ಕೋಲಾರದಲ್ಲಿ ಸ್ವಚ್ಛತೆ ಮರೀಚಿಕೆ


Team Udayavani, Jan 26, 2020, 3:00 AM IST

kolaradalli

ಕೋಲಾರ: ಸ್ವಚ್ಛ ಭಾರತ ಯೋಜನೆಯಡಿ ಸಾಕಷ್ಟು ಅನುದಾನ ಬಿಡುಗಡೆಯಾಗಿದ್ದರೂ, ಸಮರ್ಪಕವಾಗಿ ಬಳಸಿಕೊಂಡು ಸುಂದರ ನಗರ ಮಾಡುವಲ್ಲಿ ನಗರಸಭೆ ವಿಫ‌ಲವಾಗಿರುವುದು ಸರ್ವೇಕ್ಷಣೆ ವೇಳೆ ಕಂಡು ಬಂತು.

ರಸ್ತೆ ಬದಿ, ಚರಂಡಿಗೆ ಪ್ಲಾಸ್ಟಿಕ್‌ ಸೇರಿದಂತೆ ಇತರೆ ತ್ಯಾಜ್ಯ ತುಂಬಿರುವುದು, ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ಮಾಡಿರುವುದು, ಮಾರುಕಟ್ಟೆ ಪ್ರದೇಶ, ಜನನಿಬಿಡ ಸ್ಥಳ, ಪ್ರಮುಖ ರಸ್ತೆಗಳು ಹಾಗೂ ವಾರ್ಡ್‌ಗಳಲ್ಲಿ ಎಲ್ಲೆಂದರಲ್ಲಿ ಕಸ ಎಸೆದಿರುವುದು, ಅದನ್ನು ವಿಲೇವಾರಿ ಮಾಡದೇ ಬಿಟ್ಟಿರುವ ದೃಶ್ಯ ಢಾಳಾಗಿ ಗೋಚರಿಸಿತು. ಚರಂಡಿಗಳಲ್ಲಿ ಕೊಳಚೆ ನೀರು ಮಡುಗಟ್ಟಿ, ದುರ್ನಾತ ಬೀರುತ್ತಿದ್ದನ್ನು ಕಂಡು ಸರ್ವೇಕ್ಷಣೆಗೆ ಬಂದಿದ್ದವರೇ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದದ್ದು ಕಂಡು ಬಂತು.

ಸ್ವಚ್ಛ ಭಾರತ ಸರ್ವೇಕ್ಷಣೆಗಾಗಿ ತನಿಖಾಧಿಕಾರಿ ಎನ್‌.ಮಂಜುಳಾ ನಿಯೋಜಿತರಾಗಿದ್ದು, ಶನಿವಾರ ನಗರದ ವಿವಿಧ ವಾರ್ಡ್‌ಗಳಲ್ಲಿ ಸಂಚರಿಸಿ, ನಗರಸಭೆಯ ಸ್ವಚ್ಛತಾ ಕಾರ್ಯವೈಖರಿಯನ್ನು ಖುದ್ದು ಪರಿಶೀಲಿಸಿ, ಫೋಟೋ ಸಮೇತ ದಾಖಲೆ ಮಾಡಿಕೊಂಡರು.

ಹರಡಿಕೊಂಡಿದ್ದ ಕಸ: ನಗರದ ಬಸ್‌ ನಿಲ್ದಾಣ, ಮಾರುಕಟ್ಟೆ ಸುತ್ತಮುತ್ತಲು, ಹೋಟೆಲ್‌, ತಳ್ಳುವ ಗಾಡಿಗಳು ಹೆಚ್ಚಾಗಿರುವ ಪ್ರದೇಶಗಳಲ್ಲಿ, ಪ್ರಮುಖ ರಸ್ತೆಗಳು, ಹಳೇ ಬಸ್‌ ನಿಲ್ದಾಣ, ಎಂ.ಬಿ.ರಸ್ತೆ, ಬೊಂಬುಬಜಾರ್‌ ರಸ್ತೆ, ಗಂಗಮ್ಮನಪಾಳ್ಯದ ರಸ್ತೆ, ಕುರುಬರಪೇಟೆ, ಗೌರಿಪೇಟೆ, ಕೋಟೆ ಪ್ರದೇಶ ಇತ್ಯಾದಿಗಳೆಲ್ಲೆಡೆ ಕಸ ವಿಲೇವಾರಿಯಾಗದೇ ರಸ್ತೆ ಬದಿಯಲ್ಲಿಯೇ ಹರಡಿಕೊಂಡಿದ್ದ ದೃಶ್ಯ ಕಂಡು ಬಂತು.

