ಸಾಮಾನ್ಯಳಂತೆ ತಾಲೂಕು ಕಚೇರಿಗೆ ಆಗಮಿಸಿದ ಉಪವಿಭಾಗಾಧಿಕಾರಿ!

ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರ ಪರದಾಟ ಖುದ್ದು ವೀಕ್ಷಣೆ ; ಅಧಿಕಾರಿಗಳಿಗೆ ತರಾಟೆ

Team Udayavani, Nov 18, 2022, 6:15 PM IST

1-wwqwqe

ಕೋಲಾರ: ತಾಲೂಕು ಕಚೇರಿಯಲ್ಲಿ ಕೆಲಸ ಕಾರ್ಯಗಳಿಗಾಗಿ ಸಾರ್ವಜನಿಕರು ನಿತ್ಯವೂ ಹೇಗೆಲ್ಲಾ ಅಲೆದಾಡುತ್ತಾರೆ ಎಂಬುದನ್ನು ಉಪ ವಿಭಾಗಾಧಿಕಾರಿ ವೆಂಕಟಲಕ್ಷ್ಮಮ್ಮ ಶುಕ್ರವಾರ ಮಧ್ಯಾಹ್ನ ಖುದ್ದು ಅನುಭವಿಸಿದರು.

ನಗರದ ಮೆಕ್ಕೆ ವೃತ್ತದಲ್ಲಿರುವ ತಾಲೂಕು ಕಚೇರಿಗೆ ಶುಕ್ರವಾರ ಮಧ್ಯಾಹ್ನ ೪ ಗಂಟೆ ಸುಮಾರಿಗೆ ತನ್ನ ಕಚೇರಿ ಸಿಬ್ಬಂದಿ ಜೊತೆ ದ್ವಿಚಕ್ರ ವಾಹನದಲ್ಲಿ ಖುದ್ದು ಸಾಮಾನ್ಯಳಂತೆ ಆಗಮಿಸಿದ ಉಪ ವಿಭಾಗಾಧಿಕಾರಿ ವೆಂಕಟಲಕ್ಷ್ಮಮ್ಮರಿಗೂ ಜನರ ಕಷ್ಟ ಅರಿವಾಯಿತು. ಸಾರ್ವಜನಿಕರು ತಾಲೂಕು ಕಚೇರಿಯಿಂದ ಕೆಲಸ ಕಾರ್ಯ ಮಾಡಿಸಿಕೊಳ್ಳಲು, ಅಗತ್ಯದಾಖಲೆಗಳನ್ನು ಪಡೆದುಕೊಳ್ಳಲು ಹೇಗೆಲ್ಲಾ ಪರದಾಟ ನಡೆಸುತ್ತಾರೆ, ಏನೆಲ್ಲಾ ಪಡಿಪಾಟಲು ಬೀಳಬೇಕಾಗುತ್ತದೆಯೆಂಬುದನ್ನು ಸ್ವತಹ ತಾವೇ ಅನುಭವಿಸಿದರು.

ಸಾಮಾನ್ಯಳಂತೆ ಆಗಮಿಸಿದ ಉಪ ವಿಭಾಗಾಧಿಕಾರಿ ತಮಗೆ ಬೇಕಾದ ಮಾಹಿತಿಯನ್ನು ಕೇಳಿದಾಗ ಕಚೇರಿಯ ಮಹಿಳಾ ಸಿಬ್ಬಂದಿಯೊಬ್ಬರು ಅಲ್ಲೋಗು, ಇಲ್ಲೋಗು ಎಂಬಂತೆ ಉತ್ತರ ನೀಡಿದ್ದು ಉಪ ವಿಭಾಗಾಧಿಕಾರಿಯನ್ನು ಕೆರಳಿಸಿತು. ದಾಖಲೆ ವಿಭಾಗಕ್ಕೆ ತೆರಳಿದ ಉಪ ವಿಭಾಗಾಧಿಕಾರಿಗೆ ಅಲ್ಲಿನ ಸಿಬ್ಬಂದಿಯಿಂದಲೂ ಅದೇ ದಾಟಿಯ ಉತ್ತರ ಸಿದ್ದವಾಗಿತ್ತು. ಒಂದು ದಾಖಲೆಗಾಗಿ ಸಾರ್ವಜನಿಕರು ಏನೆಲ್ಲಾ ಅವ್ಯವಸ್ಥೆ ಬೀಳಬೇಕು ಎಂಬುದು ಖುದ್ದು ಉಪವಿಭಾಗಾಧಿಕಾರಿಯವರ ಅರಿವಿಗೆ ಬಂದಿತು.

ಉಪ ವಿಭಾಗಾಧಿಕಾರಿಯವರನ್ನು ಅಷ್ಟರೊಳಗಾಗಲೇ ಕೆಲವರು ಗುರುತು ಹಚ್ಚಿದ್ದರು. ಕಚೇರಿಯಲ್ಲೇ ಇದ್ದ ತಹಶೀಲ್ದಾರ್ ನಾಗರಾಜ್‌ಗೂ ಮಾಹಿತಿ ಹೋಯಿತು. ಸ್ಥಳಕ್ಕೆ ದೌಡಾಯಿಸಿ ಬಂದ ಅವರನ್ನು ಉಪ ವಿಭಾಗಾಧಿಕಾರಿ ಸಾರ್ವಜನಿಕರ ಸಮ್ಮುಖದಲ್ಲೇ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಮಹಿಳೆಯೊಬ್ಬರು ಅಗತ್ಯ ಭೂದಾಖಲೆಗಾಗಿ ಹತ್ತಾರು ದಿನಗಳಿಂದ ಓಡಾಡುತ್ತಿದ್ದಾರೆ, ಅವರಿಗೆ ದಾಖಲೆ ಸಿಕ್ಕಿಲ್ಲ. ಆ ಮಹಿಳೆಯ ದೂರಿನ ಆಧಾರದ ಮೇಲೆ ತಾವೇ ಖುದ್ದು ಬಂದಾಗ ತಮಗೂ ಅದೇ ಅನುಭವವಾಯಿತು. ಸಾರ್ವಜನಿಕರನ್ನು ಹೇಗೆಲ್ಲಾ ಅಲೆದಾಡಿಸುತ್ತಾರೆ, ಸಮರ್ಪಕವಾದ ಮಾಹಿತಿ ನೀಡಲು ಕಷ್ಟ, ಕೇಳಿದ ಮಾಹಿತಿಗೂ ಹಾರಿಕೆಯ ಉಢಾಪೆಯ ಉತ್ತರ ನೀಡಿದರೆ ಹೇಗೆಂದು ತರಾಟೆಗೆ ತೆಗೆದುಕೊಂಡರು.

ತಲೆ ತಗ್ಗಿಸಿಕೊಂಡು ನಿಲ್ಲುವ ಮೂಲಕ ತಹಶೀಲ್ದಾರ್ ನಾಗರಾಜ್ ಮತ್ತವರ ಸಿಬ್ಬಂದಿ ಕಚೇರಿಯ ಅವ್ಯವಸ್ಥೆಗಳಿಗೆ ಮೌನ ಸಮ್ಮತಿಯನ್ನೊತ್ತಿದರು. ಸಾರ್ವಜನಿಕರ ಕೆಲಸ ಕಾರ್ಯಗಳಲ್ಲಿ ಲೋಪವೆಸಗಿರುವ ಅಧಿಕಾರಿ, ಸಿಬ್ಬಂದಿಗೆ ಶೋಕಾಸ್ ನೋಟೀಸ್ ನೀಡುವುದಾಗಿ ಎಚ್ಚರಿಕೆ ನೀಡಿ ಉಪವಿಭಾಗಾಧಿಕಾರಿ ವೆಂಕಟಲಕ್ಷ್ಮಮ್ಮ ಅಲ್ಲಿಂದ ತೆರಳಿದರು.

ಕೋಲಾರ ತಾಲೂಕು ಕಚೇರಿಯ ಅವ್ಯವಸ್ಥೆಗಳ ಕುರಿತಂತೆ ಅದರಲ್ಲೂ ದಾಖಲೆ ವಿಭಾಗದಲ್ಲಿನ ಅಕ್ರಮಗಳ ಕುರಿತಂತೆ ಸಾರ್ವಜನಿಕರು ಸಾಕಷ್ಟು ಆರೋಪಗಳನ್ನು ಮಾಡುತ್ತಲೇ ಇದ್ದರು. ಆದರೂ, ಕಚೇರಿಯ ಕಾರ್ಯಕಲಾಪಗಳಲ್ಲಿ ಯಾವುದೇ ಜನಸ್ನೇಹಿ ಬದಲಾವಣೆಗಳಾಗಿರಲಿಲ್ಲ. ಇದೀಗ ಉಪ ವಿಭಾಗಾಧಿಕಾರಿ ವೆಂಕಟಕ್ಷ್ಮಮ್ಮನವರೇ ಸಾಮಾನ್ಯರಂತೆ ಬಂದು ಸಾರ್ವಜನಿಕರ ಕಷ್ಟಗಳನ್ನು ಖುದ್ದು ಅನುಭವಿಸಿ, ಸಂಬಂಧಪಟ್ಟವರನ್ನು ತರಾಟೆಗೂ ತೆಗೆದುಕೊಂಡಿದ್ದಾರೆ. ಇನ್ನಾದರೂ ಕೋಲಾರ ತಾಲೂಕು ಕಚೇರಿ ಅವ್ಯವಸ್ಥೆ ಬದಲಾದೀತೇ ಎಂದು ಸಾರ್ವಜನಿಕರು ಆಶಿಸುತ್ತಿದ್ದಾರೆ

ಕೆ.ಎಸ್.ಗಣೇಶ್

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.