ಪ್ರಾಥಮಿಕ ಹಂತದಲ್ಲೇ ಸರಿಪಡಿಸಬೇಕಿದೆ ವ್ಯವಸ್ಥೆ
Team Udayavani, Dec 19, 2019, 3:00 AM IST
ಕೋಲಾರ: ಪ್ರಾಥಮಿಕ ಹಂತದಿಂದಲೇ ಆಡಳಿತ ವ್ಯವಸ್ಥೆ ಸರಿಪಡಿಸಬೇಕಾಗಿದೆ. ಅಧಿಕಾರಿಗಳು ಜನಪ್ರತಿನಿಧಿಗಳೊಂದಿಗೆ ಉತ್ತಮ ಸಂಬಂಧ ಇಟ್ಟುಕೊಂಡು ಕೆಲಸ ಮಾಡಬೇಕು ಎಂದು ಜಿಪಂ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ತಾಕೀತು ಮಾಡಿದರು. ಬುಧವಾರ ಜಿಲ್ಲಾ ಪಂಚಾಯಿತಿ ಸಭಾಗಂಣದಲ್ಲಿ ನಡೆದ ಪಂಚಾಯಿತಿ ಅಧ್ಯಕ್ಷರ ಹಾಗೂ ಪಿಡಿಒಗಳ ಸಭೆಯಲ್ಲಿ ಮಾತನಾಡಿದರು.
ಸದಸ್ಯರಾಗಿ ಆಯ್ಕೆಯಾದಾಗಿನಿಂದ ಏನು ಸಾಧನೆ ಮಾಡಲು ಆಗಲಿಲ್ಲ. ಉಳಿದ ಒಂದೂವರೆ ವರ್ಷದ ಅವಧಿ ಯಲ್ಲಿ ನಮ್ಮ ಗುರಿ ಸಾಧನೆಗೆ ಅವಕಾಶ ಮಾಡಿಕೊಡಬೇಕು. ಜಿಲ್ಲಾ ಪಂಚಾಯಿತಿ ಪರಿಸ್ಥಿತಿ ಇಷ್ಟು ದಿನ ಹೇಗಿತ್ತು ಎಂಬುದರ ಬಗ್ಗೆ ಚರ್ಚೆ ಮಾಡುವುದಿಲ್ಲ. ಗ್ರಾಮಗಳಲ್ಲಿ ಏನೇ ಸಮಸ್ಯೆ ಎದುರಾದರೂ ಜನ ಜನಪ್ರತಿನಿ ಗಳನ್ನು ಕೇಳುತ್ತಾರೆ.
ಪಿಡಿಒಗಳು ಎಲ್ಲ ಗ್ರಾಮಗಳ ಹಂತದಲ್ಲೇ ಸಮಸ್ಯೆ ಬಗೆಹರಿಸಬೇಕು. ಜನ ಮುಖ್ಯವಾಗಿ ಬೇಡಿಕೆ ಇಡುವುದು ಕುಡಿಯುವ ನೀರು, ಬೀದಿ ದೀಪ, ಚರಂಡಿ, ಜವಾಬ್ದಾರಿ ಅರಿತು ಕೆಲಸ ಮಾಡಬೇಕು. ಅಧಿಕಾರಿಗಳ ಮತ್ತು ಜನಪ್ರತಿನಿಧಿ ಗಳ ಸಂಬಂಧ ಅರೇಂಜ್ ಮ್ಯಾರೇಜ್ ರೀತಿ ಇರಬೇಕೆ ಹೊರತು, ಲವ್ ಮ್ಯಾರೇಜ್ ರೀತಿ ಇರಬಾರದು. ಇಬ್ಬರೂ ಸಮನ್ವಯತೆಯಿಂದ ಕೆಲಸ ಮಾಡಿದರೆ ಗ್ರಾಮಗಳ ಅಭಿವೃದ್ಧಿ ಕಾಣಲು ಸಾಧ್ಯ ಎಂದು ಹೇಳಿದರು.
