ಕಾಮಗಾರಿ ಗುಣಮಟ್ಟ ಪರೀಕ್ಷಿಸಿ

ನರೇಗಾ, ಪಿಂಚಣಿಗಳ ಸಾಮಾಜಿಕ ಪರಿಶೋಧನೆ ನಡೆಸಿ: ನಿರ್ದೇಶಕ ಮುನಿರಾಜು

Team Udayavani, May 26, 2019, 1:32 PM IST

kolar-tdy-4..

ಕೋಲಾರದ ಜಿಪಂ ಸಭಾಂಗಣದಲ್ಲಿ ನಡೆದ ಸಾಮಾಜಿಕ ಪರಿಶೋಧನೆ ಕುರಿತು ಕಾರ್ಯಾಗಾರದಲ್ಲಿ ಜಿಲ್ಲೆಯ ಐದು ತಾಲೂಕುಗಳಿಂದ ಆಗಮಿಸಿದ್ದ ಗ್ರಾಪಂ ಸಂಪನ್ಮೂಲ ವ್ಯಕ್ತಿಗಳು.

ಕೋಲಾರ: ನರೇಗಾ ಜತೆಗೆ ಸಾಮಾಜಿಕ ಭದ್ರತಾ ಯೋಜನೆಯಡಿ ಬರುವ ವೃದ್ಧಾಪ್ಯ, ಅಂಗವಿಕಲ, ವಿಧವಾ, ಸಂಧ್ಯಾ ಸುರಕ್ಷಾ, ಪಿಂಚಣಿ ಯೋಜನೆಗಳ ಅನುಷ್ಠಾನದಲ್ಲಿನ ಲೋಪದೋಷಗಳ ಕುರಿತು ಸಾಮಾಜಿಕ ಪರಿಶೋಧನೆ ನಡೆಸುವಂತೆ ಗ್ರಾಪಂ ಸಂಪನ್ಮೂಲ ವ್ಯಕ್ತಿಗಳಿಗೆ ಜಿಪಂ ಸಹಾಯಕ ಯೋಜನಾ ನಿರ್ದೇಶಕ ಮುನಿರಾಜು ಸಲಹೆ ನೀಡಿದರು.

ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲೆಯ ಐದು ತಾಲೂಕುಗಳ ಗ್ರಾಪಂ ಸಂಪನ್ಮೂಲ ವ್ಯಕ್ತಿಗಳಿಗಾಗಿ ಹಮ್ಮಿಕೊಂಡಿದ್ದ ಸಾಮಾಜಿಕ ಪರಿಶೋಧನಾ ಕುರಿತ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಉದ್ಯೋಗಖಾತ್ರಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ಗುಣಮಟ್ಟ, ಉದ್ಯೋಗ ಸೃಜನ, ಬಿಡುಗಡೆಯಾಗಿರುವ ಅನುದಾನಕ್ಕೆ ತಕ್ಕಂತೆ ಕಾಮಗಾರಿ ನಡೆದಿರುವ ಕುರಿತು ಖಾತ್ರಿ ಮತ್ತಿತರ ಅಂಶಗಳ ಕುರಿತು ಗ್ರಾಪಂ ಸಂಪನ್ಮೂಲ ವ್ಯಕ್ತಿಗಳು ಪರಿಶೋಧನೆ ನಡೆಸಿ ವರದಿ ನೀಡಬೇಕಾಗುತ್ತದೆ ಎಂದು ವಿವರಿಸಿದರು.

ಇದೀಗ ಹೊಸದಾಗಿ ಸರ್ಕಾರ ನಿಮಗೆ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳ ಪರಿಶೋಧನೆಯ ಹೊಸ ಜವಾಬ್ದಾರಿ ವಹಿಸಿದ್ದು, ಸಮರ್ಪಕವಾಗಿ ನಿರ್ವಹಿಸಿ ಎಂದು ಕಿವಿಮಾತು ಹೇಳಿದರು.

