ಮದ್ಯದ ನಶೆಯಲ್ಲಿ ಜೀವಂತ ಹಾವನ್ನೇ ಕಚ್ಚಿ ಕೊಂದ ಭೂಪ !
Team Udayavani, May 5, 2020, 7:00 PM IST
ಕುಡಿದ ಅಮಲಿನಲ್ಲಿ ಹಾವನ್ನು ಸಾಯಿಸಿ ಕುತ್ತಿಗೆಗೆ ಸುತ್ತಿಕೊಂಡಿರುವುದು.
ಮುಳಬಾಗಿಲು: ಲಾಕ್ಡೌನ್ನಿಂದ ಮದ್ಯವಿಲ್ಲದೇ ಬಸವಳಿದಿದ್ದ ಸೆಂಟ್ರಿಂಗ್ ಕೆಲಸ ಮಾಡುವ ಕಾರ್ಮಿಕನೊಬ್ಬ ಮಂಗಳವಾರ ಕುಡಿದ ಅಮಲಿನಲ್ಲಿ ಜೀವಂತ ಹಾವನ್ನು ಹಲ್ಲಿನಿಂದ ಕಡಿದು ಸಾಯಿಸಿ ವಿಕೃತಿ ಮೆರೆದ ಘಟನೆ ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕುಮಾರ್ ಕುಡಿದ ಅಮಲಿನಲ್ಲಿ ಹಾವನ್ನು ಭೀಕರವಾಗಿ ಕಚ್ಚಿ ಸಾಯಿಸಿದ ಭೂಪ. ಸೆಂಟ್ರಿಂಗ್ ಕೆಲಸ ಮಾಡುವ ಈತ ಸೋಮವಾರ ನಂಗಲಿ ಗ್ರಾಮದ ಬಾರ್ ಒಂದರಲ್ಲಿ ಮದ್ಯವನ್ನು ಖರೀದಿಸಿ ಸೇವಿಸಿದ್ದನು. ಉಳಿದ ಮದ್ಯವನ್ನು ಮಂಗಳವಾರ ಬೆಳಗ್ಗೆ ತೋಟಕ್ಕೆ ಹೋಗಿ ಕುಡಿಯುತ್ತಿದ್ದಾಗ ಕಂಡ ಜೀವಂತ ಹಾವನ್ನು ಹಿಡಿದು ಕಚ್ಚಿ ಅರ್ಧಂಬರ್ಧ ಸಾಯಿಸಿದ್ದಾನೆ. ಅಲ್ಲದೇ ಅದನ್ನು ಕುತ್ತಿಗೆಗೆ ಹಾಕಿಕೊಂಡು ದ್ವಿಚಕ್ರ ವಾಹನದಲ್ಲಿ ಗ್ರಾಮಕ್ಕೆ ಆಗಮಿಸಿದಾಗ ಊರವರು ಅದನ್ನು ಕಂಡು ಹೌಹಾರಿದ್ದಲ್ಲದೇ ಹಾವನ್ನು ತೆಗೆದುಹಾಕುವಂತೆ ಹೇಳಿದಾಗ ನಶೆಯಲ್ಲಿದ್ದ ಕುಮಾರ್, ಬೈಕ್ನಲ್ಲಿ ಕುಳಿತುಕೊಂಡೇ ಮದ್ಯವನ್ನು ಸೇವಿಸುತ್ತಾ ಹಾವನ್ನು ಕಚ್ಚಿ ಕಚ್ಚಿ ಸಾಯಿಸಿದ್ದಾನೆ. ಅದರಿಂದ ಆತನಿಗೆ ಯಾವುದೇ ಹಾನಿಯಾಗಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್