ದಾನಿಗಳ ಸಹಕಾರದಿಂದ ಸರ್ಕಾರ ಉಳಿದಿದೆ
ಕೋವಿಡ್-19 ಸಂಕಷ್ಟದಲ್ಲೂ ಸರ್ಕಾರ ವಿರುದ್ಧ ಮಾಜಿ ಸಚಿವ ಎಚ್.ಎಂ.ರೇವಣ್ಣ ರಾಜಕೀಯ ಟೀಕೆ
Team Udayavani, Apr 21, 2020, 4:05 PM IST
ಕೋಲಾರ: ಕೋವಿಡ್-19 ಲಾಕ್ಡೌನ್ನಿಂದಾಗಿ ಸಂಕಷ್ಟ ಎದುರಿಸುತ್ತಿರುವ ಜನತೆಗೆ ಅಗತ್ಯ ಸೌಲಭ್ಯ ಒದಗಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ಆರೋಪಿಸಿದರು. ಕೋವಿಡ್-19 ಲಾಕ್ಡೌನ್ ಹಿನ್ನೆಲೆಯಲ್ಲಿ ಮಾಹಿತಿ ಪಡೆಯಲು ಜಿಲ್ಲೆಗೆ ಆಗಮಿಸಿದ್ದ ವೇಳೆ ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ಹಿಂದೆ ಕಾಂಗ್ರೆಸ್ ಜಾರಿಗೆ ತಂದಿದ್ದ ನರೇಗಾ, ಅನ್ನ ಭಾಗ್ಯ, ಕ್ಷೀರಭಾಗ್ಯ, ಕಾರ್ಮಿಕರ ನಿಧಿಗೆ ನೀಡಿದ್ದ ಅನುದಾನದಿಂದಲೇ ಇಂದು ಲಾಕ್ ಡೌನ್ ಪರಿಸ್ಥಿತಿ ನಿಭಾಯಿಸಲು ಸಾಧ್ಯವಾಗಿದೆ ಎಂದು ಹೇಳಿಕೊಂಡರು. ಸಂಘ ಸಂಸ್ಥೆಗಳಿಂದ ಸಹಾಯ: ಬಿಜೆಪಿಯಿಂದ ಯಾವುದೇ ಕೊಡುಗೆ ಇಲ್ಲದಿದ್ದರೂ ಪ್ರಚಾರಕ್ಕಾಗಿ ಏನೇನೋ ಮಾಡುತ್ತಿದ್ದಾರೆ. ರಾಜ್ಯದಲ್ಲಿ ನಡೆದಿರುವ ಘಟನೆಗಳನ್ನು ಗಮನಿಸಿದಾಗ ಒಂದು ಸಮಾಜವನ್ನು ಗುರಿ ಮಾಡಿ ಕೊಂಡಿದ್ದಾರೆ ಎಂದು ಲೇವಡಿ ಮಾಡಿದ ಅವರು, ದಾನಿಗಳಿಂದ ಸರಕಾರ ಉಳಿದಿದೆ, ಸಂಘ ಸಂಸ್ಥೆಗಳು ಸಹಾಯ ಮಾಡುತ್ತಿವೆ ಎಂದು ತಿಳಿಸಿದರು.
ಪಾದರಾಯನಪುರ ದುಷ್ಕೃತ್ಯಕ್ಕೆ ಖಂಡನೆ:
ರಾಜ್ಯದಲ್ಲಿ ಕೋವಿಡ್-19 ದಿಂದ ಕಷ್ಟದ ಪರಿಸ್ಥಿತಿ ಎದುರಾಗಿದ್ದರೂ ಆರೋಗ್ಯ ಹಾಗೂ ವೈದ್ಯಕೀಯ ಸಚಿವರಲ್ಲಿ ಸ್ವಾಮರಸ್ಯವಿಲ್ಲದಾಗಿದೆ. ಇಬ್ಬರ ಹೇಳಿಕೆ, ಮಾಹಿತಿಗಳಲ್ಲಿ ಗೊಂದಲವಿದೆ ಎಂದು ದೂರಿದರು. ಇನ್ನು ಪಾದರಾಯನಪುರದ ಗಲಭೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇಂತಹ ದುಷ್ಕೃತ್ಯವನ್ನು ಯಾರೇ ಎಸಗಿದ್ದರೂ ಅದನ್ನು ಖಂಡಿಸುವುದಾಗಿ ತಿಳಿಸಿದರು.
5 ತಂಡಗಳ ರಚನೆ: ಕೆಪಿಸಿಸಿ ಅಧ್ಯಕ್ಷ ಡಿ. ಕೆ.ಶಿವಕುಮಾರ್ ಅವರು ರಾಜ್ಯದ ನಾಲ್ಕು ಕಂದಾಯ ವಿಭಾಗಗಳು ಹಾಗೂ ಬೆಂಗಳೂರು ನಗರ ವಿಭಾಗವನ್ನು ರಚಿಸಿ 5 ತಂಡಗಳನ್ನು ರಚನೆ ಮಾಡಿದ್ದಾರೆ. ನನಗೂ ಒಂದು ತಂಡದ ಜವಾಬ್ದಾರಿ ನೀಡಿದ್ದು, ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಕೋಲಾರದಲ್ಲಿ ಸಮೀಕ್ಷೆ ನಡೆಸುತ್ತಿದ್ದೇವೆ. ಜಿಲ್ಲೆಯ ಜಿಲ್ಲೆಯ ಮುಖಂಡರೊಂದಿಗೆ ಚರ್ಚಿಸಿದ್ದು, 11 ಅಂಶಗಳ ವರದಿಯನ್ನು ಪಡೆದುಕೊಂಡಿದ್ದೇವೆ ಎಂದು ಹೇಳಿದರು. ಜಿಲ್ಲೆಯಲ್ಲಿಯೂ ಕೋವಿಡ್-19 ಅಧ್ಯಕ್ಷರನ್ನಾಗಿ ಶಾಸಕ ನಂಜೇಗೌಡರನ್ನು ಆಯ್ಕೆ ಮಾಡಲಾಗಿದೆ. ಜಿಲ್ಲೆಯಲ್ಲಿ ಅವರೂ ಪ್ರವಾಸ ಮಾಡಿ ಮಾಹಿತಿ ಪಡೆದಿದ್ದು, ಜಿಲ್ಲೆಯು ಸುರಕ್ಷಿತವಾಗಿದೆ. ವೈದ್ಯಕೀಯ ಸೇವೆ ಎಲ್ಲವೂ ಉತ್ತಮವಾಗಿದೆ ಎಂದು ತಿಳಿಸಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ಉಪಾಧ್ಯಕ್ಷ ಸೀತಿಹೊಸೂರು ಮುರಳಿಗೌಡ, ಮಾಜಿ ಸಚಿವ ನಿಸಾರ್ ಅಹಮದ್, ಮುಖಂ ಡರಾದ ಪ್ರಸಾದ್ಬಾಬು, ಉದಯ್ಶಂಕರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್