ಕಾಡಲ್ಲಿದ್ದ ಮಕ್ಕಳು ಕಡೆಗೂ ಶಾಲೆಗೆ ಬಂದರು


Team Udayavani, Feb 2, 2020, 3:00 AM IST

kadallidda

ಶ್ರೀನಿವಾಸಪುರ: ಶಿಕ್ಷಣದಿಂದ ವಂಚಿತರಾಗಿ ಎರಡು ತಿಂಗಳಿನಿಂದ ತಮ್ಮ ಪೋಷಕರೊಂದಿಗೆ ಕಾಡಿನಲ್ಲಿದ್ದ ಮಕ್ಕಳನ್ನು ಶಾಲೆಗೆ ಕರೆ ತರುವಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಶಿಕ್ಷಣ ಇಲಾಖೆ ಜೊತೆ ಇತರೆ ಇಲಾಖೆಗಳು ಅಧಿಕಾರಿಗಳೂ ಸತತ ನಾಲ್ಕು ದಿನಗಳಿಂದ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಕೂಲಿ ಕಾರ್ಮಿಕರು ಮತ್ತು ಮೇಸ್ತ್ರಿಯ ಮನವೊಲಿಕೆ ಪ್ರಯತ್ನ ನಡೆಸಿದ್ದರು.

ಅಂತಿಮವಾಗಿ ಶನಿವಾರ 8 ಮಕ್ಕಳು ಕೊಳ್ಳೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಆಗಮಿಸಿ, ಇತರೆ ಮಕ್ಕಳ ಜೊತೆ ಬೆರೆತು ಆಟ, ಪಾಠದ ಜೊತೆಗೆ ಬಿಸಿಯೂಟವನ್ನು ಸವಿದರು. ಈ ಮಕ್ಕಳು ಶಿಕ್ಷಣದಿಂದ ದೂರವಿರುವ ಬಗ್ಗೆ ಉದಯವಾಣಿ ನಿರಂತರವಾಗಿ ಸುದ್ದಿ ಪ್ರಕಟಿಸಿತ್ತು. ಇದರಿಂದ ಅಧಿಕಾರಿಗಳು ಎಚ್ಚೆತ್ತು ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮಕೈಗೊಂಡಿದ್ದರು.

ಈ ಮಕ್ಕಳು ಯಾರು?: ತಾಲೂಕಿನ ಕೊಳ್ಳೂರು ಮೂಲಕ ದೊಡಮಲದೊಡ್ಡಿಗೆ ಹೋಗುವ ರಸ್ತೆಯಲ್ಲಿನ ಕಾಡಿನಲ್ಲಿ, ನೀಲಗಿರಿ ಮರಗಳನ್ನು ಕಡಿಯಲು ಮೇಸ್ತ್ರಿ ಶಂಕರ್‌ ಎಂಬಾತ ಶಿವಮೊಗ್ಗ ಜಿಲ್ಲೆಯ ಸಾಗರದಿಂದ ಈ ಕೂಲಿ ಕಾರ್ಮಿಕರನ್ನು ಇಲ್ಲಿಗೆ ಕರೆದುಕೊಂಡು ಬಂದಿದ್ದಾನೆ. ಕಾಡಿನಲ್ಲೇ ಟೆಂಟ್‌ಗಳನ್ನು ಹಾಕಿಕೊಂಡಿರುವ ಕೂಲಿ ಕಾರ್ಮಿಕರು,ತಮ್ಮ ಪತ್ನಿ, ಮಕ್ಕಳೊಂದಿಗೆ ರಾತ್ರಿ ಕತ್ತಲೆಯಲ್ಲೇ ಜೀವನ ಸಾಗಿಸುತ್ತಿದ್ದಾರೆ. ಹೀಗೆ ವಲಸೆ ಬಂದ ಈ ಕೂಲಿಕಾರ್ಮಿಕರ ಪೈಕಿ 15ಕ್ಕೂ ಹೆಚ್ಚು ಮಕ್ಕಳು ಶಾಲೆಗೆ ಹೋಗುವವರಾಗಿದ್ದಾರೆ.

