ಸ್ವತ್ಛತೆ ಕಾಪಾಡುವಲ್ಲಿ ನಗರಸಭೆ ವಿಫ‌ಲ


Team Udayavani, Oct 4, 2018, 3:42 PM IST

kol-1.jpg

ಕೋಲಾರ: ಇಲ್ಲಿನ ನಗರಸಭೆ ವೈಫ‌ಲ್ಯ ದಿಂದಾಗಿ ನಗರದ ಶಾಸಕ ಕೆ.ಶ್ರೀನಿವಾಸಗೌಡರ ನಿವಾಸಕ್ಕೆ ಹೊಂದಿಕೊಂಡಿರುವ ಹದಿನೇಳನೇ ವಾರ್ಡ್‌ನಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ ತಿಪ್ಪೆಯಾಗಿ ರೂಪು ಗೊಂಡಿದ್ದು, ಚರಂಡಿ
ಗಳಲ್ಲಿ ಕೊಳಕು ತುಂಬಿ ತುಳುಕುವ ಮೂಲಕ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ.

ನಗರದ ಹದಿನೇಳನೇ ವಾರ್ಡಿಗೆ ಸೇರುವ ಶಹೀನ್‌ಶಾ ನಗರ ಹಾಗೂ ಅನ್ಸಾರ್‌ ನಗರಗಳಲ್ಲಿ ನಾಗರಿಕರಿಗೆ ಮೂಲಭೂತ ಸೌಕರ್ಯಗಳ ಕೊರತೆ ಎದುರಾಗಿದ್ದು, ನಗರಸಭೆ ವಾರ್ಡಿನ ಸ್ವತ್ಛತೆ ಕುರಿತು ವಕ್ರದೃಷ್ಟಿ ಬೀರುತ್ತಿದೆಯೇ ಎಂಬ ಅನುಮಾನ ಮೂಡುವಂತಾಗಿದೆ. 

ಚರಂಡಿಗಳಲ್ಲಿ ಕಸದ ರಾಶಿ: ವಾರ್ಡಿನಲ್ಲಿ ಕಸ ವಿಲೇವಾರಿ ಮಾಡಿ ಮೂರ್‍ನಾರು ತಿಂಗಳುಗಳೇ ಕಳೆದಿವೆ. ವಾರ್ಡಿನಲ್ಲಿ ಎಲ್ಲಿ ನೋಡಿದರೂ ಕಸ ರಾಶಿ ರಾಶಿಯಾಗಿ ಕಾಣಿಸುತ್ತಿದ್ದು, ಗಾಳಿಗೆ ರಸ್ತೆಯುದ್ದಕ್ಕೂ ಹರಡಿಕೊಳ್ಳುವ ಮೂಲಕ ನಾಗರಿಕರಿಗೆ ಕಿರಿಕಿರಿ ಯನ್ನುಂಟು ಮಾಡುತ್ತಿದೆ.

ಇದೇ ವಾರ್ಡಿನಲ್ಲಿ ಚರಂಡಿಗಳನ್ನು ಸ್ವತ್ಛ ಮಾಡಿ ಹಲವಾರು ತಿಂಗಳುಗಳೇ ಕಳೆದಿವೆ. ಚರಂಡಿಗಳಲ್ಲಿ ಕಸದ ರಾಶಿ ತುಂಬಿ ತುಳುಕುತ್ತಿದ್ದು, ದುರ್ವಾಸನೆ ಬೀರುತ್ತಿದೆ. ವಾರ್ಡಿನಲ್ಲಿ ಹಾದು ಹೋಗುವ ರಾಜಕಾಲುವೆಯೂ ಕಸದ ತೊಟ್ಟಿಯಾಗಿ ಮಾರ್ಪಟ್ಟಿದ್ದು, ಸ್ವಲ್ಪ ಮಳೆ ಬಂದರೂ ನೀರು ಮನೆ, ಅಂಗಡಿಗಳಿಗೆ ನುಗ್ಗಿ ಅನಾಹುತ ಮಾಡುತ್ತಿದೆ.

ರೈಲ್ವೆ ಹಳಿ ಪಕ್ಕದ ರಸ್ತೆಯಲ್ಲೂ ಕಸದ ರಾಶಿ: ಇದೇ ವಾರ್ಡಿನ ಕೆಳ ಭಾಗದಲ್ಲಿ ರೈಲ್ವೆ ಹಳಿ ಹಾದು ಹೋಗಿದ್ದು, ಹಳಿ ಪಕ್ಕದಲ್ಲಿ ಹಾದು ಹೋಗುವ ರಸ್ತೆಯಲ್ಲೂ ಕಸದ ರಾಶಿ ತುಂಬಿ ತುಳುಕುತ್ತಿದೆ. ಕಸದ ಸಮಸ್ಯೆಯಿಂದಾಗಿ ರೈಲ್ವೆ ಇಲಾಖೆ ಈ ರಸ್ತೆಯನ್ನೇ ಮುಚ್ಚುವ ನಿರ್ಧಾರಕ್ಕೆ ಬಂದಂತಿದೆ.

