ನಾಳೆ ಸರ್ಕಾರಿ ಶಾಲಾ ಬಂದ್ ಮಾಡಿ ಶಿಕ್ಷಕರ ಪ್ರತಿಭಟನೆ
Team Udayavani, Jul 8, 2019, 12:45 PM IST
ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ವಿ.ಜಗನ್ನಾಥ್ ಇತರರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕೋಲಾರ: ಶಿಕ್ಷಕರ ಏಳು ಪ್ರಮುಖ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಎರಡನೇ ಹಂತದ ರಾಜ್ಯಾವ್ಯಾಪಿ ಹೋರಾಟದ ಭಾಗವಾಗಿ ಜು.9ರಂದು ಜಿಲ್ಲೆಯ ಎಲ್ಲಾ ಶಿಕ್ಷಕರು ಶಾಲೆಗಳನ್ನು ಬಂದ್ ಮಾಡಿ ಡಿಡಿಪಿಐ ಕಚೇರಿ ಮುಂದೆ ಪ್ರತಿಭಟನೆ ನಡೆಸಲಿದ್ದಾರೆಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ದ ಜಿಲ್ಲಾಧ್ಯಕ್ಷ ಜಗದೀಶ್ ಹೇಳಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಮೇ 30 ರಂದು ಬೆಂಗಳೂರಿನಲ್ಲಿ ಸಭೆ ಸೇರಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಜೂ.30 ರವರೆಗೂ ಗಡುವು ನೀಡಲಾಗಿತ್ತು. ಆದರೆ, ಸರಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಎರಡನೇ ಹಂತದ ಹೋರಾಟವಾಗಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳ ಡಿಡಿಪಿಐ ಕಚೇರಿಗಳ ಮುಂದೆ ಜು.9ರಂದು ಶಿಕ್ಷಕರು ಇಡೀ ದಿನ ಪ್ರತಿಭಟನೆ ನಡೆಸಲಿದ್ದಾರೆಂದು ಹೇಳಿದರು.
ಈ ಎರಡನೇ ಹಂತದ ಹೋರಾಟಕ್ಕೂ ರಾಜ್ಯ ಸರಕಾರ ಸ್ಪಂದಿಸದಿದ್ದರೆ 3ನೇ ಹಂತದ ಹೋರಾಟವಾಗಿ ಸೆ.5ರ ಶಿಕ್ಷಕರ ದಿನಾಚರಣೆಯನ್ನು ಬಹಿಷ್ಕರಿಸಿ ವಿಧಾನ ಸೌಧ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗುವುದು ಎಂದು ಎಚ್ಚರಿಸಿದರು.
ಗೋಷ್ಠಿಯಲ್ಲಿ ವಿವಿಧ ಶಿಕ್ಷಕರ ಸಂಘಗಳ ಮುಖಂಡರಾದ ಜಿ. ಶ್ರೀನಿ ವಾಸ್, ಎಂ.ನಾಗರಾಜ್, ಸಿ.ಅಪ್ಪೇಗೌಡ, ವೆಂಕಟ ಶಿವಪ್ಪ, ಜಿ.ಎಂ.ಗೋವಿಂದರೆಡ್ಡಿ, ವಿ.ಕಿಟ್ಟಪ್ಪ, ಎಂ.ನಾಗರಾಜ, ಆರ್. ನರಸಿಂಹ, ಪಿ.ಎಂ.ಕೃಷ್ಣಮೂರ್ತಿ, ವಿ. ತಿಪ್ಪಣ್ಣ, ವಿನೋದ್ಬಾಬು, ಆಂಜನೇ ಯಗೌಡ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್ ಮುಖಂಡರು ಗೈರು
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು