ಭಾನುವಾರದ ಲಾಕ್ಡೌನ್ಗೆ ಬೆಂಬಲ
Team Udayavani, Jul 20, 2020, 10:19 AM IST
ಕೋಲಾರ: ಕೋವಿಡ್ ಸೋಂಕು ಹರಡುವುದನ್ನು ತಡೆಯಲು ರಾಜ್ಯ ಸರಕಾರ ಸೂಚಿಸಿರುವ ಭಾನುವಾರದ ಲಾಕ್ಡೌನ್ಗೆ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿದ್ದು, ಎಪಿಎಂಸಿ ಮಾರುಕಟ್ಟೆ ವಹಿವಾಟು ಹೊರತುಪಡಿಸಿ ಅಂಗಡಿ, ಮುಂಗಟ್ಟುಗಳು ಬಂದ್ ಆಗಿದ್ದವು.
ಜಿಲ್ಲೆಯಲ್ಲೂ ಸೋಂಕಿತರ ಸಂಖ್ಯೆ 500ರ ಗಡಿ ದಾಟಿದ್ದು, ಜನತೆಯಲ್ಲೂ ಆತಂಕ ಮನೆ ಮಾಡಿದೆ. ಕೊರೊನಾ ಮಾರಕತೆ ಅರಿತಿರುವ ಜನತೆ ಭಾನುವಾರ ಬೆಳಗ್ಗೆ ಮನೆಬಿಟ್ಟು ಹೊರ ಬರಲೇ ಇಲ್ಲ, ನಗರದ ಎಲ್ಲಾ ರಸ್ತೆಗಳು ಬಿಕೋ ಎನ್ನುತ್ತಿದ್ದು, ಅಂಗಡಿ ಮುಂಗಟ್ಟುಗಳು, ಹೋಟೆಲ್, ರಸ್ತೆ ಬದಿ ವ್ಯಾಪಾರ ಸಂಪೂರ್ಣ ಬಂದ್ ಆಗಿತ್ತು. ನಗರದ ಸದಾ ಜನನಿಬಿಡ ಎಂ.ಜಿ.ರಸ್ತೆ, ದೊಡ್ಡಪೇಟೆ, ಕಾಳಮ್ಮ ಗುಡಿ ಬೀದಿ, ಅಮ್ಮವಾರಿಪೇಟೆ, ಬಸ್ ನಿಲ್ದಾಣ ವೃತ್ತಗಳು ಜನರಿಲ್ಲದೇ ಬಿಕೋ ಎನ್ನುತ್ತಿತ್ತು.
ಶ್ರಾವಣ ಹಿನ್ನೆಲೆ, ಬಾಡೂಟ ಜೋರು: ಶ್ರಾವಣಮಾಸ ಆರಂಭವಾಗುವ ಹಿನ್ನೆಲೆಯಲ್ಲಿ ಇಡೀ ನಗರದ ಮಾಂಸದ ಅಂಗಡಿಗಳ ಮುಂದೆ ಜನತೆ ಸಾಲುಗಟ್ಟಿ ನಿಂತಿದ್ದ ದೃಶ್ಯ ಕಂಡು ಬಂತು. ಲಾಕ್ಡೌನ್ ಕಾರಣ ಜನ ಮನೆಯಲ್ಲೇ ಉಳಿದುಕೊಂಡಿರುವ ಕಾರಣ ಮತ್ತು ಶ್ರಾವಣ ಮಾಸದಲ್ಲಿ ಜನತೆ ಮಾಂಸ ತಿನ್ನುವುದಕ್ಕೆ ನಿಷೇಧ ಏರಿಕೊಳ್ಳುವ ಹಿನೆ°ಲೆಯಲ್ಲಿ ಚಿಕನ್, ಮಟನ್ ವ್ಯಾಪಾರ ಜೋರಾಗಿಯೇ ನಡೆದಿತ್ತು. ಹಾಲು, ಔಷಧಿ, ದಿನಸಿ ಅಂಗಡಿಗಳನ್ನು ಹೊರತುಪಡಿಸಿ ಉಳಿದೆಲ್ಲ ಬಂದ್ ಆಗಿತ್ತು. ದಿನಸಿ ಅಂಗಡಿಗಳನ್ನು ಸಹಾ ಮಧ್ಯಾಹ್ನ 11 ಗಂಟೆಯ ನಂತರ ಪೊಲೀಸರು ಮುಚ್ಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