ಕೋಲಾರಮ್ಮ ಪಡೆ ಶೀಘ್ರ ಸೇವೆಗೆ

ಮಹಿಳಾ ಪೊಲೀಸರಿಗೆ ಮೂರನೇ ಹಂತದಲ್ಲಿ ಕರಾಟೆ, ಕಮಾಂಡೋ ತರಬೇತಿ

Team Udayavani, Jun 19, 2019, 4:18 PM IST

kolar-tdy-3..

ಕೋಲಾರಮ್ಮ ಪಡೆ ತರಬೇತಿ ಪಡೆದ ಸಿಬ್ಬಂದಿ ನಾಗರಿಕ ಸೇವೆಗೆ ಸಜ್ಜಾಗಿರುವುದು.

ಕೋಲಾರ: ಜಿಲ್ಲೆಯ ವಿವಿಧ ಠಾಣೆಗಳಲ್ಲಿರುವ ಮಹಿಳಾ ಪೇದೆಗಳಿಗೆ ಆಧುನಿಕ ತರಬೇತಿ ನೀಡುವ ಮೂಲಕ ಕೋಲಾರಮ್ಮ ಪಡೆ ರೂಪಿಸಲಾಗುತ್ತಿದ್ದು, ಶೀಘ್ರವೇ ನಾಗರಿಕರ ಸೇವೆಗೆ ಸಜ್ಜುಗೊಳಿಸಲು ಪೊಲೀಸ್‌ ಇಲಾಖೆ ನಿರ್ಧರಿಸಿದೆ.

ಜಿಲ್ಲೆಯ ವಿವಿಧ ಠಾಣೆಗಳಲ್ಲಿರುವ ಮಹಿಳಾ ಪೇದೆಗಳಿಗೆ ಈಗಾಗಲೇ ಮೂರು ತಂಡಗಳಲ್ಲಿ ತರಬೇತಿ ನೀಡಲಾಗಿದ್ದು, ಕೊನೆಯ ತಂಡದ ತರಬೇತಿ ನಗರದ ಪೊಲೀಸ್‌ ಕವಾಯತು ಮೈದಾನದಲ್ಲಿ ನಡೆಯುತ್ತಿದೆ.

ನಿರ್ಗಮಿತ ಪೊಲೀಸ್‌ ವರಿಷ್ಠಾಧಿಕಾರಿ ಡಾ.ರೋಹಿಣಿ ಸಫೆಟ್ ಕಟೋಚ್ರ ಆಸಕ್ತಿಯ ಫ‌ಲವಾಗಿ ಈ ತರಬೇತಿ ಕಾರ್ಯಕ್ರಮ ರೂಪುಗೊಂಡಿದ್ದು, ಮಹಿಳಾ ಪೇದೆಗಳು ಕೇವಲ ಕಚೇರಿ ಕೆಲಸಗಳಿಗೆ ಸೀಮಿತವಾಗಬಾರದು ಎನ್ನುವುದೇ ಕೋಲಾರಮ್ಮ ಪಡೆಯ ಮುಖ್ಯ ಉದ್ದೇಶವಾಗಿದೆ. ಕಾನೂನು ಸುವ್ಯವಸ್ಥೆ ಸೇವೆಗೆ ಅಗತ್ಯವಾಗಿರುವ ಎಲ್ಲಾ ರೀತಿಯ ಆಧುನಿಕ ತರಬೇತಿಯನ್ನು ಮಹಿಳಾ ಪೇದೆಗಳಿಗೆ ಜಿಲ್ಲಾ ಸಶಸ್ತ್ರಪಡೆಯ ಅಧಿಕಾರಿ ಮತ್ತು ಸಿಬ್ಬಂದಿ ಮೂಲಕ ನೀಡಲಾಗುತ್ತಿದೆ.

ಕರಾಟೆ – ಬೈಕ್‌ ತರಬೇತಿ: ಮಾನಸಿಕ ಮತ್ತು ದೈಹಿಕವಾಗಿ ಸಜ್ಜುಗೊಳಿಸಲು ಪ್ರತಿನಿತ್ಯ ಬೆಳಗಿನ ಜಾವ ಕರಾಟೆ ತರಬೇತುದಾರ ಶ್ರೀನಿವಾಸ್‌ ನೇತೃತ್ವದಲ್ಲಿ ತರಬೇತಿ ನೀಡಲಾಗುತ್ತಿದೆ. ಆನಂತರ ದಿನದ ಎರಡು ಹಂತಗಳಲ್ಲಿ ಬೈಕ್‌ ಸವಾರಿ, ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ತಿಳಿಸಲಾಗುತ್ತದೆ. ಹೀಗೆ ತರಬೇತಿ ಪಡೆದ ಮಹಿಳಾ ಪೇದೆಗಳಿಗೆ ಇಲಾಖೆಯ ಕಡೆಯಿಂದಲೇ ವಾಹನ ಚಾಲನಾ ಪರವಾನಗಿ ಮಾಡಿಸಲಾಗುತ್ತಿದೆ. ಸಂಕಷ್ಟದ ಸನ್ನಿವೇಶ ನಿಭಾಯಿಸಲು ಕೋಲಾರಮ್ಮ ಪಡೆಯ ಶಿಬಿರಾರ್ಥಿಗಳಿಗೆ ಅತ್ಯಾಧುನಿಕ ಕಮಾಂಡೋ ತರಬೇತಿ ಪರಿಚಯಿಸಲಾಗುತ್ತಿದೆ.

ಎಲ್ಲರಿಗೂ ತರಬೇತಿ: ಕಾನೂನು ಸುವ್ಯವಸ್ಥೆ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿ, ಬಿಡಲಿ, ಪ್ರತಿಯೊಬ್ಬ ಮಹಿಳಾ ಪೇದೆಯು ಕೋಲಾರಮ್ಮ ಪಡೆ ತರಬೇತಿ ಕಡ್ಡಾಯಗೊಳಿ ಸಲಾಗಿದೆ. ಈಗಾಗಲೇ ನೂರಕ್ಕೂ ಹೆಚ್ಚು ಮಹಿಳಾ ಪೇದೆಗಳಿಗೆ ತರಬೇತಿ ನೀಡಲಾಗಿದೆ. ಮೂರನೇ ತಂಡದ ತರಬೇತಿ ಈ ವಾರದಲ್ಲಿ ಪೂರ್ಣಗೊಳ್ಳಲಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಕೋಲಾರಮ್ಮ ಪಡೆ ಇಲಾಖೆಯಲ್ಲಿ ಕಾನೂನು ಸುವ್ಯವಸ್ಥೆ ಸೇವೆಗೆ ಲೋಕಾರ್ಪಣೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.

ಮಹಿಳೆಯರ ರಕ್ಷಣೆ: ತರಬೇತಿ ಪಡೆಯುತ್ತಿರುವ ಸಿಬ್ಬಂದಿಯ ಮೊದಲ ಆದ್ಯತೆ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡುವುದೇ ಆಗಿದೆ. ಮಹಿಳಾ ಕಾಲೇಜು, ಸಾರ್ವಜನಿಕ ಬಸ್‌ ನಿಲ್ದಾಣಗಳಂತ ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯನಿರ್ವಹಿಸಲಿರುವ ಈ ಪಡೆಯ ಸಿಬ್ಬಂದಿಯು ಎಂಥದ್ದೇ ಸನ್ನಿವೇಶವನ್ನು ಧೈರ್ಯವಾಗಿ ನಿಭಾಯಿಸುವಂತೆ ತರಬೇತಿ ನೀಡಲಾಗಿದೆ.

● ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.