ದೇಶದಲ್ಲಿ ಆಹಾರ ಪದಾರ್ಥಗಳ ಕೊರತೆ ಇಲ್ಲ


Team Udayavani, Nov 30, 2021, 5:43 PM IST

ಆಹಾರದ ಕೊರತೆ ಇಲ್ಲ

ಕೋಲಾರ: ದೇಶದಲ್ಲಿ ಈಗ ಆಹಾರ ಪದಾರ್ಥಗಳ ಕೊರತೆಯಿಲ್ಲ. ಹಸಿವಿನಿಂದ ಯಾರೂ ಸಾಯುತ್ತಿಲ್ಲ. ಆದರೆ, ಅಪೌಷ್ಟಿಕತೆ ಕಾಡುತ್ತಿದ್ದು, ತೊಡೆದು ಹಾಕಲು ಎಲ್ಲರೂ ಕೈಜೋಡಿಸಬೇಕೆಂದು ಜಿಲ್ಲಾ ಧಿಕಾರಿ ಸೆಲ್ವಮಣಿ ಸಲಹೆ ನೀಡಿದರು. ತಾಲೂಕಿನ ಅಂಕತಟ್ಟಿ ಗ್ರಾಮದಲ್ಲಿ ಚಿಂತಾಮಣಿಯ ರೇಷ್ಮೆ ಕೃಷಿ ವಿದ್ಯಾಲಯ ಕಾಲೇಜಿನ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವದ ಅಂಗವಾಗಿ ಏರ್ಪಡಿಸಿದ್ದ ಕೃಷಿ ಮೇಳ ಉದ್ಘಾಟಿಸಿ ಮಾತನಾಡಿ, ಸ್ವಾತಂತ್ರ್ಯ ಬಂದಾಗ ದೇಶದಲ್ಲಿ ಆಹಾರ ಪದಾರ್ಥಗಳ ಕೊರತೆಯಿತ್ತು.

ಹಸಿವಿನಿಂದ ಜನರು ಸಾವಿಗೀಡಾಗು ತ್ತಿದ್ದರು. ಅಂದು ಕೇವಲ 30 ಲಕ್ಷ ಮಿಲಿಯನ್‌ ಟನ್‌ ಆಹಾರ ಉತ್ಪಾದನೆ ಆಗುತ್ತಿತ್ತು. ಹಸಿರುಕ್ರಾಂತಿಯಿಂದ ಈಗ 300 ಮಿಲಿಯನ್‌ಟನ್‌ ಆಹಾರ ಪದಾರ್ಥ ಬೆಳೆಯಲಾಗುತ್ತಿದೆ ಎಂದು ಹೇಳಿದರು.

ನಾನು ಸಹ ಕೃಷಿ ವಿದ್ಯಾರ್ಥಿ: ಕಾಲೇಜಿನಲ್ಲಿ ಪದವಿ ಗಳಿಸಿದ ನಂತರ ನೀವು ಸಂಶೋಧನೆ, ವಿಸ್ತರಣೆ, ಆವಿಷ್ಕಾರ ಅಥವಾ ಬೋಧನೆ ಮತ್ತು ಸರ್ಕಾರಿ ಕೆಲಸಕ್ಕೆ ಹೋಗಬಹುದು. ಆದರೆ, ಇದೊಂದು ಅದ್ಬುತವಾದ ಅನುಭವವಾಗಿದೆ. ನಾನು ಸಹ ಕೃಷಿ ವಿದ್ಯಾರ್ಥಿ ಯಾಗಿದ್ದೆ. ಆಗ ನಮ್ಮನ್ನು ತಾಲೂಕಿಗೆ ಒಬ್ಬರಂತೆ ಕೃಷಿ ಕಾರ್ಯಾನುಭವಕ್ಕೆ ನಿಯೋಜನೆ ಮಾಡಲಾಗುತ್ತಿತ್ತು ಎಂದು ತಮ್ಮ ವಿದ್ಯಾರ್ಥಿ ಜೀವನ್ನು ಮೆಲಕು ಹಾಕಿದರು.

3 ಸಾವಿರಕ್ಕೂ ಹೆಚ್ಚು ಮಕ್ಕಳಲ್ಲಿ ಅಪೌಷ್ಟಿಕತೆ: ಇಂದು ಭಾರತ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿ ಯಾಗಲು ರೈತರು, ಕೃಷಿ ವಿಜ್ಞಾನಿಗಳು ಕೃಷಿ ವಿಸ್ತರಣೆ ಮತ್ತು ಸಂಶೋಧನೆ ಕಾರಣವಾಗಿದೆ. ಆಹಾರ ಉತ್ಪಾದನೆ ಹೆಚ್ಚಿದ್ದರೂ ಎಲ್ಲರಿಗೂ ಪೌಷ್ಟಿಕಾಂಶ ಭರಿತ ಆಹಾರ ದೊರೆಯುತ್ತಿಲ್ಲ. ಕೋಲಾರ ಜಿಲ್ಲೆಯಲ್ಲಿ 3 ಸಾವಿರಕ್ಕೂ ಹೆಚ್ಚು ಅಪೌಷ್ಟಿಕ ಮಕ್ಕಳಿದ್ದಾರೆ. ನಿಯಂತ್ರಣ ಮಾಡುವುದು ದೊಡ್ಡ ಸವಾಲು ಆಗಿದೆ ಎಂದು ಹೇಳಿದರು.

