Drinking water: ಜಾತ್ರೆಗೆ ಬಂದ ರಾಸುಗಳಿಗೆ ಕುಡಿಯಲು ನೀರಿಲ!


Team Udayavani, Mar 9, 2024, 5:00 PM IST

11

ಮುಳಬಾಗಿಲು: ಪ್ರತಿವರ್ಷ ನಡೆಯುವ ಆವಣಿ ಜಾತ್ರೆಗೆ ಹೆಚ್ಚಿನ ಜಾನುವಾರುಗಳು ಹರಿದು ಬರುತ್ತಿ ದ್ದರೂ, ಅವುಗಳಿಗೆ ಕುಡಿಯುವ ನೀರನ್ನು ಒದಗಿಸಲು ಗ್ರಾಪಂ ಅಧಿಕಾರಿಗಳು ಮೀನಮೇಷ ಎಣಿಸುತ್ತಿರುವುದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ಪುರಾಣ ಪ್ರಸಿದ್ಧ ಆವಣಿ ಶ್ರೀರಾಮಲಿಂಗೇಶ್ವರ ಕ್ಷೇತ್ರವು ಅತ್ಯಂತ ಪುರಾಣ ಪ್ರಸಿದ್ಧ ಸ್ಥಳವಾಗಿದ್ದು, ಗ್ರಾಮದಲ್ಲಿ ಶ್ರೀರಾಮಲಿಂಗೇಶ್ವರ ಸ್ವಾಮಿ ದೇವಾಲಯ, ಬೆಟ್ಟದ ಮೇಲೆ ಸೀತಾಮಾತೆ ದೇಗುಲ, ಬೆಟ್ಟದ ತಪ್ಪಲಿನಲ್ಲಿ ದ್ವಾದಶ ಲಿಂಗಗಳ ದೇಗುಲ, ಅಂತರಗಂಗೆ ಸೇರಿದಂತೆ ರಾಮಾಯಣಕ್ಕೆ ಪೂರಕವಾದ ಕುರುಹುಗಳನ್ನು ಕ್ಷೇತ್ರದಲ್ಲಿ ಕಾಣಬಹುದಾಗಿದೆ.

ಶುಲ್ಕ ಮುಕ್ತ ಜಾತ್ರೆ: ಕಂದಾಯ ಇಲಾಖೆಯಿಂದ ಜಾತ್ರೆಯಲ್ಲಿ ಎತ್ತು, ಗಾಡಿಗಳ ಶುಲ್ಕವನ್ನು ಆವಣಿ ಬಾಬು ಮತ್ತು ಅಂಗಡಿಗಳ ಶುಲ್ಕವನ್ನು ಕೆಜಿಎಂ ಬಳಗದ ಮುಖಂಡ ಡಾ.ನವೀನ್‌ ತಾವೇ ಭರಿಸುವ ಮೂಲಕ ಜಾತ್ರೆ ಯಲ್ಲಿರುವ ಶುಲ್ಕ ವಸೂಲಾತಿ ಮಾಡದಂತೆ ನಿರ್ಧರಿಸಿರುವುದರಿಂದ ಶುಲ್ಕ ಮುಕ್ತ ಜಾತ್ರೆಯಾಗಿ ಪರಿಣಮಿಸಿದೆ.

ಇಲ್ಲಿ 8-10 ಕಾಲ ಬಾರಿ ದನಗಳ ಜಾತ್ರೆಯು ಸೇರಲಿದ್ದು, ಜಾತ್ರೆಯಲ್ಲಿ ಹಾವೇರಿ, ಆಂಧ್ರ, ಮಂತ್ರಾಲಯ, ಕರ್ನೂಲ್‌, ಒಂಗೋಲ್‌, ಬೇರಿಕೆ, ತಮಿಳುನಾಡು ರಾಜ್ಯಗಳಿಂದ ರಾಸುಗಳನ್ನು ಮಾರಲು ರೈತರು ಗುರುವಾರ ಮತ್ತು ಶುಕ್ರವಾರವೇ ಎತ್ತುಗಳನ್ನು ಮಾರಲು ಎತ್ತಿ ನ ಗಾಡಿಗಳಲ್ಲಿ ಹುಲ್ಲನ್ನು ತುಂಬಿಕೊಂಡು ಬಂದು ಈಗಾಗಲೇ ಬಿಡಾರ ಹೂಡಿದ್ದಾರೆ. ಆದರೆ, ಇದುವರೆಗೂ ಮಾರಾಟಗಾರರು ಬರದೇ ಇರುವುದರಿಂದ ಹೆಚ್ಚಾಗಿ ವ್ಯಾಪಾರ ವಹಿವಾಟುಗಳು ಪ್ರಾರಂಭಗೊಂಡಿಲ್ಲ.