ಗ್ರಾಮಸಭೆಯಲ್ಲಿ ಅನುಮೋದಿಸಿ: ಕಾರ್ಯಾಗಾರದಲ್ಲಿ ಮುಖ್ಯ ತರಬೇತುದಾರರಾಗಿ ಆಗಮಿಸಿರುವ ಜಿಲ್ಲಾ ಸಂಯೋಜಕ ಎ.ಜಿ.ಬೀರೇಶ್‌, ಪ್ರತಿ ಗ್ರಾಪಂಗೂ ನೇಮಕಗೊಂಡಿರುವ ಸಂಪನ್ಮೂಲ ವ್ಯಕ್ತಿಗಳು ನರೇಗಾ ಯೋಜನೆಯ ಪ್ರಗತಿ, ಕೈಗೊಂಡಿರುವ ಕಾಮಗಾರಿಗಳ ವಿವರವಾದ ವರದಿಯನ್ನು ಗ್ರಾಮಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದು ಅದರ ಪ್ರತಿಗಳನ್ನು ಗ್ರಾಪಂ, ತಾಪಂ, ಜಿಪಂಗೆ ಮತ್ತು ಒಂದು ಪ್ರತಿಯನ್ನು ಬೆಂಗಳೂರಿನ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯಕ್ಕೆ ಕಳುಹಿಸಬೇಕು ಎಂದು ತಿಳಿಸಿದರು.

ಇದೀಗ ಹೊಸದಾಗಿ ಸಾಮಾಜಿಕ ಭದ್ರತಾ ಯೋಜನೆಗಳ ಪರಿಶೋಧನೆಯನ್ನು ನೀವು ನಡೆಸಬೇಕಾಗಿದ್ದು, ಇದು ಸಮರ್ಪಕವಾಗಿ ಫಲಾನುಭವಿಗೆ ತಲುಪುತ್ತಿದೆಯೇ, ಲೋಪಗಳಿವೆಯೇ ಎಂಬುದರ ಕುರಿತು ಗಮನಹರಿಸಿ ಎಂದರು.

ಪರಿಶೋಧನೆ ನಡೆಸಿ: ಜತೆಗೆ 14ನೇ ಹಣಕಾಸು ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ಪರಿಶೋಧನೆ ಮಾಡಬೇಕಾಗಿದ್ದು, ಕಾಮಗಾರಿಯ ಗುಣಮಟ್ಟ, ಜಾಬ್‌ಕಾರ್ಡ್‌ ನೀಡಿಕೆ, ಖಾತೆಗೆ ಹಣ ಸಂದಾಯ, ಉದ್ಯೋಗ ಸೃಜನಗೊಂಡಿರುವ ಕುರಿತು ಮತ್ತು ಕಾಮಗಾರಿಯನ್ನು ಕೂಲಿ ಕಾರ್ಮಿಕರಿಂದಲೇ ಮಾಡಿಸಿದ್ದಾರೆಯೇ ಎಂಬುದರ ಕುರಿತು ಪರಿಶೋಧನೆ ನಡೆಸಿ ಎಂದು ವಿವರಿಸಿದರು.

ಗುಣಮಟ್ಟ ನೋಡಿ ವರದಿ ತಯಾರಿಸಿ: ನರೇಗಾ ಕಾಮಗಾರಿಗಳ ಪರಿಶೋಧನೆ ನಡೆಸುವಾಗ ಎಲ್ಲೋ ಕುಳಿತು ಯಾರೋ ಹೇಳಿದ್ದನ್ನು ಬರೆದು ವರದಿ ತಯಾರಿಸಬೇಡಿ, ನೀವೇ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನೀಡಿರುವ ಅನುದಾನ, ಉದ್ಯೋಗ ಸೃಷ್ಟಿ, ಕಾಮಗಾರಿಯ ಗುಣಮಟ್ಟ ನೋಡಿ ವರದಿ ತಯಾರಿಸಿ ಎಂದು ಹೇಳಿದರು.

ಈ ಪರಿಶೋಧನೆ ಮುಗಿದ ನಂತರ ವರದಿ ತಯಾರಿಸಿ ಆ ವರದಿಯನ್ನು ಗ್ರಾಮಸಭೆಗಳಲ್ಲಿ ಅನುಮೋದನೆ ಪಡೆಯತಕ್ಕದ್ದು ಎಂದು ತಿಳಿಸಿದರು. ಸಭೆಯಲ್ಲಿ ತಾಲೂಕು ಸಂಯೋಜಕರಾದ ಬಂಗಾರಪೇಟೆಯ ರವಣಪ್ಪ, ಮುಳಬಾಗಿಲಿನ ವೆಂಕಟರಮಣ, ಕೋಲಾರದ ಭಾಷಾ, ಮಾಲೂರಿನ ಆಯಿಷಾ ಸುಲ್ತಾನ್‌, ಶ್ರೀನಿವಾಸಪುರದ ಶ್ರೀನಿವಾಸ್‌ ಮತ್ತಿತರರು ಹಾಜರಿದ್ದು, ಐದು ತಾಲೂಕುಗಳ ನೂರಕ್ಕೂ ಹೆಚ್ಚು ಗ್ರಾಪಂ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.