ಕುಡಿವ ನೀರು, ಬೀದಿ ದೀಪಗಳ ಸಮಸ್ಯೆ: ಟ್ಯಾಂಕರ್‌ ಮೂಲಕ ನೀರು ಪೂರೈಕೆ ಸ್ಥಗಿತಗೊಳಿಸಿದ ನಂತರ ಹದಿನೇಳನೇ
ವಾರ್ಡಿಗೆ ಸೇರುವ ಅನ್ಸಾರ್‌ ನಗರದ ನಿವಾಸಿಗಳಿಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಬೀದಿ ದೀಪಗಳ ವಿಚಾರ ಕೇಳು ವಂತೆಯೇ ಇಲ್ಲವಾಗಿದೆ. ಕೊಳವೆ ಬಾವಿ, ಪಂಪು ಮೋಟಾರು ದುರಸ್ತಿ ಇತ್ಯಾದಿ ಕಾರ್ಯಗಳು ಸಂಪೂರ್ಣ ನೆನೆಗುದಿಗೆ ಬಿದ್ದಿವೆ.

ನಗರಸಭೆ ನಿರ್ಲಕ್ಷ್ಯ: ಹದಿನೇಳನೇ ವಾರ್ಡ್‌ನಲ್ಲಿರುವ ಈ ಎಲ್ಲ ಸಮಸ್ಯೆಗಳ ಬಗ್ಗೆ ನಗರಸಭೆಗೆ ಹಲವಾರು ಬಾರಿ ದೂರು
ನೀಡಿದರೂ ಯಾವೊಬ್ಬ ಅಧಿಕಾರಿಯೂ ವಾರ್ಡಿಗೆ ಬಂದು ಸಮಸ್ಯೆಗಳನ್ನು ಪರಿಶೀಲಿಸಿ, ಪರಿಹರಿಸಲು ಮುಂದಾ
ಗುತ್ತಿಲ್ಲವೆಂಬ ದೂರು ಸ್ಥಳೀಯ ನಾಗರಿಕರಿಂದ ಕೇಳಿ ಬರುತ್ತಿದೆ.

ಈ ಹಿಂದೆ ನಗರಸಭೆಯಲ್ಲಿ ರಮೇಶ್‌ ಎಂಬ ಒಬ್ಬರೇ ಆರೋಗ್ಯ ನಿರೀಕ್ಷಕರಿದ್ದಾಗಲೂ ನಗರದಲ್ಲಿ ಸ್ವತ್ಛತಾ ಕಾರ್ಯಗಳು ಸಮಾಧಾನಕರವಾಗಿ ನಡೆಯುತ್ತಿದ್ದವು. ಆದರೆ, ಈಗ ನಗರಸಭೆಯಲ್ಲಿ ಮೂವರು ಆರೋಗ್ಯ ನಿರೀಕ್ಷಕರಿದ್ದರೂ ಸ್ವತ್ಛತಾ ಕಾರ್ಯಗಳು ಆಗುತ್ತಿಲ್ಲ. ಹದಿನೇಳನೇ ವಾರ್ಡಿನಂತಹ ಪ್ರದೇಶಗಳ ಸ್ವತ್ಛತೆಯನ್ನು ನಗರಸಭೆ ಸಂಪೂರ್ಣ ಕಡೆಗಣಿಸಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಕೋಲಾರ ನಗರಸಭೆ ಅಧಿಕಾರಿಗಳು ಇನ್ನಾದರೂ ಹದಿನೇಳನೇ ವಾರ್ಡಿನ ಸಮಸ್ಯೆಗಳನ್ನು ಬಗೆಹರಿಸಲು ಗಮನ ಹರಿಸದಿದ್ದರೆ, ವಾರ್ಡಿನ ಯುವಕರನ್ನು ಸೇರಿಸಿ ಅವರಿಂದಲೇ ಕಸದ ರಾಶಿ ತಂದು ನಗರಸಭೆ ಮುಂದೆ ಹಾಕುವ ಮೂಲಕ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ವಾರ್ಡಿನ ಸದಸ್ಯ ಅಫ್ರೋಜ್ಜ್‌ ಪಾಷಾ ಎಚ್ಚರಿಸಿದ್ದಾರೆ. 

ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ನಗರದ ಹದಿನೇಳನೇ ವಾರ್ಡಿಗೆ ಮೂಲಭೂತ ಸೌಕರ್ಯಗಳು ಇಲ್ಲದಂತಾಗಿದೆ. ಎಲ್ಲೆಂದರಲ್ಲಿ ಕಸದ ರಾಶಿ, ತುಂಬಿ ತುಳುಕುತ್ತಿರುವ ಚರಂಡಿಗಳು, ಕುಡಿಯುವ ನೀರಿನ ಅಭಾವ,
ವಿದ್ಯುದ್ದೀಪಗಳ ಸಮಸ್ಯೆ ನಾಗರಿಕರನ್ನು ಮೂರು ತಿಂಗಳಿಂದ ಕಾಡುತ್ತಿದೆ. 
  ಅಪ್ರೋಜ್‌ ಪಾಷಾ,17 ನೇ ವಾರ್ಡ್‌ ನಗರಸಭಾ ಸದಸ್ಯರು

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.