ತಾಂತ್ರಿಕತೆ ಅಳವಡಿಕೆ; ಡಿಸಿಸಿ ಬ್ಯಾಂಕಿಗೆ ರಾಜ್ಯ ಮಟ್ಟದ ಗೌರವ


Team Udayavani, Jan 1, 2022, 4:47 PM IST

ತಾಂತ್ರಿಕತೆ ಅಳವಡಿಕೆ; ಡಿಸಿಸಿ ಬ್ಯಾಂಕಿಗೆ ರಾಜ್ಯ ಮಟ್ಟದ ಗೌರವ

ಕೋಲಾರ: ಸಹಕಾರಿ ಬ್ಯಾಂಕಿಂಗ್‌ ವ್ಯವಸ್ಥೆಯಲ್ಲಿ ತಾಂತ್ರಿಕತೆ ಅಳವಡಿಕೆಯಲ್ಲಿ ಉತ್ತಮ ಸಾಧನೆ ಮಾಡಿರುವ ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕಿಗೆ ರಾಜ್ಯಮಟ್ಟದ ಗೌರವ ಲಭಿಸಿದೆ ಎಂದುಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹರ್ಷ ವ್ಯಕ್ತಪಡಿಸಿದರು.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ರಾಜ್ಯದಲ್ಲೇ ಮೊದಲ ಬಾರಿಗೆ ಸಹಕಾರಸಂಘಗಳ ಚಟುವಟಿಕೆಗಳನ್ನು ಗಣಕೀಕರಣಗೊಳಿಸುವ ಕಾರ್ಯದಲ್ಲಿ ಮಾಡಿರುವ ಸಾಧನೆ, ಎಟಿಎಂ ಬಳಕೆ, ಮೊಬೈಲ್‌ ಬ್ಯಾಂಕಿಂಗ್‌, ಇ-ಶಕ್ತಿ ಅನುಷ್ಠಾನ ಮತ್ತಿತರ ತಾಂತ್ರಿಕತೆ ಅಳವಡಿಕೆಯಲ್ಲಿ ಮಾಡಿರುವ ಸಾಧನೆಗಾಗಿ ನಬಾರ್ಡ್‌ ಈ ಪ್ರಶಸ್ತಿ ನೀಡಿದೆ ಎಂದು ತಿಳಿಸಿದರು.

ಮೂರು ಬ್ಯಾಂಕ್‌ಗಳಿಗೂ ಗೌರವ: ಬ್ಯಾಂಕಿಂಗ್‌ ಸೇವೆಯ ಕುರಿತು ಸಾರ್ವಜನಿಕರು, ಗ್ರಾಹಕರಿಗೆ ಹೆಚ್ಚಿನ ಮಾಹಿತಿ, ಸೌಲಭ್ಯ ಒದಗಿಸಿರುವುದನ್ನು ಗಮನಿಸಿ ಈಪ್ರಶಸ್ತಿಯನ್ನು ನೀಡಲಾಗುತ್ತಿದೆ. ರಾಜ್ಯದ ಕೋಲಾರ,ಉತ್ತರಕನ್ನಡ,ಧಾರವಾಡ ಜಿಲ್ಲಾ ಸಹಕಾರ ಬ್ಯಾಂಕುಗಳು ಈ ಗೌರವಕ್ಕೆ ಭಾಜನವಾಗಿದೆ ಎಂದು ತಿಳಿಸಿದರು.

ಜ.12ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ರೆಡಿಷನ್‌ ಬ್ಲೂ ಅತ್ರಿಯಾ ಹೋಟೆಲ್‌ನಲ್ಲಿ ನಡೆಯುವ “ರಾಜ್ಯ ಸಾಲ ಯೋಜನೆ ವಿಚಾರ ಸಂಕಿರಣ’ದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಡಿಸಿಸಿ ಬ್ಯಾಂಕಿನ ಸಾಧನೆಗೆ ಹೆಮ್ಮೆ: ಕಳೆದ 10 ವರ್ಷ ಹಿಂದೆ ದಿವಾಳಿಯಾಗಿದ್ದ ಕೋಲಾರ ಡಿಸಿಸಿ ಬ್ಯಾಂಕ್‌ ಈಗಾಗಲೇ ಎನ್‌ಪಿಎ ನಿರ್ವಹಣೆಯಲ್ಲೂ ರಾಜ್ಯಕ್ಕೆ ಮೊದಲೆಂಬ ಸಾಧನೆಯ ಗೌರವಕ್ಕೆ ಪಾತ್ರವಾಗಿದ್ದು, ಮಹಿಳೆಯರಿಗೆ ಸಾಲ ನೀಡಿಕೆ, ಪ್ರತಿ ಮಹಿಳಾ ಸದಸ್ಯರಿಗೂ ಎಟಿಎಂ ಕಾರ್ಡ್‌ ನೀಡಿಕೆಯಲ್ಲೂ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು ಹೇಳಿದರು.

