ಶಾಸಕರ ನಿರ್ಲಕ್ಷ್ಯದಿಂದ ಅಭಿವೃದ್ಧಿ ಕುಂಠಿತ


Team Udayavani, May 10, 2018, 3:59 PM IST

kol.jpg

ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಹತ್ತು ವರ್ಷಗಳ ಕಾಲ ಅಧಿಕಾರಿದಲ್ಲಿದ್ದ ಶಾಸಕ ವರ್ತೂರು ಪ್ರಕಾಶ್‌ ಅವರ ದುರಾಡಳಿತದಿಂದಾಗಿ ನಗರದ ಅಭಿವೃದ್ಧಿ ಕಡೆಗಣನೆಯಾಗಿದೆ ಎಂದು ಜೆಡಿಎಸ್‌ ಅಭ್ಯರ್ಥಿ ಕೆ.ಶ್ರೀನಿವಾಸಗೌಡ ಆರೋಪಿಸಿದರು.

ನಗರದ ಟಮಕ, ಗಾಂಧಿನಗರ, ಮೆಕ್ಕೆ ವೃತ್ತ, ಕೋಟೆ, ಕುರುಬರಪೇಟೆ, ಮೋಚಿ ಪಾಳ್ಯಗಳಲ್ಲಿ ರೋಡ್‌ ಶೋ ನಡೆಸಿದ ನಂತರ ಬಂಗಾರಪೇಟೆ ವೃತ್ತದಲ್ಲಿನ ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡುತ್ತಿದ್ದರು.

ನಗರ ಸಮಸ್ಯೆಗಳ ಗೂಡಾಗಿದೆ. ರಸ್ತೆಗಳೆಲ್ಲ ಹಾಳಾಗಿದ್ದು, ಸಾರ್ವಜನಿಕರು ಸುಗಮವಾಗಿ ಸಂಚರಿಸಲು ಅಗುತ್ತಿಲ್ಲ. ಕುಡಿಯಲು ನೀರಿಲ್ಲದೇ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಇದಕ್ಕೆ ಶಾಸಕ ವರ್ತೂರು ಪ್ರಕಾಶ್‌ ಅವರ ನಿರ್ಲಕ್ಷ್ಯವೇ
ಕಾರಣ ಎಂದು ಆರೋಪಿಸಿದರು. 

ನೀರಿನ ಅನುದಾನ ದುರುಪಯೋಗ: ನಗರ ಪ್ರದೇಶಕ್ಕಾಗಿ ಕುಡಿಯುವ ನೀರಿಗೆ ಮೀಸಲಿರಿಸಿರುವ ಅಮ್ಮೇರಹಳ್ಳಿ ಹಾಗೂ ಮಡೇರಹಳ್ಳಿ ಕೆರೆ ನೀರನ್ನು ರಕ್ಷಿಸಿ, ಪೈಪ್‌ಲೈನ್‌ ಮೂಲಕ ನೀರು ಹರಿಸುವಲ್ಲಿ ವಿಫ‌ಲರಾಗಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ನೀರಿನ ಸೌಲಭ್ಯಕ್ಕಾಗಿ ಬಂದಿದ್ದ ಅನುದಾನವನ್ನು ದುರುಪಯೋಗ ಮಾಡಿ ಕೊಂಡಿದ್ದಾರೆ ಎಂದು ದೂರಿದರು.

ರಾಶಿ ರಾಶಿ ಕಸ: ಸ್ವತ್ಛತೆ ಬಗ್ಗೆ ಜಪ ಮಾಡುವ ಕಾಂಗ್ರೆಸ್‌ನವರು ನಗರಸಭೆಯಲ್ಲಿ ಈಗ ಅಧಿಕಾರದಲ್ಲಿದ್ದಾರೆ. ನಗರದಲ್ಲಿ ಎಲ್ಲಿ ನೋಡಿದರೂ ರಾಶಿ ರಾಶಿ ಕಸ ಬಿದ್ದಿದೆ. ಸಮಸ್ಯೆಯನ್ನು ನಿವಾರಿಸಲು ಮುಂದಾಗುತ್ತಿಲ್ಲ. ಹಣ ಗಳಿಸುವಂತಹ ಕಾಮಗಾರಿಗಳಿಗೆ ಟೆಂಡರ್‌ ಕರೆಯುವುದರಲ್ಲಿ ನಿರತರಾಗಿದ್ದಾರೆಂದು ಟೀಕಿಸಿದರು. 

ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಮಾಡುವುದು ಬಿಟ್ಟು, ಇಲ್ಲ ಸಲ್ಲದ ಆರೋಪ ಹೊರೆಸಿ ವರ್ಗಾವಣೆ ಮಾಡಿಸುತ್ತಾರೆ. ಪ್ರಾಮಾಣಿಕ ಅಧಿಕಾರಿಗಳಿಗೆ ಇಲ್ಲಿ ಜಾಗವೇ ಇಲ್ಲವಾಗಿದೆ ಎಂದರು. 

ವರ್ತೂರು ಆಡಳಿತಕ್ಕೆ ಅಂತ್ಯ ಹಾಡಿ: ತಾವು ಅಧಿಕಾರದಲ್ಲಿದ್ದಾಗ ಪಕ್ಷಭೇದ ಮರೆತು ಜನಪರ ಕೆಲಸ ಮಾಡಿದ್ದೇನೆ. ಯಾವುದೇ ಅಧಿಕಾರಿಗೆ ತೊಂದರೆ ನೀಡಿಲ್ಲ. ಯಾರಿಂದಲೂ ನಯಾಪೈಸೆ ಪಡೆದಿಲ್ಲ. ಕೋಲಾರದ ಪ್ರತಿ ರಸ್ತೆಯೂ ಹಾಳಾಗಿದೆ. ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ. ಎಲ್ಲಿ ನೋಡಿದರೂ ಧೂಳು ತುಂಬಿದ್ದು, ಜನತೆ ರೋಸಿ ಹೋಗಿದ್ದಾರೆ. ಈ ಬಾರಿ ಜೆಡಿಎಸ್‌ ಬೆಂಬಲಿಸುವ ಮೂಲಕ ವರ್ತೂರು ಪ್ರಕಾಶ್‌ ಆಡಳಿತಕ್ಕೆ ಅಂತ್ಯ ಹಾಡಬೇಕೆಂದರು. 

ಒಕ್ಕಲಿಗರ ಸಂಘದ ನಿರ್ದೇಶಕ ರಾಮು, ಜೆಡಿಎಸ್‌ ಜಿಲ್ಲಾ ಉಪಾಧ್ಯಕ್ಷ ಚೆಲುವನಹಳ್ಳಿ ನಾಗರಾಜ್‌, ತಾಪಂ ಸದಸ್ಯ ಮುರಳಿ, ಮೂರಾಂಡಹಳ್ಳಿ ಗೋಪಾಲ್‌, ಟಿಂಬರ್‌ ಬಾಬು, ಕಿಲಾರಿಪೇಟೆ ಮೇಸ್ತ್ರೀ ನಾರಾಯಣ ಸ್ವಾಮಿ, ಮುಕ್ಕಡ್‌ ವೆಂಕಟೇಶ್‌, ನಾಗರಾಜ್‌ ಯಾದವ್‌, ಶಬರಿ, ತಾಲೂಕು ಅಧ್ಯಕ್ಷ ಬಾಬುಮೌನಿ, ಸುಗಟೂರು ಎಸ್‌.ವಿ.ನಾರಾಯಣಗೌಡ ಇದ್ದರು. 

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.