ನೀರಿನ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಿ
Team Udayavani, Apr 24, 2020, 5:17 PM IST
ಮುಳಬಾಗಿಲು: ಕೋವಿಡ್ 19 ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾಗಿರುವ ರಾಜ್ಯದ ಜನರಿಗೆ ಸರ್ಕಾರ ನ್ಯಾಯಬೆಲೆ ಅಂಗಡಿಗಳ ಮೂಲಕ ಅಗತ್ಯ ಆಹಾರ ಧಾನ್ಯ ಉಚಿತವಾಗಿ ನೀಡುತ್ತಿದೆ. ಉಳಿ ದಂತೆ ದಾನಿಗಳು, ತಾವೂ ಆಹಾರ, ತರ ಕಾರಿ ನೀಡುತ್ತಿದ್ದೇನೆ ಎಂದು ಅಬಕಾರಿ ಸಚಿವ ಎಚ್.ನಾಗೇಶ್ ತಿಳಿಸಿದರು.
ನಗರದ ಶಾಸಕರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿ, ಕೋವಿಡ್ 19 ಲಾಕ್ಡೌನ್ನಿಂದ ತಾಲೂಕಿನಲ್ಲಿ ನೀರಿನ ಸಮಸ್ಯೆ ಉಂಟಾಗದಿರಲು ಈಗಾಗಲೇ ನೀರಿನ ಅಭಾವ ಉಂಟಾಗಿರುವ 132 ಹಳ್ಳಿಗಳ ಪೈಕಿ 85 ಹಳ್ಳಿ ಗಳಲ್ಲಿ ರೀಬೋರ್ ಕೊರೆಸಿದ್ದು, 15 ಹೊಸ ಬೋರ್ವೆಲ್ಗಳನ್ನು ಕೊರೆಸುವ ಮೂಲಕ ನೀರಿನ ಸಮಸ್ಯೆ ನಿವಾರಿಸಲಾಗಿದೆ. ಬಾಕಿ ಉಳಿದ 50ಕ್ಕೂ ಅ«ಕ ಕೊಳವೆ ಬಾವಿಗಳನ್ನು ಕೊರೆಸಲು ಬೋರ್ವೆಲ್ ಏಜೆನ್ಸಿಗೆ ಸೂಚಿಸಲಾಗಿದ್ದು ಕೊರೆಸುತಿರೆಂದರು.
ಇನ್ನು ನಗರದಲ್ಲಿ ಕೊರತೆಯಿರುವ ಕೊಳವೆ ಬಾವಿಗಳನ್ನು ಕೊರೆಸಲಾಗುವುದಲ್ಲದೇ, ನೀರಿನ ಅಭಾವ ಉಂಟಾದರೆ ತುರ್ತಾಗಿ ನೀರು ಸರಬರಾಜು ಮಾಡ ಲು ಖಾಸಗಿ ಟ್ಯಾಂಕರ್ ಪಡೆಯದೇ ನಗರಸಭೆಯಿಂದಲೇ ಹೆಚ್ಚುವರಿಯಾಗಿ ನೀರಿನ ಟ್ಯಾಂಕರ್ ಖರೀದಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದರು. ತಾಪಂ ಅಧ್ಯಕ್ಷ ಎ.ವಿ. ಶ್ರೀನಿವಾಸ್ ಮಾತನಾಡಿ, ತಾಲೂಕಿನ ಎಲ್ಲಾ ಗ್ರಾಪಂಗಳಲ್ಲಿ 14ನೇ ಹಣಕಾಸು ಯೋಜನೆ ಯಡಿ ಉಳಿಕೆ ಇರುವ 6 ಕೋಟಿ ರೂ.ಅನ್ನು ನೀರಿನ ಸಮಸ್ಯೆ ನಿವಾರಣೆಗಾಗಿ ಕೊಳವೆಬಾವಿ ಕೊರೆಸಿ, ಪಂಪು ಮೋಟಾರ್ ಅಳವಡಿಸಲು, ಪೈಪ್ಲೈನ್ ಹಾಗೂ ವಿದ್ಯುತ್ ಸಂಪರ್ಕಕ್ಕೆ ಬಳಸಿ ಕೊಳ್ಳುವಂತೆ ಸೂಚಿಸಲಾಗಿದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು