ಸಡಿಲಿಕೆ ಮಾಡಿದ್ರೂ ಅಂಗಡಿ ತೆರೆಯುತ್ತಿಲ್ಲ!

ಅಂಗಡಿ ತೆರೆಯಲು ಅನುಮತಿ ನೀಡಿಲ್ಲ ; ತರಕಾರಿ , ಹಣ್ಣಿನ ವ್ಯಾಪಾರ ಎಂದಿನಂತೆ

Team Udayavani, Apr 30, 2020, 5:10 PM IST

ಸಡಿಲಿಕೆ ಮಾಡಿದ್ರೂ ಅಂಗಡಿ ತೆರೆಯುತ್ತಿಲ್ಲ!

ಸಾಂದರ್ಭಿಕ ಚಿತ್ರ

ಕೋಲಾರ: ಲಾಕ್‌ಡೌನ್‌ ನಿಯಮಗಳ ಸಡಿಲಿಕೆಯಾಗಿದ್ದರಿಂದ ಜಿಲ್ಲಾ ಕೇಂದ್ರ ಕೋಲಾರದಲ್ಲಿ ಬುಧವಾರ ಹಲವಾರು ವ್ಯಾಪಾರಿಗಳು ಬೆಳಗ್ಗಿಯೇ ಅಂಗಡಿ ತೆರೆಯಲು ಮುಂದಾದರು. ಆದರೆ, ಪೊಲೀಸರು ಇದಕ್ಕೆ ಅವಕಾಶ ನೀಡಲಿಲ್ಲ. ಮಧ್ಯಾಹ್ನದವರೆಗೂ ಕೆಲವು ವ್ಯಾಪಾರಿಗಳು ತಮ್ಮ ಅಂಗಡಿಗಳ ಮುಂದೆಯೇ  ನಿಂತು ಕಾದು ಪೊಲೀಸ್‌ ಬಂದೋಬಸ್ತ್ ಕಂಡು ವಾಪಸ್‌ ಹೋದರು. ಕೆಲವರು ಅರ್ಧ ಬಾಗಿಲು ಅಂಗಡಿ ತೆರೆದು ಸ್ವಚ್ಛತಾ ಕಾರ್ಯ ನಡೆಸಿದರು.

ನಗರದ ಎಂ.ಜಿ.ರಸ್ತೆಯಲ್ಲಿ ಮಧ್ಯಾಹ್ನದ ವೇಳೆಗೆ ಬಹುತೇಕ ಲಾಕ್‌ಡೌನ್‌ ದೃಶ್ಯವೇ ಕಂಡು ಬಂದಿತು. ಎಂದಿನಂತೆ ಹಣ್ಣು, ಹಾಲು, ತರಕಾರಿ, ದಿನಸಿ ಅಂಗಡಿ, ಹಾರ್ಡ್ ವೇರ್‌ ಅಂಗಡಿಗಳು ತೆರೆದಿದ್ದು ಕಂಡು ಬಂದಿತು. ಬುಧವಾರದಿಂದ ಪ್ರಭಾತ್‌ ಚಿತ್ರಮಂದಿರ ಸಮೀಪದಲ್ಲಿ 40ಕ್ಕೂ ಹೆಚ್ಚು ಜೆರಾಕ್ಸ್‌ ಮತ್ತು ಕಂಪ್ಯೂಟರ್‌ ಅಂಗಡಿಗಳ ಪೈಕಿ ಮೂರು 4 ಅಂಗಡಿಗಳನ್ನು ಮಾತ್ರವೇ ತೆರೆಯಲಾಗಿತ್ತು.

ಕೈಗಾರಿಕೆಗಳಿಗೆ ಅನುಮತಿ: ಕೋಲಾರ ನಗರ ಸಭೆ ವ್ಯಾಪ್ತಿಗೊಳಪಡದ ಹೊರ ವಲಯದಲ್ಲಿರುವ ಕೈಗಾರಿಕೆಗಳನ್ನು ತೆರೆಯಲು ಅನುಮತಿ ಸಲಾಗಿದೆ ಈ ಬಗ್ಗೆ ಡಿ.ಸಿ. ನೇತೃತ್ವದಲ್ಲಿ ಸಭೆ ನಡೆದು ಮಾರ್ಗ ಸೂಚಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ನರಸಾಪುರ, ವೇಮಗಲ್‌ ಪ್ರದೇಶದ ಕೈಗಾರಿಕೆ ತೆರೆಯಲು ಮಾಲಿಕರು ಸಿದ್ಧತೆ ನಡೆಸುತ್ತಿದ್ದು, ಒಂದರೆಡು ದಿನಗಳಲ್ಲಿ ತೆರೆಯಲಾಗುತ್ತಿದೆ. ಆಹಾರ ಸಂಸ್ಕರಣೆ ಕೈಗಾರಿಕೆಗಳು ಕಾರ್ಯ ನಿರ್ವಹಿಸುತ್ತಿವೆ.

ಹೋಟೆಲ್‌ – ಸಾರಿಗೆ: ಹಿಂದಿನ ನಿರ್ಧಾರದಂ ತೆಯೇ ಕೆಲವು ಹೋಟೆಲ್‌ಗಳಲ್ಲಿ ಪಾರ್ಸಲ್‌ಗ‌ಳಿಗಷ್ಟೇ ಅನುಮತಿಸಲಾಗಿದ್ದು, ಇದೇ ಪದ್ಧತಿ ಬುಧವಾರವೂ ಮುಂದುವರಿಯಿತು. ಸಾರಿಗೆ ಸಂಸ್ಥೆಯ ಮತ್ತು ಖಾಸಗಿ ಬಸ್‌ ಕಾರು ಆಟೋಗಳಿಗೆ ಅನುಮತಿ ನೀಡಿಲ್ಲ.

ಮುಂಜಾನೆ ಕೆಲ ಅಂಗಡಿಗಳನ್ನು ಪೊಲೀಸರು ಮುಚ್ಚಿಸಿದ್ದರಿಂದ ವರ್ತಕರು ಸಾಮೂಹಿಕವಾಗಿ ಅಂಗಡಿ ತೆರೆಯುವ ಪ್ರಯತ್ನ ಮಾಡಿಲ್ಲ.
●ಎಸ್‌.ಸಚ್ಚಿದಾನಂದ, ಎಂ.ಜಿ.ರಸ್ತೆ ವರ್ತಕ

ಷರತ್ತು ಮೇರೆಗೆ ಹೊರ ವಲಯದ ಕೈಗಾರಿಕೆ ತೆರೆಯಲು ಅನುಮತಿಸಲಾಗಿದೆ. ಆಹಾರ ಸಂಸ್ಕರಣಾ ಕೈಗಾರಿ ಕೆಗಳು ತೆರೆದಿದ್ದು, ಇನ್ನುಳಿದವು ನಿಯಮಾವಳಿಗಳ ಪ್ರಕಾರ
ತೆರೆಯಲು ಸಿದ್ಧತೆ ನಡೆಯುತ್ತಿದೆ.
●ರವಿಚಂದ್ರ, ಉಪ ನಿರ್ದೇಶಕರು, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ.

ಲಾಕ್‌ಡೌನ್‌ ಸಡಿಲಿಕೆಯಿಂದಾಗಿ ಅಂಗಡಿ ಮುಂಗಟ್ಟು ತೆರೆಯಬಹುದಾಗಿದೆ. ಆದರೂ, ಬುಧವಾರ ಸಂಜೆ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ಹಾಗೂ ಡಿ.ಸಿ. ಸತ್ಯಭಾಮ ನೀಡುವ ನಿರ್ದೇಶನಗಳ ಮೇರೆಗೆ ವ್ಯಾಪಾರ ವಹಿವಾಟು ಆರಂಭವಾಗಬಹುದು.
●ಶ್ರೀಕಾಂತ್‌, ಪೌರಾಯುಕ್ತ, ನಗರಸಭೆ ಕೋಲಾರ.

●ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.