ಇ-ಖಾತೆಗೆ 2 ತಿಂಗಳು ಗಡುವು: ತಾಲೂಕಿನ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿರುವ ಸರ್ಕಾರಿ ಜಾಗಗಳನ್ನು ಗುರುತಿಸಿ ಇ-ಖಾತೆ ಮಾಡಬೇಕು. ಜತೆಗೆ ಬೇಲಿ ನಿರ್ಮಿಸಬೇಕು ಹಾಗೂ ಇ-ಖಾತೆಗಾಗಿ ಅರ್ಜಿ ಸಲ್ಲಿಸಿರುವ ರೈತರ, ಬಡವರ ಕೆಲಸ ತ್ವರಿತವಾಗಿ ಮುಗಿಸಬೇಕು. ಎರಡು ತಿಂಗಳೊಳಗೆ ಇ-ಖಾತೆ ಮುಗಿಸಬೇಕು ಎಂದು ಗಡವು ನೀಡಿದರು.
ಸದಸ್ಯ ಅರುಣ್ ಪ್ರಸಾದ್ ಮಾತನಾಡಿ, ಇ-ಖಾತೆ ಮಾಡಿಸಿಕೊಡಲು ಅಧಿ ಕಾರಿಗಳು ತೊಂದರೆ ನೀಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ. ಇದರ ಬಗ್ಗೆ ಚರ್ಚಿಸಲು ಸರ್ವೇ ಇಲಾಖೆಯವರು ಒಬ್ಬರು ಸಭೆಗೆ ಬರುವುದಿಲ್ಲ, ಇ-ಖಾತೆ ಕುರಿತು ಇರುವ ಸಮಸ್ಯೆ ಕುರಿತು ಗಮನಕ್ಕೆ ತಂದರೆ ಬಗೆಹರಿಸಲು ಅನುಕೂಲವಾಗುತ್ತದೆ, ವಕ್ಕಲೇರಿ ಕ್ಷೇತ್ರದ ಪಂಚಾಯಿತಿ ಅ ಧಿಕಾರಿಗಳು ಮಾಹಿತಿ ನೀಡಬೇಕು ಎಂದು ಹೇಳಿದರು.
ಸಮಸ್ಯೆ ಪರಿಹಾರಕ್ಕೆ ವಿಳಂಬ ಬೇಡ: ಜಿಪಂ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ಮಾತನಾಡಿ, ತಾಲೂಕಿನ ಕೆಲ ಕೆರೆಗಳಿಗೆ ಕೆಸಿ ವ್ಯಾಲಿ ನೀರು ಹರಿಯುತ್ತಿರುವುದರಿಂದ ಕೊಳವೆಬಾವಿಗಳ ಅಂತರ್ಜಲಮಟ್ಟ ವೃದ್ಧಿಯಾಗಿದೆ. ಬೇರೆ ಗ್ರಾಮಗಳಲ್ಲಿ ಸಮಸ್ಯೆ ಕಾಣುತ್ತಿದ್ದು, ಅಧಿ ಕಾರಿಗಳು ವಿಳಂಬ ಮಾಡದೆ ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ತಾಕೀತು ಮಾಡಿದರು.
ನರಸಾಪುರ ಪಿಡಿಒ ಮಹೇಶ್ ಕುಮಾರ್ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯಲ್ಲಿ ಬತ್ತಿ ಹೋಗಿರುವ ಕೊಳವೆ ಬಾವಿಗಳಿಗೆಲ್ಲ ಬೆಸ್ಕಾಂನವರು ಬಿಲ್ ಹಾಕುತ್ತಿದ್ದಾರೆ. ಬಿಲ್ ಪಾವತಿ ಮಾಡುವುದು ಒಂದು ದಿನ ತಡವಾದರೆ ಬಡ್ಡಿ ಹಾಕುತ್ತಿದ್ದಾರೆ. ಹೀಗೆ ಮಾಡುತ್ತಿರುವುದರಿಂದ ಶೇ.50ರಷ್ಟು ಅನುದಾನ ಇವರಿಗೆ ಕಟ್ಟಲು ಸರಿ ಹೋಗುತ್ತದೆ.