ಜಾನುವಾರಗಳ ಜಮಾವಣೆ: ಜಾನುವಾರುಗಳ ಜಾತ್ರೆ ಯಲ್ಲಿ ಕಾಲುಬಾಯಿ ಜ್ವರ ಕಡಿವಾಣಕ್ಕಾಗಿ ಪಶುವೈದ್ಯಕೀಯ ಇಲಾಖೆ ಸಹಾಯಕ ನಿರ್ದೇಶಕಿ ಅನುರಾಧ ಮಾರ್ಗದರ್ಶನದಂತೆ ವೈದ್ಯರು ಹಲವಾರು ಕ್ರಮಗಳನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ಕೃಷ್ಣಗಿರಿ, ಕೋಲಾರ ತಾಲೂಕು ಒಡಗೂರು, ಬೂದಿ ಕೋಟೆ, ಮಾಲೂರಿನ ಸೊಣ್ಣಹಳ್ಳಿ, ಹೊಸಕೋಟೆ ತಾಲೂಕು ತಾವರೆಕೆರೆ, ಹೆಬ್ಬಣಿ, ಸೇರಿದಂತೆ ರಾಜ್ಯ ಮತ್ತು ಅಕ್ಕ ಪಕ್ಕದ ರಾಜ್ಯಗಳಿಂದ ರೈತರು ಮೇವಿ ನೊಂದಿಗೆ ಸಾವಿರಾರು ಜೊತೆಗಳ ಎತ್ತುಗಳು ಜಾತ್ರೆಗೆ ಆಗಮಿಸಿದ್ದು, ಬಿಸಿಲಿನ ಬೇಗೆಯಿಂದ ಪಾರಾಗಲು ಪೆಂಡಾಲ್‌ ಮತ್ತು ಚೆಪ್ಪರ ಹಾಕಿಕೊಂಡಿದ್ದಾರೆ.

ಕುಡಿಯಲು ನೀರಿಲ್ಲ: ಗುರುವಾರ ಮುಂಜಾನೆಯೇ 16 ಜತೆ ಎತ್ತುಗಳೊಂದಿಗೆ ಆವಣಿ ಜಾತ್ರೆಗೆ ಬಂದಿದ್ದು, ಇಲ್ಲಿ ಎತ್ತುಗಳು ಕುಡಿಯಲು ನೀರಿನ ವ್ಯವಸ್ಥೆಯಿಲ್ಲ. ತಾಲೂಕು ಆಡಳಿತ ಶೀಘ್ರವಾಗಿ ಜಾನುವಾರುಗಳಿಗೆ ಮತ್ತು ಜನರಿಗೆ ಕುಡಿಯಲು ನೀರಿನ ವ್ಯವಸ್ಥೆ ಕಲ್ಪಿಸ ಬೇಕೆಂದು ತಮಿಳುನಾಡಿನ ಬೇರಿಕೆ ಮುನಿರೆಡ್ಡಿ ಮತ್ತು ತೊರಲಕ್ಕಿ ಅಶ್ವತ್ಥಪ್ಪ ಮನವಿ ಮಾಡಿದರು.

ಜಾತ್ರೆಯಲ್ಲಿ ಜಾನುವಾರುಗಳಿಗೆ ನೀರಿನ ಸೌಕರ್ಯ ಕಲ್ಪಿಸಲೆಂದು ಪೂರ್ವಭಾವಿ ಸಭೆಯಲ್ಲಿ ಒಪ್ಪಿಕೊಂಡಿರುವಂತೆ ನಾವು ಮುಂಜಾನೆಯೇ ಟ್ಯಾಂಕರ್‌ ತಂದು ಜಾತ್ರೆಯ ಬಸ್‌ ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ. ಪಿಡಿಒ ಬಂದು ಯಾವ ಕೊಳವೆ ಬಾವಿಯಿಂದ ನೀರನ್ನು ತುಂಬಿಸಲು ತಿಳಿಸಿದರೆ ಅಲ್ಲಿಂದ ತೊಟ್ಟಿಗಳಿಗೆ ಸರಬರಾಜು ಮಾಡುತ್ತೇವೆಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದರು.

