ಪ್ರೀತಿಸದಿದ್ದರೂ ಬೆದರಿಕೆಗೆ ಹೆದರಿ ಬಾಲಕಿ ಆತ್ಮಹತ್ಯೆ

ಪ್ರೀತಿ ನಿರಾಕರಿಸಿದ್ದಕ್ಕಾಗಿ ವಿಷ ಸೇವಿಸಿದ ಯುವಕ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಗೆ ದಾಖಲು

Team Udayavani, Jun 4, 2019, 7:53 AM IST

kolar-tdy-2..

ಅಪ್ರಾಪ್ತ ಬಾಲಕಿ ವಾಣಿ ಶವ ಪರೀಕ್ಷೆ ಮಾಡಿಕೊಡಬೇಕೆಂದು ಪ್ರತಿಭಟನೆಗೆ ಮುಂದಾದ ಪೋಷಕರನ್ನು ಸಮಾಧಾನ ಮಾಡಿದ ಎಎಸ್‌ಪಿ ಜಾನವಿ.

ಶ್ರೀನಿವಾಸಪುರ: ಬಾಲಕಿಯನ್ನು ಪ್ರೀತಿಸಿ ವಿಷ ಸೇವಿಸಿದ ಮೂರ್ತಿ (18) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರೀತಿಸದಿದ್ದರೂ ಅಪಪ್ರಚಾರ ಮಾಡಿ ಅವಮಾನಿಸಿದ್ದರಿಂದ ಮನ ನೊಂದ ವಾಣಿ (14) ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ಶಿವಪುರ ಗ್ರಾಮದಲ್ಲಿ ಸಂಭವಿಸಿದೆ.

ಇತ್ತೀಚೆಗೆ ನಡೆದ ಬೆಳವಣಿಗೆಗಳಲ್ಲಿ ಹುಡುಗ ವಿಷ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹುಡುಗನ ಪೋಷಕರು ನಮ್ಮ ಮಗ ಸತ್ತರೆ ನಿಮ್ಮ ಕತೆ ನೋಡುತ್ತೇವೆ ಎಂದು ಬಾಲಕಿಯ ಮನೆಯವರಿಗೆ ಧಮಿಕಿ ಹಾಕಿದ್ದಾರೆ. ಘಟನೆಗೂ ನನಗೂ ಸಂಬಂಧವೇ ಇಲ್ಲದಿದ್ದರೂ ನನ್ನ ಮೇಲೆ ಅಪಪ್ರಚಾರ ಮಾಡಿದ್ದಾರೆ ಎಂದು ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆ ಹಿನ್ನೆಲೆ: 9ನೇ ತರಗತಿ ವಿದ್ಯಾರ್ಥಿನಿ ವಾಣಿಯನ್ನು ಆಕೆ ಒಪ್ಪಿಗೆ ಇಲ್ಲದೆ ಮೂರ್ತಿ (18) ಎಂಬಾತ ನಿನ್ನನ್ನು ಪ್ರೀತಿಸಿದ್ದೇನೆ ಎಂದು ಬುಧವಾರ ಹೇಳಿದಾಗ ಹುಡುಗಿ ನಿರಾಕರಿಸಿದ್ದಾಳೆ. ತನ್ನ ಪ್ರೀತಿ ನಿರಾಕರಿಸಿದ್ದರಿಂದ ಯುವಕ ವಿಷ ಸೇವಿಸಿದ್ದು, ವಿಷಯವರಿತ ಪೋಷಕರು ಅವನನ್ನು ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.ಯುವಕನ ಸಂಬಂಧಿಕರು ನಮ್ಮವನು ಸತ್ತರೆ ನಿಮ್ಮ ಕತೆ ನೋಡುತ್ತೇವೆ. ನಿಮ್ಮ ಹುಡುಗಿ ನಮ್ಮವನೊಂದಿಗೆ ಮಾತಾಡಿರುವುದೆಲ್ಲ ರೆಕಾರ್ಡ್‌ ಆಗಿದೆ ಎಂದು ಶನಿವಾರ ಬಾಲಕಿ ಮನೆ ಬಳಿ ಹೋಗಿ ಯುವಕನ ಪೋಷಕರು ಧಮಿಕಿ ಹಾಕಿದ್ದಾರೆನ್ನಲಾಗಿದೆ.

ನಾನು ಏನು ತಪ್ಪು ಮಾಡದಿದ್ದರೂ ನಮ್ಮ ಮನೆ ಬಳಿ ಬಂದು ನಮ್ಮವರಿಗೆ ಅವಮಾನ ಮಾಡಿದ್ದಾರೆ, ನನ್ನಿಂದ ಯಾರಿಗೂ ತೊಂದರೆ ಆಗಬಾರದೆಂದು ಸೋಮವಾರ ಮಧ್ಯಾಹ್ನ ಯಾರು ಇಲ್ಲದ ವೇಳೆ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ.

ದೂರು: ಮೃತ ಯುವತಿ ತಂದೆ ಕೊನಪ್ಪರೆಡ್ಡಿ ಬೆಳಗ್ಗೆ ನಮ್ಮ ಮನೆ ಬಳಿ ಬಂದ ಮೂರ್ತಿ ಸಂಬಂಧಿಕರು ಶ್ರೀನಿವಾಸ್‌ ಮತ್ತು ವೆಂಕಟೇಶ್‌, ವಿಷ ಸೇವಿಸಿರುವುದು ವಾಣಿಯಿಂದಲೆ, ಅವನು ಸತ್ತರೆ ನಿಮ್ಮನ್ನು ಉಳಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.

ಇದರಿಂದ ಮತ್ತು ನಿಂದಿಸಿದ್ದರಿಂದ ಅವಳು ಸಾವಿಗೀಡಾಗಿದ್ದಾಳೆ. ಅವಳ ಸಾವಿಗೆ ಕಾರಣರಾದವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶ್ರೀನಿವಾಸಪುರ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಠಾಣೆ ಎದುರು ಪ್ರತಿಭಟನೆ: ರಾತ್ರಿಯಾದರೂ ಸತ್ತ ಬಾಲಕಿಯ ಮರಣೋತ್ತರ ಪರೀಕ್ಷೆ ಮಾಡದೆ ಬೆಳಗ್ಗೆ ಶವ ಪರೀಕ್ಷೆ ಮಾಡಿ ಕೊಡುತ್ತೇವೆಂದು ಪೊಲೀಸರು ಹೇಳಿದ್ದರಿಂದ ಮೃತಳ ಸಂಬಂಧಿಕರು ಠಾಣೆ ಎದುರು ಪ್ರತಿಭಟನೆಗೆ ಮುಂದಾದರು.

ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾದ ಕೂಡಲೇ ಸ್ಥಳಕ್ಕೆ ಅಡಿಷನಲ್ ಎಸ್ಪಿ ಜಾಹ್ನವಿ ಬಂದು ಎಲ್ಲರನ್ನು ಸಮಾಧಾನ ಮಾಡಿ ಈಗಲೇ ಶವಪರೀಕ್ಷೆ ಮುಗಿಸಿ, ನಿಮಗೆ ಕಳುಹಿಸುತ್ತೇವೆಂದು ಹೇಳಿ ನಂತರ ಸಮಾಧಾನ ಪಡಿಸಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಉಮೇಶ್‌ ಹಾಗೂ ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

12-

Gangolli: ರಿಕ್ಷಾ-ಕಾರು ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.