ಕೂಡಲೇ ಅವರೊಂದಿಗೆ ಚರ್ಚಿಸಿ ಚಾಲ್ತಿಯಲ್ಲಿರುವ ಕೊಳವೆಬಾವಿಗಳಿಗೆ ಮಾತ್ರ ಬಿಲ್ ಹಾಕಲು ಸೂಚಿಸಬೇಕು ಎಂದು ಕೋರಿದರು. ನರಸಾಪುರ ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ವಾಸವಿರುವುದರಿಂದ ತ್ಯಜ್ಯ ಉತ್ಪತ್ತಿಯಾಗುತ್ತಿದೆ. ಘನ, ದ್ರವ ತ್ಯಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಜಾಗ ಕೇಳಿದ್ದರೂ ಇದುವರೆಗೂ ಮಂಜೂರಾಗಿಲ್ಲ ಎಂದು ತಿಳಿಸಿದರು.
ಶುದ್ಧ ನೀರಿನ ಘಟಕ ದುರಸ್ತಿಗೆ ತಾಕೀತಿಗೆ ಒತ್ತಾಯ: ಬೆಳ್ಳೂರು ಪಿಡಿಒ ಸಂಪರಾಜ್ ಮಾತನಾಡಿ, ಗ್ರಾಮಗಳಲ್ಲಿ ಯಾವುದೋ ಏಜೆನ್ಸಿಯವರು ಶುದ್ಧ ನೀರಿನ ಘಟಕಗಳನ್ನು ಸ್ಥಾಪನೆ ಮಾಡಿದ್ದು, 3 ರಿಂದ 5 ವರ್ಷ ನಿರ್ವಹಣೆ ಜವಾಬ್ದಾರಿ ಅವರದೇ ಇರುತ್ತದೆ. ಕೆಟ್ಟು ಹೋಗಿದ್ದರೂ ಸರಿಪಡಿಸುವುದಿಲ್ಲ. ಜನ ನಮ್ಮನ್ನು ಕೇಳಿದಾಗ ಯಾರನ್ನು ಸಂಪರ್ಕಿಸಬೇಕು ಎಂಬುದು ಗೊತ್ತಾಗುತ್ತಿಲ್ಲ ಎಂದು ಸಭೆಯ ಗಮನಕ್ಕೆ ತಂದರು.
ಮಧ್ಯ ಪ್ರವೇಶ ಮಾಡಿದ ಅಧ್ಯಕ್ಷ ಸಿ.ಎಸ್.ವೆಂಕಟೇಶ್, ಈ ಬಗ್ಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳ, ಏಜೆನ್ಸಿಯವರ ಸಭೆ ಕರೆದು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು. ಸಮರ್ಪಕವಾಗಿ ತೆರಿಗೆ ವಸೂಲಿ ಮಾಡಬೇಕು.
ಭಾರತ್ ಸ್ಕೌಟ್ಸ್ ಮತ್ತು ಗೆ„ಡ್ಸ್ ಸಂಸ್ಥೆಗೆ ಸ್ಥಳೀಯ ಸಂಸ್ಥೆಗಳಿಂದ ಕನಿಷ್ಠ ಅನುದಾನ ಮೀಸಲಿಡಲು ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಇದರಕ್ಕೆ ಪ್ರತಿ ಪಂಚಾಯಿತಿಯಿಂದಲೂ 5 ಸಾವಿರ ಮಂಜೂರು ಮಾಡಬೇಕು ಎಂದು ಹೇಳಿದರು. ಜಿ.ಪಂ ಉಪಾಧ್ಯಕ್ಷೆ ಯಶೋಧ, ಸದಸ್ಯರಾದ ರೂಪಶ್ರೀ, ಉಷಾ, ಮುನಿಲಕ್ಷ್ಮಮ್ಮ, ತಾಪಂ ಅಧ್ಯಕ್ಷ ಎಂ.ಆಂಜಿನಪ್ಪ, ಕಾರ್ಯನಿರ್ವಹಣಾಧಿ ಕಾರಿ ಬಾಬು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