ಹಳ್ಳಿಗಳಿಂದ ಹಿಂದೂ ಸಂಸ್ಕೃತಿ ಉಳಿವು; ಜಸ್ಟೀಸ್‌ ಕುಮಾರ್‌

ಪ್ರಭಾವ ಹಳ್ಳಿಗಳಲ್ಲಿ ಕಡಿಮೆ ಇದೆ. ಗ್ರಾಮೀಣ ಜನರಿಂದಲೇ ಇವೆಲ್ಲ ಉಳಿಯುತ್ತಿವೆ.

Team Udayavani, Jun 3, 2022, 5:58 PM IST

ಹಳ್ಳಿಗಳಿಂದ ಹಿಂದೂ ಸಂಸ್ಕೃತಿ ಉಳಿವು; ಜಸ್ಟೀಸ್‌ ಕುಮಾರ್‌

ಮುಳಬಾಗಿಲು: ರಾಜಕೀಯ ಹಿತಾಸಕ್ತಿಗಳಿಗೆ ಬಲಿಯಾಗುತ್ತಿರುವ ಹಿಂದೂ ಧರ್ಮ, ನಮ್ಮ ಸಂಸ್ಕೃತಿ, ಆಚಾರ – ವಿಚಾರಗಳು ಇನ್ನೂ ಉಳಿದಿರುವುದು ಗ್ರಾಮೀಣ ಜನರಿಂದ ಎಂದು ಜಸ್ಟೀಸ್‌ ಕುಮಾರ್‌ ಹೇಳಿದರು.

ತಾಲೂಕಿನ ಆವಣಿ ಗ್ರಾಮದ ಶೃಂಗೇರಿ ಮಠದಲ್ಲಿ ನಡೆದ ನೂತನ ಮಠಾಧಿಪತಿ ಶಾಂತಾನಂದಭಾರತೀ ಸ್ವಾಮಿಗಳ ಪೀಠಾರೋಹಣ, ಪಟ್ಟಾಭಿಷೇಕ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಸಮಾಜ ಎಷ್ಟೇ ಆಧುನಿಕವಾಗಿ ಅಭಿವೃದ್ಧಿ ಹೊಂದಿದ್ದರೂ ಶತಮಾನಗಳಿಂದಲೂ ನಮ್ಮ ರಾಷ್ಟ್ರದಲ್ಲಿ ಹಿಂದೂ ಧರ್ಮಕ್ಕೆ ಸಾಕಷ್ಟು ಪ್ರಾಧಾನ್ಯತೆ ನೀಡಲಾಗಿದೆ. ಅದನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಿಕೊಂಡು ಹೋಗಬೇಕಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ವಿವರಿಸಿದರು.

ನನಗೆ ಆ ಅವಕಾಶ ಒದಗಿಬಂದಿದೆ: ಈ ನಿಟ್ಟಿನಲ್ಲಿಯೇ ತಾವು ಹಲವು ಕಾರ್ಯಕ್ರಮಗಳ ಜವಾಬ್ದಾರಿ ವಹಿಸಿಕೊಂಡಿದ್ದರೂ, ಇದು ವಿಭಿನ್ನ ಮತ್ತು ತುಂಬಾ ವಿಶೇಷವಾಗಿದೆ. ದೈವ ಕಾರ್ಯಕ್ಕೆ ಎಲ್ಲರಿಗೂ ಅವಕಾಶ ಸಿಗುವುದಿಲ್ಲ, ಆದರೆ, ನನಗೆ ಆ ಅವಕಾಶ ಒದಗಿಬಂದಿದ್ದು, ಅದನ್ನು ಯಶಸ್ವಿಯಾಗಿ ನಿಭಾಯಿಸುತ್ತೇನೆ ಎಂದು ಹೇಳಿದರು.