ಉದಯವಾಣಿ ವರದಿ: ಇವರಿಗೆ ಶಿಕ್ಷಣವಾಗಲಿ, ಸರ್ಕಾರಿ ಸೌಲಭ್ಯಗಳ ಬಗ್ಗೆಯಾಗಲಿ, ಇದ್ಯಾವುದರ ಅರಿವೇ ಇಲ್ಲದೇ, ಅಲೆಮಾರಿಗಳಂತೆ ಕೆಲಸ ಇರುವ ಕಡೆ ಹೋಗಿ ದುಡಿಯುವುದು ಇವರ ಕಾಯಕವಾಗಿದೆ. ಹೀಗೆ ಶ್ರೀನಿವಾಸಪುರ ತಾಲೂಕಿಗೂ ಬಂದಿದ್ದ ಇವರನ್ನು ಉದಯವಾಣಿ ಪತ್ತೆ ಮಾಡಿತ್ತು. ಈ ಬಗ್ಗೆ ಎರಡು ಮೂರು ಬಾರಿ ವಾಸ ಮಾಡುತ್ತಿರುವ ಬಿಡಾರಗಳ ಬಳಿ ಹೋಗಿ, ಅಲ್ಲಿನ ಸ್ಥಿತಿಯ ಬಗ್ಗೆ ಮಾಹಿತಿ ಕಲೆ ಹಾಕಿತ್ತು.

ನಂತರ ಮಕ್ಕಳನ್ನು ಶಾಲೆಗೆ ಕಳಿಸುವಂತೆ, ಸರ್ಕಾರದ ಸೌಲಭ್ಯಗಳು, ಮಕ್ಕಳಿಗೆ ಶಿಕ್ಷಣ ಇಲಾಖೆಯಲ್ಲಿ ಉಚಿತವಾಗಿ ಸಿಗುವ ಸೌಲಭ್ಯಗಳ ಬಗ್ಗ ತಿಳಿಸಿಕೊಡಲಾಗಿತ್ತು. ಕೂಡಲೇ ಮಕ್ಕಳನ್ನು ಶಾಲೆಗೆ ಕಳಿಸಕೊಡಿ ಎಂದು ಅವರಿಗೆ ಸ್ಪಷ್ಟವಾಗಿ ಹೇಳಲಾಯಿತು. ಮಕ್ಕಳ ಸ್ಥಿತಿ, ಕಾಡಿನಲ್ಲಿ ವಾಸ ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಜ.28ರಂದು “ಶಾಲೆಯಲ್ಲಿರಬೇಕಾದ ಈ ಮಕ್ಕಳಿರುವುದು ಅರಣ್ಯದಲ್ಲಿ’ ಎಂಬ ಶೀರ್ಷಿಕೆಯಡಿಯಲ್ಲಿ ವರದಿ ಪ್ರಕಟಿಸಲಾಗಿತ್ತು.

ಮಕ್ಕಳು ಕಳುಹಿಸಲು ನಿರಾಕರಣೆ: ಈ ವರದಿಯಿಂದ ಎಚ್ಚೆತ್ತ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಶು ಅಭಿವೃದ್ಧಿ ಮತ್ತು ಇತರೆ ಇಲಾಖೆಗಳು ಜ.28ರಿಂದ ಅರಣ್ಯದಲ್ಲಿನ ಮಕ್ಕಳನ್ನು ಶಾಲೆಗೆ ಕರೆತರುವ ಪ್ರಯತ್ನ ನಡೆಸಿದರು. ಪೋಷಕರ ಮನವೊಲಿಸುವ ಎಲ್ಲಾ ಕಸರತ್ತುಗಳನ್ನು ಮಾಡಿದರು. ಹೀಗೆ ಪ್ರತಿ ದಿನ ಬೆಳಗ್ಗೆ, ಸಂಜೆ ಪೋಷಕರೊಂದಿಗೆ ಹಾಗೂ ಇವರನ್ನು ಕರೆತಂದಿರುವ ಮೇಸ್ತ್ರಿ ಶಂಕರ್‌ ಜೊತೆಗೂ ಮಾತುಕತೆ ನಡೆಸಿದ್ದರು. ಮಕ್ಕಳನ್ನು ಶಾಲೆಗೆ ಕಳಿಸಬೇಕೆಂದು ಮನವಿ ಮಾಡಿದ್ದರು. ಆದರೂ ಮಕ್ಕಳನ್ನು ಶಾಲೆಗೆ ಕಳಿಸುವ ಹೊಣೆ ಯಾರೂ ತೆಗೆದುಕೊಳ್ಳಲಿಲ್ಲ. ನಮಗೆ ಶಾಲೆಯ ಗೊಡುವೆ ಬೇಡ, ನಮ್ಮ ಪಾಡಿಗೆ ನಮ್ಮನ್ನು ಬಿಟ್ಟುಬಿಡಿ ಎಂದು ಕೂಲಿ ಕಾರ್ಮಿಕರು ಮನವಿ ಮಾಡಿಕೊಂಡರು.

