಾನ ಮಾಡಬೇಕು. ಒಂದಕ್ಕಿಂತ ಹೆಚ್ಚುಕಡೆ ಪಟ್ಟಿಯಲ್ಲಿ ಹೆಸರಿರುವುದು ಕ್ರಿಮಿನಲ್ ಅಪರಾಧವಾಗಿದ್ದು, ಸಾಭೀತಾದರೆ ಒಂದು ವರ್ಷ ಜೈಲು ಸಜೆ ಕಡ್ಡಾಯ. ಹೀಗಾಗಿ ಮುಕ್ತ ಮತದಾನ ಮಾಡಿ ಎಂದು ಹೇಳಿದರು.
ನಗರಸಭೆ ಕಂದಾಯಾಧಿಕಾರಿ ವಠಾರ್, ಸ್ವೀಪ್ ಸದಸ್ಯರಾದ ಐ.ಸುನೀಲ್ಕುಮಾರ್ ಮತ್ತು ಶೋಭನ್ಬಾಬು, ತಾಲೂಕು ಆರೋಗ್ಯಾಧಿಕಾರಿ ಡಾ.ಆನಂದ್, ಡಾ.ಶಂಕರ್ ಮತ್ತು ಕೆಎಸ್ಆರ್ಟಿಸಿ ಘಟಕದ ಚಾಲಕರು ಮತ್ತು ನಿರ್ವಾಹಕರು ಹಾಗೂ ಸಿಬ್ಬಂದಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್