ಎಲ್ಲರೂ ದೈವ ಕಾರ್ಯದಲ್ಲಿ ಪಾಲ್ಗೊಳ್ಳಲಿ: ಇತ್ತೀಚಿನ ದಿನಗಳಲ್ಲಿ ತಮ್ಮ ಸ್ವಹಿತಾಸಕ್ತಿಗಳಿಗಾಗಿ, ರಾಜಕೀಯಕ್ಕಾಗಿ ನಮ್ಮ ಧರ್ಮ, ಸಂಸ್ಕೃತಿ ಜೊತೆಗೆ ಜೀವನದ ಪದ್ಧತಿಯೂ ಬದಲಾಗತೊಡಗಿದೆ. ಅದರ ಪ್ರಭಾವ ಹಳ್ಳಿಗಳಲ್ಲಿ ಕಡಿಮೆ ಇದೆ. ಗ್ರಾಮೀಣ ಜನರಿಂದಲೇ ಇವೆಲ್ಲ ಉಳಿಯುತ್ತಿವೆ. ಆದ್ದರಿಂದ ಎಲ್ಲರೂ ತಮ್ಮ ಮಕ್ಕಳಿಗೆ ಈಗಿನಿಂದಲೇ ಸಂಸ್ಕಾರ ಹೇಳಿ ಕೊಡಬೇಕಿದೆ ಎಂದ ಅವರು, ಕಾರ್ಯಕ್ರಮದ ರೂಪು ರೇಷೆಗಳನ್ನು ತಿಳಿಸಿದರು. ಅಲ್ಲದೇ, ಎಲ್ಲರೂ ಈ ದೈವ ಕಾರ್ಯದಲ್ಲಿ ಪಾಲ್ಗೊಳ್ಳಬೇಕೆಂದು ಜನರಲ್ಲಿ ಮನವಿ ಮಾಡಿದರು.

ಮನೆ ಹಬ್ಬದಂತೆ ಆಚರಿಸಿ: ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಮಾತನಾಡಿ, ಜೂ.8, 9ರಂದು ಗುರುವಾರ ಶೃಂಗೇರಿ ಮಠದ ಜಗದ್ಗುರುಗಳಿಂದ ಶಾಂತಾನಂದ ಭಾರತೀ ಸ್ವಾಮಿಗಳಿಗೆ ಆವಣಿ ಶೃಂಗೇರಿ ಮಠದ ಸ್ವಾಮೀಜಿಯಾಗಿ ಪೀಠಾರೋಹಣ ಮತ್ತು ಪಟ್ಟಾಭಿಷೇಕ ನಡೆಯಲಿದೆ. ಗ್ರಾಮಸ್ಥರೆಲ್ಲರೂ ಪಾಲ್ಗೊಂಡು ತಮ್ಮ ಮನೆ ಹಬ್ಬದಂತೆ ಆಚರಿಸಬೇಕೆಂದು ಮನವಿ ಮಾಡಿದರು. ನಂತರ ಕಾರ್ಯಕ್ರಮದ ರೂಪುರೇಷೆಗಳು, ಸಿದ್ಧತೆ, ಪ್ರಚಾರ ಸೇರಿ ಇನ್ನಿತರ ವಿಷಯಗಳ ಕುರಿತು ಚರ್ಚೆ ನಡೆಸಿ, ನಿರ್ಣಯ ಕೈಗೊಂಡು ಕಾರ್ಯಕ್ರಮ ಅದ್ಧೂರಿಯಾಗಿ ಮಾಡಲು ತಿಳಿಸಿದರು.

ವಿಶೇಷ ಅಧಿಕಾರಿ ಪ್ರಸನ್ನ, ಜಿಪಂ ಮಾಜಿ ಸದಸ್ಯ ಕೃಷ್ಣಪ್ಪ, ಪಿಡಿಒ ನಾರಾಯಣಸ್ವಾಮಿ, ಸದಸ್ಯರಾದ ಲಕ್ಷ್ಮೀಪ್ರಿಯ, ಆವಣಿ ಶೃಂಗೇರಿ ಮಠದ ಸಮಿತಿ ಸದಸ್ಯರಾದ ಮಲ್ಲನಾಯಕನಹಳ್ಳಿ ಶ್ರೀನಿವಾಸ, ಹೊಳಲಿ ಪ್ರಕಾಶ್‌, ಶಿಳ್ಳೆಂಗೆರೆ ಮಹೇಶ್‌, ಗ್ರಾಮದ ಮುಖಂಡರು, ಹಿಂದೂಪರ ಸಂಘಟನೆಗಳ ಮುಖಂಡರು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.