ಮೇಸ್ತ್ರಿಗೆ ಎಚ್ಚರಿಕೆ: ವಸ್ತು ಸ್ಥಿತಿ ಬಗ್ಗೆ ಉದಯವಾಯಲ್ಲಿ ನಿತ್ಯ ಸುದ್ದಿ ಪ್ರಕಟ ಮಾಡುತ್ತಿತ್ತು. ಇದನ್ನು ಮೇಲಧಿಕಾರಿಗಳು ಗಮನಿಸಿದ್ದರು. ಸಾರ್ವಜನಿಕವಾಗಿ ಚರ್ಚೆಗಳು ನಡೆಯುತ್ತಿದ್ದವು. ಇದರಿಂದ ಶಿಕ್ಷಣ ಇಲಾಖೆ ಅಧಿಕಾರಿಗಳು ಜ.31ರಂದು ಶುಕ್ರವಾರ ಸಂಜೆ ಪೋಷಕರು, ಮಕ್ಕಳು ಹಾಗೂ ಮೇಸ್ತ್ರಿ ಶಂಕರ್‌ ಅವರೊಂದಿಗೆ ಮಾತುಕತೆ ನಡೆಸಿ ಶಾಲೆಗೆ ಕಡ್ಡಾಯವಾಗಿ ಕಳಿಸಬೇಕು ಎಂದು ಸೂಚಿಸಿದ್ದರು. ಒಂದು ವೇಳೆ ಮಕ್ಕಳನ್ನು ಶಾಲೆಗೆ ಕಳುಹಿಸದಿದ್ದರೆ ಸೂಕ್ತ ಕ್ರಮಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದರು. ಈ ವೇಳೆ ಶಂಕರ್‌ ಸೋಮವಾರ ತಾನೇ ಖುದ್ದು ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರುವುದಾಗಿ ಭರವಸೆ ನೀಡಿದ್ದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ ಸಿಆರ್‌ಪಿ ಹರೀಶ್‌, ಶನಿವಾರ ಬೆಳಗ್ಗೆ 6 ಗಂಟೆಗೆ ಮತ್ತೆ ಅರಣ್ಯದ ಗುಡಾರಗಳ ಬಳಿ ಹೋಗಿ ಪೋಷಕರ ಮತ್ತು ಕೂಲಿ ಕಾರ್ಮಿಕರ ಮೇಸ್ತ್ರಿ ಬಳಿ ಮಾತುಕತೆ ನಡೆಸಿದರು. ಮಕ್ಕಳನ್ನು ಶನಿವಾರವೇ ಶಾಲೆಗೆ ಕಳಿಸುವಂತೆ ತೀವ್ರ ಪ್ರಯತ್ನ ಮಾಡಿ ಮನವೊಲಿಸಿದರು. ಪರಿಣಾಮ 12 ವರ್ಷದೊಳಗಿನ 8 ಮಕ್ಕಳು ಶಾಲೆಗೆ ಕಳುಹಿಸಲು ಮೇಸ್ತ್ರಿ ಶಂಕರ್‌ ಒಪ್ಪಿಗೆ ನೀಡಿ, ಶನಿವಾರವೇ ಶಾಲೆಗೆ ಮಕ್ಕಳನ್ನು ಕರೆತಂದರು.

