ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸಂಘಗಳ ನೆರವು ಅಗತ್ಯ
ಶಿಕ್ಷಕ ಗೆಳಯರ ಬಳಗದ ಸರ್ಕಾರಿ ಶಾಲೆ ಉಳಿಸುವ ಕಾಳಜಿ ಶ್ಲಾಘನೀಯ ಎಂದು ಹೇಳಿದರು.
Team Udayavani, Jun 14, 2022, 4:52 PM IST
ಕೋಲಾರ: ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸದಾ ಶ್ರಮಿಸುತ್ತಿರುವ ಶಿಕ್ಷಕ ಗೆಳೆಯರ ಬಳಗ ತನ್ನ ಕಾಯಕ ನಿರಂತರವಾಗಿ ಮುಂದುವರೆಸಿ, ಮತ್ತಷ್ಟು ಶಾಲೆಗಳ ಸಮಗ್ರ ಅಭಿವೃದ್ಧಿಗೆ ಕಾರಣ ವಾಗಲಿ ಎಂದು ಕೋಲಾರ ಪ್ರಭಾರ ಬಿಇಒ ಆಗಿದ್ದು, ಈಗ ಮಾಲೂರು ಬಾಲಕರ ಪಿಯು ಕಾಲೇಜು ಉಪಪ್ರಾಂಶುಪಾಲರಾಗಿ ವರ್ಗಾವಣೆ ಯಾಗಿರುವ ರಾಮಕೃಷ್ಣಪ್ಪ ಸಲಹೆ ನೀಡಿದರು.
ನಗರದ ಸ್ಕೌಟ್ಸ್ಗೈಡ್ಸ್ ಭವನದಲ್ಲಿ ಶಿಕ್ಷಕ ಗೆಳೆಯರ ಬಳಗ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿ, ಇಡೀ ತಾಲೂಕಿನ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಕಳೆದ 10 ವರ್ಷಗಳಿಂದ ನೋಟ್ ಪುಸ್ತಕ, ಸಮವಸ್ತ್ರ, ಬ್ಯಾಗ್ ಮತ್ತಿತರ ಸೌಲಭ್ಯಗಳನ್ನು ಒದಗಿಸಿಕೊಡುತ್ತಿರುವ ಶಿಕ್ಷಕ ಗೆಳಯರ ಬಳಗದ ಸರ್ಕಾರಿ ಶಾಲೆ ಉಳಿಸುವ ಕಾಳಜಿ ಶ್ಲಾಘನೀಯ ಎಂದು ಹೇಳಿದರು.
ಕೆಂಬೋಡಿಯಲ್ಲಿ ಶಿಥಿಲವಾಗಿದ್ದ ಕಟ್ಟಡವನ್ನು ದಾನಿಗಳ ನೆರವಿನಿಂದ ಸುಸಜ್ಜಿತ, ಆಧುನಿಕ ಶೈಕ್ಷಣಿಕ ಸೌಲಭ್ಯಗಳುಳ್ಳ ಕಟ್ಟಡವನ್ನು ಕಟ್ಟಲು ಕಾರಣವಾದ ಶಿಕ್ಷಕ ಗೆಳಯರ ಬಳಗ ಮಾದರಿಯ ಕೆಲಸ ಮಾಡಿದೆ. ಇದೀಗ ಜಿಲ್ಲೆಯ 34 ಶಾಲೆಗಳಿಗೆ ಶುದ್ಧ ಕುಡಿವ ನೀರಿನ ಫಿಲ್ಟರ್ ಒದಗಿಸಿರುವುದು, ಶಾಲಾ ಮಕ್ಕಳಿಗೆ ಇಡೀ ವರ್ಷಕ್ಕಾಗುವಷ್ಟು ನೋಟ್ ಪುಸ್ತಕ ಒದಗಿಸುವ ನಿರ್ಧಾರ, ಸ್ಮಾರ್ಟ್ ಬೋರ್ಡ್ ಒದಗಿಸುವ ಆಲೋಚನೆ ಮತ್ತಿತರ ಕಾರ್ಯಗಳು ನಿರಂತರವಾಗಿ
ಮುಂದುವರಿಯಲಿ ಎಂದರು.