ಬ್ಯಾಂಕ್‌ನಲ್ಲೇ ಹೆಚ್ಚು ಸೌಲಭ್ಯ: ಆಡಳಿತ ಮಂಡಳಿಯ ನಿರಂತರ ಪ್ರಯತ್ನ, ಸಿಬ್ಬಂದಿಯ ಪರಿಶ್ರಮ, ಸಾಲ ವಿತರಣೆ ಜತೆಗೆ ಠೇವಣಿ ಸಂಗ್ರಹ, ಸಾಲ ವಸೂಲಾತಿಗೆ ಕೈಗೊಂಡ ಕ್ರಮಗಳು ಈಗಾಗಲೇ ಪ್ರಶಂಸೆಗೆಪಾತ್ರವಾಗಿವೆ. ಸಹಕಾರ ಬ್ಯಾಂಕ್‌ ಒಂದರಲ್ಲಿ ವಾಣಿಜ್ಯ ಬ್ಯಾಂಕನ್ನು ಮೀರಿಸುವ ರೀತಿಯಲ್ಲಿ ಬ್ಯಾಂಕಿಂಗ್‌ ಸೌಲಭ್ಯ ಒದಗಿಸುವ ಮೂಲಕ ನೆಫ್ಟ್, ಆನ್‌ಲೈನ್‌ ಬ್ಯಾಂಕಿಂಗ್‌ ಸೌಲಭ್ಯವನ್ನು ಒದಗಿಸುವುದರ ಜತೆಗೆ ಗ್ರಾಮೀಣ ಪ್ರದೇಶದ ಗ್ರಾಹಕರಿಗೆ ತಮ್ಮ ಮನೆ ಬಾಗಿಲಲ್ಲೇ ಹಣ ತಲುಪಿಸಲು ಕೈಗೊಂಡಿರುವ ಮೊಬೈಲ್‌ ಬ್ಯಾಂಕಿಂಗ್‌ ವಾಹನ ಸೌಲಭ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದು ತಿಳಿಸಿದರು.

ಠೇವಣಿದಾರರಿಗೂ ಹಣ ವಾಪಸ್‌ ಮಾಡಲಾಗದ ಸ್ಥಿತಿ ತಲುಪಿದ್ದ ಬ್ಯಾಂಕ್‌ ಇಂದು ಸಾವಿರಾರು ಕೋಟಿರೂ. ವಹಿವಾಟು ನಡೆಸುವ ಮೂಲಕ ಪಾರದರ್ಶಕ ವಹಿವಾಟಿಗೂ ಸಾಕ್ಷಿಯಾಗಿದ್ದು, ಗಣಕೀಕರಣ ಕಾರ್ಯ ಜ.15 ರೊಳಗೆ ಪೂರ್ಣಗೊಳ್ಳಲು ಇತ್ತೀಚೆಗೆ ನಡೆದಸಭೆಯಲ್ಲಿ ಕಟ್ಟಪ್ಪಣೆ ನೀಡಲಾಗಿದೆ ಎಂದು ವಿವರಿಸಿದರು.

ಒಟ್ಟಾರೆಯಾಗಿ ಡಿಸಿಸಿ ಬ್ಯಾಂಕ್‌ ಕುರಿತು ವಿನಾಕಾರಣ ಟೀಕೆ ಮಾಡುತ್ತಿದ್ದವರಿಗೆ ಈಗ ಸಂದಿರುವ ಈ ಗೌರವ ಸೂಕ್ತ ಉತ್ತರ ನೀಡಿದಂತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.