ನಂತರ ಆ ಮಕ್ಕಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ವಾಹನದಲ್ಲಿ ಅವರಿದ್ದ ಬಿಡಾರಗಳಿಗೆ ತಂದು ಬಿಡಲಾಯಿತು. ಒಟ್ಟಾರೆ “ಉದಯವಾಣಿ’ ವರದಿ ಸ್ಪಂದಿಸಿದ ಶಿಕ್ಷಣ ಇಲಾಖೆ ಕಾಡಿನಲ್ಲಿನ ಈ ಮಕ್ಕಳನ್ನು ಗುರುತಿಸಿ ಸಮಾಜದ ಮುಖ್ಯವಾಹಿನಿಗೆ ತರಲು ಯತ್ನಿಸಿದ್ದು ಸಫ‌ಲವಾಗಿದೆ. ಈ ವೇಳೆ ಕ್ಷೇತ್ರ ಸಮನ್ವಯಾಧಿಕಾರಿ ಕೆ.ಸಿ.ವಸಂತಾ, ಇಸಿಒ ಸುಬ್ರಮಣಿ, ಸಿಆರ್‌ಪಿ ಹರೀಶ್‌, ಕೊಳ್ಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಮಹೇಶ್‌, ಮೇಸ್ತ್ರಿ ಶಂಕರ್‌ ಇತರರು ಉಪಸ್ಥಿತರಿದ್ದರು.

ಮಕ್ಕಳ ಜೊತೆ ಬೆರೆತು ಬಿಸಿಯೂಟ ಸೇವನೆ: ಶಾಲೆಯಲ್ಲಿ ಇತರೆ ವಿದ್ಯಾರ್ಥಿಗಳೊಂದಿಗೆ ಬೆರೆತ ಕಾಡಿನಲ್ಲಿದ್ದ ಮಕ್ಕಳು, ಆಟ ಪಾಠ ಜೊತೆಗೆ ಮಧ್ಯಾಹ್ನದ ಬಿಸಿಯೂಟವನ್ನೂ ಸವಿದರು. ಬೆಳಗ್ಗೆ ಸ್ನಾನ ಮಾಡಿ, ಶುಭ್ರವಾದ ಬಟ್ಟೆ ತೊಟ್ಟು ಶಿಕ್ಷಣಾಧಿಕಾರಿಗಳು, ಮೇಸ್ತ್ರಿ ಶಂಕರ್‌ ಜೊತೆಗೆ ಆಗಮಿಸಿದ ಮಕ್ಕಳನ್ನು ಶಾಲೆಯಲ್ಲಿದ್ದ ವಿದ್ಯಾರ್ಥಿಗಳು ನಗುಮೊಗದೊಂದಿಗೆ ಸ್ವಾಗತಿಸಿದರು. ಶಿಕ್ಷಕರು ಸಹ ಮಕ್ಕಳಿಗೆ ಧೈರ್ಯ ತುಂಬಿ ನಿತ್ಯ ಶಾಲೆಗೆ ಬರುವಂತೆ ತಿಳಿ ಹೇಳಿದರು.

ಈ ಮಕ್ಕಳು ಶಾಲೆಗೆ ಎಷ್ಟು ದಿನ ಬರುತ್ತಾರೋ ಆಲ್ಲಿಯವರಿಗೆ ಎಲ್ಲಾ ಮಕ್ಕಳಂತೆ ನೋಡಿಕೊಳ್ಳಲಾಗುತ್ತದೆ. ಅದೇ ರೀತಿ ಬಿಸಿಯೂಟ ನೀಡಲಾಗುತ್ತದೆ. ಜೊತೆಗೆ ಸೋಮವಾರ ಮಕ್ಕಳಿಗೆ ನೋಟ್‌ ಪುಸ್ತಕ, ಪೆನ್ನು ಇತರೆ ಸೌಲಭ್ಯ ಒದಗಿಸಲಾಗುತ್ತದೆ. ಅವರ ಪೋಷಕರು ಒಪ್ಪಿದರೆ ಅವರು ಇರುವ ಸ್ಥಳದಲ್ಲಿಯೇ ಟೆಂಟ್‌ ಶಾಲೆ ನಡೆಸಲಾಗುವುದು.
-ಉಮಾದೇವಿ, ಕ್ಷೇತ್ರ ಶಿಕ್ಷಣಾಧಿಕಾರಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.