ಗಡಿ ಗ್ರಾಮ ರಸ್ತೆಗಳಲ್ಲಿ ಗುಂಡಿಗಳದ್ದೇ ಕಾರುಬಾರು


Team Udayavani, Nov 30, 2019, 4:40 PM IST

kolar-tdy-2

ಬೇತಮಂಗಲ: ಹೋಬಳಿಯ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಗುಂಡಿ ಬಿದ್ದು, ಸಂಚಾರಕ್ಕೆ ತೀವ್ರ ತೊಂದರೆ ಆಗಿದೆ. ಡಾಂಬರು ಕಾಣದ ಗಡಿ ಗ್ರಾಮಗಳ ರಸ್ತೆಯಲ್ಲೇ ನಿತ್ಯ ನರಕಯಾತನೆ ಪಡುತ್ತಾ, ಓಡಾಡುವ ಸ್ಥಿತಿ ವಾಹನ ಸವಾರರದ್ದಾಗಿದೆ. ಕ್ಯಾಸಂಬಳ್ಳಿ ಹೋಬಳಿಯ ಮೋಕತಪಲ್ಲಿ-ತೊಂಗಲ್‌ ಕುಪ್ಪ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಡಾಂಬರೀಕರಣ ಮಾಡಿ ದಶಕಗಳಲೇ ಕಳೆಯುತ್ತಿದ್ದರೂ ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯವಹಿಸಿದ್ದಾರೆ. ಇದರಿಂದ ರಸ್ತೆಗಳಿಗೆ ಗ್ರಹಣಹಿಡಿದಂತಾಗಿದೆ.

ರಸ್ತೆ ಉದ್ದಕ್ಕೂ ಗುಂಡಿಗಳು: ಗೊಲ್ಲಗುರುವೇನಹಳ್ಳಿಯವರೆಗೂ ರಸ್ತೆಗೆ ಡಾಂಬರೀಕರಣಗೊಳಿಸಿದ್ದು, ಮೋತಕಪಲ್ಲಿ ಗ್ರಾಮಕ್ಕೆ ಹೋಗುವ ರಸ್ತೆ ತಿರುವಿನಿಂದ ತೋಗಲ್‌ ಕುಪ್ಪ ಗ್ರಾಮದವರೆಗೂ 5 ಕಿ.ಮೀ. ಇದೆ. ಇಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಡಾಂಬರೂ ಕಿತ್ತು ಹೋಗಿ ಜೆಲ್ಲಿಕಲ್ಲು, ಮಣ್ಣು ಮೇಲೆ ಬಂದಿವೆ. ಈ ಜೆಲ್ಲಿ ಕಲ್ಲುಗಳ ಮೇಲೆ ದ್ವಿಚಕ್ರ ವಾಹನಗಳು ಓಡಾಡಿದ್ರೆ ಆಯಾತಪ್ಪಿ ಬೀಳುವುದು ಗ್ಯಾರಂಟಿ. ಕೆಲವೊಮ್ಮೆವಾಹನದ ಚಕ್ರಗಳಿಂದ ಸಿಡಿದ ಕಲ್ಲು ಪಾದಚಾರಿಗಳಿಗೆ ತಲೆಗೆ ಬಿದ್ದು ಗಾಯಗೊಂಡಿರುವ ಘಟನೆಗಳೂ ನಡೆದಿವೆ. ಇದರಿಂದ ಜನ ರಸ್ತೆಯಲ್ಲಿ ವಾಹನಗಳು ಬಂದರೆ ಮಾರು ದೂರ ಓಡುತ್ತಾರೆ.

ಬಸ್‌ ಸೌಕರ್ಯವೂ ಇಲ್ಲ: ಈ ಆಂಧ್ರಗಡಿಗೆ ಹೊಂದಿಕೊಂಡಿರುವ ಗ್ರಾಮಗಳಿಗೆ ಸಮರ್ಪಕ ಬಸ್‌ ಸೌಕರ್ಯವೂ ಇಲ್ಲ, ಬೆಳಗ್ಗೆ ಮತ್ತು ಸಂಜೆ ವೇಳೆ ಮಾತ್ರ ಒಮ್ಮೆ ಬರುತ್ತವೆ ಎಂದು ಗ್ರಾಮದ ಸುರೇಶ್‌ ಹೇಳುತ್ತಾರೆ. ರಸ್ತೆಯಲ್ಲಂತೂ ಮೊಳಕಾಲುದದ್ದ ಗುಂಡಿಗಳು, ಕಿತ್ತು ಹೋದ ಡಾಂಬರೂ, ಜೆಲ್ಲಿ ಮಣ್ಣುನಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು, ಆಟೋಗಳು, ಪಾದಚಾರಿಗಳು ನಿತ್ಯ ನರಕಯಾತನೆ ಪಡುತ್ತಿದ್ದು, ಶಾಪ ಹಾಕುತ್ತಾ ಪ್ರಯಾಣಿಸುವಂತಾಗಿದೆ.