ಆವಣಿ ಜಾತ್ರೆ ವಿಶೇಷ ಬಸ್‌ಗಳಿಗೆ ವೇಗದೂತ ದರ : ಫೆ.10ರಂದು ನಡೆಯಲಿರುವ ಜಿಲ್ಲೆಯಲ್ಲಿಯೇ ಅತೀ ದೊಡ್ಡದಾದ ಬ್ರಹ್ಮರಥೋತ್ಸವಕ್ಕೆ ಕರ್ನಾಟಕ ಹಾಗೂ ಹೊರ ರಾಜ್ಯಗಳಿಂದ ಲಕ್ಷಾಂತರ ಜನರು ಪಾಲ್ಗೊಳ್ಳುವುದರಿಂದ ಸುಗಮ ಸಂಚಾರಕ್ಕಾಗಿ ಮುಳಬಾಗಿಲು, ಕೋಲಾರ, ಕೆಜಿಎಫ್, ಶ್ರೀನಿವಾಸಪುರ, ಮಾಲೂರು ಡಿಪೋಗಳಿಂದ ಒಂದು ವಾರ ಕಾಲ ವಿಶೇಷವಾಗಿ ಪ್ರತಿ ನಿತ್ಯ ಎಲ್ಲಾ ಮಾರ್ಗಗಳಲ್ಲಿ 75 ಬಸ್‌ಗಳನ್ನು ಆವಣಿಗೆ ಜಾತ್ರೆಗೆ ಈಗಾಗಲೇ ಹಾಕಲಾಗಿದ್ದು, ರಥೋತ್ಸವದಂದು 150 ಬಸ್‌ಗಳು ಸೇರಿದಂತೆ ಎಷ್ಟೇ ಅಗತ್ಯವಾದರೂ ಅಷ್ಟು ಬಸ್‌ಗಳನ್ನು ಹಾಕಲಾಗುವುದು. ಜಾತ್ರೆ ವಿಶೇಷ ಬಸ್‌ಗಳಲ್ಲಿ ವೇಗದೂತ ಪ್ರಯಾಣ ದರವನ್ನು ನಿಗದಿ ಮಾಡಿದೆ ಎಂದು ಕೆಎಸ್‌ಆರ್‌ಟಿಸಿ ಇಲಾಖೆಯ ವಿಭಾಗೀಯ ಸಂಚಾರ ನಿಯಂತ್ರಣಾಧಿಕಾರಿಗಳು ತಿಳಿಸಿದರು.

ನಾಳೆ ಬ್ರಹ್ಮರಥೋತ್ಸವ : ಶಿವರಾತ್ರಿ ಹಬ್ಬದ ಮಾರನೇ ದಿವಸ ಫೆ.10ರಂದು ಸರ್ಕಾರದಿಂದ ಶ್ರೀರಾಮಲಿಂಗೇಶ್ವರಸ್ವಾಮಿ ಬ್ರಹ್ಮ ರಥೋತ್ಸವವು ಅತ್ಯಂತ ವಿಜೃಂಭಣೆಯಾಗಿ ನಡೆಯಲಿದ್ದು, ರಥೋತ್ಸವದ ವೇಳೆ ಬ್ರಹ್ಮರಥದ ಮುಂಭಾಗದಲ್ಲಿ ಮಾತೆ ಕೀಲುಹೊಳಲಿ ಗ್ರಾಮದೇವತೆ ಸಲ್ಲಾಪುರಮ್ಮ ದೇವರ ಮೆರವಣಿಗೆ ಸಾಗಲಿದೆ. ರಥೋತ್ಸವಕ್ಕೆ ಲಕ್ಷಾಂತರ ಜನರು ಪಾಲ್ಗೊಳ್ಳುವರು.

ಎಂ. ನಾಗರಾಜಯ್ಯ

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.