ಮಧ್ಯಾಹ್ನವಾದ್ರೂ ಕಸ ಸ್ವಚ್ಛ ಮಾಡಿಲ್ಲ: ಹಲವೆಡೆ ಮಧ್ಯಾಹ್ನದ ನಂತರವೂ ನಗರಸಭಾ ಸಿಬ್ಬಂದಿ ಕಸ ಸ್ವಚ್ಛಗೊಳಿಸುವ ಕಾರ್ಯದಲ್ಲಿ ಮಗ್ನರಾಗಿದ್ದರು. ಆದರೆ, ಬಹುತೇಕ ಸಿಬ್ಬಂದಿ ಸುರಕ್ಷತಾ ಸಮವಸ್ತ್ರವನ್ನು ಧರಿಸದೇ ಕಾರ್ಯನಿರ್ವಹಿಸುತ್ತಿದ್ದುದು ಕಂಡು ಬಂದಿತು. ಕೆಲವೆಡೆ ಕಸ ತೆಗೆದ ಕೆಲವೇ ಕ್ಷಣಗಳಲ್ಲಿ ಮತ್ತೆ ಕಸವನ್ನು ತಂದು ಹಾಕುತ್ತಿದ್ದ ದೃಶ್ಯ ಕಂಡು ಬಂದಿತು.

ವಿಲೇವಾರಿಗೆ ಜಾಗವೇ ಇಲ್ಲ: ಬೊಂಬು ಬಜಾರ್‌, ಎಂ.ಬಿ.ರಸ್ತೆ ಮತ್ತಿತರೆಡೆ ಸುತ್ತಮುತ್ತಲ ಪ್ರದೇಶದ ಜನರು ಕಸವನ್ನು ಪ್ರಮುಖ ರಸ್ತೆಗೆ ತಂದು ಎಸೆದು ಗುಡ್ಡಿ ಹಾಕುತ್ತಿದ್ದುದು ಕಂಡು ಬಂದಿತು. ಮಾರುಕಟ್ಟೆ ಪ್ರದೇಶದಲ್ಲಿ ಕಸ ತೆಗೆಯುವ ವಾಹನದ ಸಿಬ್ಬಂದಿ ಕಸವನ್ನು ಸಂಪೂರ್ಣವಾಗಿ ತೆಗೆಯಲು, ಘನತ್ಯಾಜ್ಯ ವಿಲೇವಾರಿ ಮಾಡಲು ಪ್ರತ್ಯೇಕ ಜಮೀನು ಇಲ್ಲ. ಹೀಗಾಗಿ ಸ್ವಚ್ಛತೆ ಮರೀಚಿಕೆಯಾಗಿದೆ ಎಂಬ ಕಾರಣ ನೀಡಿದರು.

ಕೆರೆ ಕುಂಟೆ ಹಾಕಿ ಬರುತ್ತಿದ್ದೇವೆ: ಕಸವನ್ನು ವಾಹನಗಳಲ್ಲಿ ತುಂಬಿ ನಗರಸಭೆ ಆವರಣದಲ್ಲಿ ನಿಲ್ಲಿಸಿ, ನಸುಕಿನಲ್ಲಿಯೇ ನಗರದ ಹೊರವಲಯದ ಬಾವಿ, ಕೆರೆ ಕುಂಟೆಗಳ ಬದಿಯಲ್ಲಿ ಹಾಕಿ ಬರುತ್ತಿದ್ದೇವೆ ಎಂದು ವಾಹನ ಚಾಲಕರು ವಿವರಿಸಿದರು. ಕೋಲಾರ ನಗರವನ್ನು ಬಯಲು ಶೌಚ ಮುಕ್ತವಾಗಿ ಘೋಷಣೆ ಮಾಡಿದ್ದರೂ ನಗರದ ಬಹುತೇಕ ಜಾಗಗಳಲ್ಲಿ ಜನರು ಬಯಲು ಶೌಚ, ಮೂತ್ರ ವಿಸರ್ಜನೆ ಮಾಡುತ್ತಿದ್ದುದು ಕಂಡು ಬಂದಿತು. ಸರ್ವೇಕ್ಷಣೆ ಸಂದರ್ಭದಲ್ಲಿ ಕೋಲಾರ ನಗರದ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ವಿಚಾರದಲ್ಲಿ ಜಾಗ ಇಲ್ಲದೇ ಇರುವುದು, ಸಿಬ್ಬಂದಿಯ ಕೊರತೆ ಇರುವ ಬಗ್ಗೆಯೂ ದೂರುಗಳು ಕೇಳಿ ಬಂದವು.

ಕೋಲಾರ ನಗರಸಭೆಯಲ್ಲಿ ಸತತ ಎರಡು ವರ್ಷಗಳಿಂದಲೂ ಸ್ವಚ್ಛ ಸರ್ವೇಕ್ಷಣೆ ನಡೆಯುತ್ತಿದೆ. ಈಗ ಮೂರನೇ ಬಾರಿ ನಡೆಸಲಾಗುತ್ತಿದೆ. ಆದರೆ, ಸ್ವಚ್ಛತೆಯ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಕಂಡು ಬರುತ್ತಿಲ್ಲ. ಇದಕ್ಕೆ ಕಾರಣಗಳೇನು ಎಂಬುದರ ಬಗ್ಗೆ ವರದಿ ತಯಾರಿಸಿ ಕೇಂದ್ರ ಸರ್ಕಾರಕ್ಕೆ ನೀಡಲಾಗುವುದು.
-ಎನ್‌.ಮಂಜುಳಾ, ಸರ್ವೇಕ್ಷಣಾ ತನಿಖಾಧಿಕಾರಿ

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.