ಶಿಕ್ಷಕ ಗೆಳೆಯರ ಬಳಗದ ಅಧ್ಯಕ್ಷ ಕಲ್ಲಂಡೂರು ನಾರಾಯಣಸ್ವಾಮಿ ಮಾತನಾಡಿ, ಶಿಕ್ಷಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ರಾಮಕೃಷ್ಣಪ್ಪರವರು ಪ್ರೌಢಶಾಲಾ ಉಪಪ್ರಾಂಶುಪಾಲರಾಗಿ ವರ್ಗಾವಣೆಯಾಗಿದ್ದಾರೆ ಮುಂದೆ ಅವರು ಉನ್ನತ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಲಿ ಎಂದರು. ಸರ್ಕಾರಿ ಕೆಲಸವನ್ನು ನಿಷ್ಠೆಯಿಂದ ಮಾಡುವುದರ ಮೂಲಕ ಇತರರಿಗೆ ಮಾದರಿಯಾಗಿರುವ ರಾಮಕೃಷ್ಣಪ್ಪ, ಬಿಇಒ ಆಗಿದ್ದ ಕೆಲವೇ ತಿಂಗಳುಗಳಲ್ಲಿ ಶಿಕ್ಷಕರ ವೇತನ ಬಟವಾಡೆಯಲ್ಲಿದ್ದ ಸಮಸ್ಯೆ ಪರಿಹರಿಸಿದ್ದಾರೆ, ಕಡತ ವಿಳಂಬ ವಾಗದಂತೆ ವಿಲೇವಾರಿ ಮಾಡಿದ್ದಾರೆ ಎಂದರು.
ಸೂಲೂರು ಪ್ರೌಢಶಾಲೆ ಮುಖ್ಯ ಶಿಕ್ಷಕ ಚಂದ್ರಪ್ಪ, ವಿಷಯ ಪರೀಕ್ಷಕ ಶಂಕರೇಗೌಡ, ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಶಿಕ್ಷಕ ಗೆಳಯರ ಬಳಗದ ಉಪಾಧ್ಯಕ್ಷ ವೀರಣ್ಣಗೌಡ, ಶಿಕ್ಷಕ ಮುಖಂಡ ಚಾಮುಂಡೇಶ್ವರಿ ಮತ್ತಿತರರು ಮಾತನಾಡಿದರು. ಶಿಕ್ಷಕ ಗೆಳಯರ ಬಳಗದ ಪದಾಧಿಕಾರಿಗಳು ರಾಮಕೃಷ್ಣಪ್ಪ ಹಾಗೂ ಅವರ ಧರ್ಮಪತ್ನಿ ಪದ್ಮಜಾ ಅವರನ್ನು ಸನ್ಮಾನಿಸಿ ಬೀಳ್ಕೊಟ್ಟರು. ಇದೇ ವೇಳೆ ನಿವೃತ್ತರಾದ ಎಲ್ಲಾ ಶಿಕ್ಷಕರನ್ನು ಸನ್ಮಾನಿಸಲಾಯಿತು. ಶಿಕ್ಷಣ ಸಂಯೋಜಕ ಆರ್.ಶ್ರೀನಿವಾಸನ್, ಶಿಕ್ಷಕ ಗೆಳಯರ ಬಳಗದ ಪದಾಧಿಕಾರಿಗಳಾದ ವೆಂಕಟಾಚಲಪತಿಗೌಡ, ಗೋಂದು, ವೆಂಕಟರಾಂ, ಸೋಮಶೇಖರ್,ಕೃಷ್ಣಪ್ಪ, ನಾಗರಾಜ್ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