ಲಾಕ್‌ಡೌನ್‌ ಮೇಲಿನ ಕಾಳಜಿ ಜನರ ಮೇಲಿಲ್ಲ

ಸಮೃದ್ಧಿ ಅಭಿಮಾನಿಗಳಿಂದ 40 ಸಾವಿರ ಕುಟುಂಬಕ್ಕೆ ಅಕ್ಕಿ, ತರಕಾರಿ ವಿತರಣೆಗೆ ಎಚ್‌ಡಿಕೆ ಚಾಲನೆ

Team Udayavani, May 2, 2020, 2:48 PM IST

ಲಾಕ್‌ಡೌನ್‌ ಮೇಲಿನ ಕಾಳಜಿ ಜನರ ಮೇಲಿಲ್ಲ

ಸಾಂದರ್ಭಿಕ ಚಿತ್ರ

ಮುಳಬಾಗಿಲು: ಲಾಕ್‌ಡೌನ್‌ಗೆ ಸರ್ಕಾರ ತೋರಿಸುವ ಕಳಕಳಿ ರೈತ, ಕೂಲಿ ಕಾರ್ಮಿಕರು ಮತ್ತು ಜನರ ಸಮಸ್ಯೆಗಳಿಗೆ ಯಾಕೆ ತೋರಿಸುತ್ತಿಲ್ಲ, ಅನಾವಶ್ಯಕ ಕಾರ್ಯಕ್ರಮಗಳಿಗೆ ಸರ್ಕಾರ ದುಂದು ವೆಚ್ಚ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವೈಫ‌ಲ್ಯಗಳ ವಿರುದ್ಧ ಮಾಜಿ
ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಟೀಕಿಸಿದರು.

ನಗರದಲ್ಲಿ ಸಮೃದ್ಧಿ ವಿ.ಮಂಜುನಾಥ್‌ ಅಭಿಮಾನಿ ಬಳಗ ತಾಲೂಕಿನ 40 ಸಾವಿರ ಕುಟುಂಬಕ್ಕೆ ಅಕ್ಕಿ ಮತ್ತು ತರಕಾರಿ ಕಿಟ್‌ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು. ಕೋವಿಡ್‌ 19 ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸರ್ಕಾರದ ಕ್ರಮಕ್ಕೆ ಜೆಡಿಎಸ್‌ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.

ಶ್ಲಾಘನೀಯ: ಇದೇವೇಳೆ ಕೃಷಿ ಕಾರ್ಮಿಕರು ಕೂಲಿ ಸಿಗದೆ, ರೈತರು ತಾವು ಬೆಳೆದ ಬೆಳೆಗಳಿಗೆ ಬೆಲೆ ಸಿಗದೆ ಸಂಕಷ್ಟದಲ್ಲಿದ್ದಾರೆ. ಇವರಿಗೆ ಸರ್ಕಾರ ಪಡಿತರ ಅಕ್ಕಿ ನೀಡಿದ್ದು, ಅದರೊಂದಿಗೆ ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳು ಸಹಾಯ ಹಸ್ತ ಚಾಚುತ್ತಿವೆ. ಇದರಲ್ಲಿ ಸಮೃದ್ದಿ ಮಂಜುನಾಥ್‌ ಅವರ ಜನತಾ ದಾಸೋಹ ಕಾರ್ಯವೂ ಒಂದು. ಜಿಲ್ಲೆಯಲ್ಲಿ ಮೊದಲು ಕೈಗೊಂಡಿರುವ ಈ ಕಾರ್ಯವನ್ನು ಶ್ಲಾಘಿಸಿದರು.

ಜನರಿಗೆ ನೆರವು ಕಲ್ಪಿಸಿ: ಈಗ ಸರ್ಕಾರದ ಕಾರ್ಯಕ್ರಮ, ಲಾಕ್‌ಡೌನ್‌ ಕುರಿತು ಚರ್ಚೆ ಮಾಡುವ ಸಮಯವಲ್ಲ, ಬೇರೆ ಕಾರ್ಯಕ್ರಮಗಳಿಗೆ ಖರ್ಚು
ಮಾಡುತ್ತಿರುವುದನ್ನು ನಿಲ್ಲಿಸಿ, ದುಡಿಯುವ ವರ್ಗ, ಜನಸಾಮಾನ್ಯರ ನೆರವಿಗೆ ಸ್ಪಂದಿಸುವಂತಹ ಕಾರ್ಯಕ್ರಮ ಸರ್ಕಾರ ಮಾಡಬೇಕೆಂದು ಮನವಿ ಮಾಡಿಕೊಂಡರು. ವಿರೋಧ ಪಕ್ಷದಲ್ಲಿದ್ದು ಕೇವಲ ಸರ್ಕಾರದ ವೈಫ‌ಲ್ಯಗಳನ್ನು ಸರಿಪಡಿಸುವ ಕೆಲಸ ಮಾಡುವಂತಹ ರಾಜಕಾರಣಿ ನಾನು. ದ್ವೇಷ, ಹಗೆ ಸಾಧಿಸುವ ರಾಜಕಾರಣಿ ನನ್ನಲ್ಲ, ಈ ಸರ್ಕಾರದಲ್ಲಿ ಹೊಸ ಕೆಲಸಗಳು ನಡೆಯುತ್ತಿಲ್ಲ ಎಂದರು.

ಶಾಸಕ ಚೌಡರೆಡ್ಡಿ, ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ವೆಂಕಟಶಿವಾರೆಡ್ಡಿ, ತಾಲೂಕು ಅಧ್ಯಕ್ಷ ಕಾಡೇನಹಳ್ಳಿ ನಾಗರಾಜ್‌, ನಗರ ಅಧ್ಯಕ್ಷ ತೇಜೋರಮಣ, ಜಿಪಂ ಮಾಜಿ ಸದಸ್ಯ ಶ್ಯಾಮೇಗೌಡ, ಡಾ.ಪ್ರಕಾಶ್‌, ಡಾ.ವಜಾತುಲ್ಲಾಖಾನ್‌, ತಾಪಂ ಮಾಜಿ ಅಧ್ಯಕ್ಷ ಎಂ.ಎಸ್‌.ಶ್ರೀನಿವಾಸರೆಡ್ಡಿ, ಕವತನಹಳ್ಳಿ ಮುನಿಶಾಮಿಗೌಡ, ನಗರಸಭೆ ಸದಸ್ಯ ರಿಯಾಜ್‌, ಸೋಮಣ್ಣ, ಸೈಯದ್‌ವಜೀರ್‌, ಆವಣಿ ಬಾಬು, ತಾಪಂ ಸದಸ್ಯ ನಂಗಲಿ ಶ್ರೀನಾಥ್‌, ವಕೀಲ ಸಿ.ಎನ್‌.ರಾಜಕುಮಾರ್‌,
ಹೈದರಾಲಿಖಾನ್‌, ರೋಷನ್‌ಟ್ರಸ್ಟ್‌ ಜಬೀವುಲ್ಲಾ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.