ರಸ್ತೆಯಲ್ಲೇ ಡಿಲಿವರಿ: ಈ ಹದಗೆಟ್ಟ ರಸ್ತೆಯಲ್ಲಿ ಗರ್ಭಿಣಿಯರನ್ನು ಆಸ್ಪತ್ರೆ ಕರೆದೊಯ್ದರೆ ಮಾರ್ಗ ಮಧ್ಯದಲ್ಲೇ ಡಿಲಿವರಿ ಆಗುತ್ತದೆ. ಅನಾರೋಗ್ಯ ಪೀಡಿತರನ್ನು ಈ ರಸ್ತೆಯಲ್ಲಿ ತುರ್ತಾಗಿ ಸಾಗಿಸಲು ಮುಂದಾದ್ರೆ ಅವರು ಇಹಲೋಕ ತ್ಯಜಿಸುತ್ತಾರೆ. ಅಷ್ಟರ ಮಟ್ಟಿಗೆ ರಸ್ತೆ ಹದಗೆಟ್ಟಿದೆ. ಈ 5 ಕಿ.ಮೀ. ಪ್ರಯಾಣಕ್ಕೆ ಅರ್ಧಗಂಟೆ ಬೇಕು.

ಕೃಷಿ ಉತ್ಪನ್ನ ಸಾಗಿಸಲು ಕಷ್ಟ: ಈ ಭಾಗದಲ್ಲಿ ಹೆಚ್ಚಾಗಿ ರೈತರಿದ್ದು, ತಮ್ಮ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆಸಾಗಿಸಲು ಸಮರ್ಪಕ ರಸ್ತೆಗಳಿಲ್ಲ. ಇದರಿಂದ ರಾಜ್ಯದ ಮಾರುಕಟ್ಟೆಗೆ ಕಷ್ಟಪಟ್ಟು ಬೆಳೆದ ಉತ್ಪನ್ನಗಳನ್ನು ಸಾಗಿಸಲು ಸಮಸ್ಯೆಯಾಗಿದೆ. ಪಕ್ಕದ ಆಂಧ್ರಕ್ಕೆ ಮಾರುಕಟ್ಟೆಗೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ ಎಂದು ರೈತ ಬಸವರಾಜು ತಮ್ಮ ಅಳಲು ತೋಡಿಕೊಂಡರು.

ಸಂಬಂಧಿಕರು ಬರಲ್ಲ: ಈ ಅಸಮರ್ಪಕ ರಸ್ತೆಗಳಲ್ಲಿ ಆಟೋಗಳು ಸಂಚರಿಸಲು ಹಿಂದೇಟು ಹಾಕುತ್ತವೆ. ಆದ್ದರಿಂದ ಈ ಭಾಗದ ಜನ ಸ್ವಂತ ವಾಹನ ಹೊಂದುವುದು ಅನಿವಾರ್ಯವಾಗಿದೆ. ಒಂದು ಕಡೆ ಬಸ್‌ ಸೌಲಭ್ಯದ ಕೊರತೆ, ಮತ್ತೂಂದು ಕಡೆ ಆಟೋಗಳ ಸಂಚಾರವೂ ಇಲ್ಲ. ಇದರಿಂದ ಪರ ಊರಿನವರು, ಸಂಬಂಧಿಕರು ಈ ಭಾಗಕ್ಕೆ ಬರಲು ಹಿಂದೇಟು ಹಾಕುತ್ತಾರೆ. ಇನ್ನು ಆಂಧ್ರಗಡಿಗೆ ಹೊಂದಿಕೊಂಡಿರುವ ಸೀತಂಪಲ್ಲಿ-ಪಂತನಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯೂ ತೀರಾ ಹದಗೆಟ್ಟಿದೆ. ಈ ಕೂಡಲೇ ಶಾಸಕರು, ಅಧಿಕಾರಿಗಳು ಗಡಿ ಗ್ರಾಮಗಳ ಅಭಿವೃದ್ಧಿಗೆ ಪಣತೋಡಬೇಕಿದೆ, ನಮಗೆ ಮೂಲ ಸೌಕರ್ಯ ಒದಗಿಸಲು ಈಗಾಗಲೇ ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂಬ ದೂರು ಗ್ರಾಮಸ್ಥರದ್ದಾಗಿದೆ.

ನಬಾರ್ಡ್‌ ನೆರವು: ಮೋತಕಲಪಲ್ಲು-ತೊಂಗಲ್‌ ಕುಪ್ಪ ಮತ್ತು ಸೀತಂಪಲ್ಲಿ-ಪಂತನಹಳ್ಳಿ ಗ್ರಾಮಗಳ ರಸ್ತೆಗಳು ಜಿಪಂ ವ್ಯಾಪ್ತಿಗೆ ಸಂಬಂಧಿಸಿದ್ದು, ದಶಕಗಳಿಂದ ಡಾಂಬರು ಹಾಕಿಲ್ಲ. ಗುಂಡಿಗಳು ಬಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ನಬಾರ್ಡ್‌ ಯೋಜನೆಯ ಮೂಲಕ ಲೊಕೋಪಯೋಗಿ ಇಲಾಖೆಯಿಂದ ರಸ್ತೆ ಅಭಿವೃದ್ಧಿ ಪಡಿಸಲು ಶಾಸಕಿ ಎಂ.ರೂಪಕಲಾ 1 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಆದರೆ, ಪ್ರಸ್ತಾವನೆ ಮೂಲೆ ಸೇರಿದ್ದು, ಈ ಕೂಡಲೇ ಶಾಸಕರು ರಸ್ತೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸಿ ಕೂಡಲೇ ಟೆಂಡರ್‌ ಕರೆಯಬೇಕೆಂದು ಗಡಿ ಗ್ರಾಮಗಳ ಸಾರ್ವಜನಿಕರು ಒತ್ತಾಯಿಸಿದ್ದಾರೆ.

 

-ಆರ್‌.ಪುರುಷೋತ್ತಮರೆಡ್ಡಿ

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.