ಕಾಳಪ್ಪನವರ ದೂರದೃಷ್ಟಿ ಕಾರಣ: ಬೆಂಗಳೂರು ವಿವಿಯಲ್ಲಿ ಪ್ರಾಧ್ಯಾಪಕರಾಗಿದ್ದ ಕಾಳಪ್ಪ, ವಿಶ್ವವಿದ್ಯಾ ಲಯದ ಪ್ರಯೋಗಾಲಯದಲ್ಲಿ ಅಭಿವೃದ್ಧಿಪಡಿಸ ಲಾಗುತ್ತಿದ್ದ ಹೊಸ ತಳಿಗಳನ್ನು ವಡಗೂರು, ಕಾಳಸ್ತಿಪುರ ಗ್ರಾಮಗಳಲ್ಲಿ ಪರಿಚಯಿಸುತ್ತಿದ್ದರು. ಇಂದು ವಡಗೂರು ಗ್ರಾಮ ಆರ್ಥಿಕವಾಗಿ ಸದೃಢವಾಗಿರಲು ಕಾಳಪ್ಪನವರ ದೂರದೃಷ್ಟಿ ಕಾರಣವಾಗಿದೆ ಎಂದು ಸ್ಮರಿಸಿದರು.

ಕಾಲೇಜಿನಲ್ಲಿ ಕಲಿತ ತಾಂತ್ರಿಕತೆ ಹಾಗೂ ವಿವಿಧ ವಿಷಯಗಳ ಬಗ್ಗೆ ರೈತರೊಂದಿಗೆ ಹಂಚಿಕೊಂಡರು. ಮೂರು ತಿಂಗಳ ಕೃಷಿ ಕಾರ್ಯಾನುಭವದ ನಂತರ ಕೊನೆ ಭಾಗವಾಗಿ ಕೋಲಾರ ತಾಲೂಕಿನ ಅಂಕತಟ್ಟಿ ಗ್ರಾಮದಲ್ಲಿ ಕೃಷಿ ಮೇಳವನ್ನು ವಿದ್ಯಾರ್ಥಿಗಳು ಅನಾವರಣ ಮಾಡಿದರು. ವಿವಿಧ ತಳಿಗಳು ಅವುಗಳಿಗೆ ತಗಲುವ ರೋಗಗಳು ಹಾಗೂ ಕೃಷಿ ತಾಂತ್ರಿಕತೆ ಹಾಗೂ ಇತರ ವಿಷಯಗಳ ಬಗ್ಗೆ ಕೃಷಿ ಮೇಳದಲ್ಲಿ ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಅನಾವರಣಗೊಳಿಸಿದರು.

ರೇಷ್ಮೆ ಕೃಷಿ ವಿಶ್ವವಿದ್ಯಾಲಯದ ಡೀನ್‌ ಡಾ.ವೆಂಕಟರಮಣ, ಉದ್ಯಮಿ ಉದಯರವಿ, ಸುಗಟೂರು ಗ್ರಾಪಂ ಅಧ್ಯಕ್ಷೆ ವೆಂಕಟಲಕ್ಷ್ಮಮ್ಮ, ಸದಸ್ಯ ಭೂಪತಿಗೌಡ, ಮಾಜಿ ಸದಸ್ಯ ರಮೇಶ್‌ಗೌಡ, ಶ್ರೀರಾಮ್‌ಗೌಡ, ಪುರುಷೋತ್ತಮ್‌, ವಿವಿ ಪ್ರಾಧ್ಯಾಪಕರಾದ ಡಾ.ಶೀನಿವಾಸ್‌ರೆಡ್ಡಿ, ಧವಣಕುಮಾರ್‌, ದಾûಾಯಿಣಿ, ನಂದಕುಮಾರ್‌, ಸ್ಥಳೀಯ ಮುಖಂಡ ಭಾಸ್ಕರ್‌ ಭಾಗವಹಿಸಿದ್ದರು.

“ನಿಸರ್ಗದಲ್ಲಿ ರೈತರಿಗೆ ಉಪಯುಕ್ತ ವಾದ ಹಲವು ಜೀವಿಗಳಿವೆ. ಕೀಟ ನಾಶಕ ಅತಿಯಾಗಿ ಬಳಕೆ ಮಾಡುವುದ ರಿಂದ ಅದು ಭೂಮಿಯ ಫಲವತ್ತತೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಈಗ ಹಸಿರು ರಾಸಾಯನಿಕ ಲಭ್ಯವಿದೆ. ಅದನ್ನು ಬಳಕೆ ಮಾಡುವುದರಿಂದ ಬೆಳೆಗೆ ಹಾನಿ ಆಗುವ ಕೀಟಗಳನ್ನು ಕೊಲ್ಲುತ್ತದೆ. ರೈತರು ಉತ್ಪಾದನೆ ಹೆಚ್ಚಿಸುವ ಮೂಲಕ ಮಾರುಕಟ್ಟೆ ಮೂಲ ಹುಡುಕಿಕೊಳ್ಳಬೇಕು.” – ಡಾ.ಬಸವೇಗೌಡ, ಕುಲಸಚಿವ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯ.

“ನಾವು ನಾಗನಾಳ ಗ್ರಾಮಕ್ಕೆ ಬಂದಾಗ ಮೊದಲು ಯಾರೂ ನಮ್ಮೊಂದಿಗೆ ಸ್ಪಂ ದಿಸಲಿಲ್ಲ. ನಂತರ ನಮ್ಮನ್ನು ಮನೆ ಮಕ್ಕಳಂತೆ ನೋಡಿಕೊಂಡರು. ನಾವು ಅದ್ಭತ ಅನುಭವ ಪಡೆದುಕೊಂಡೆವು.” – ಜ್ಯೋತಿ, ಕೃಷಿ ವಿದ್ಯಾರ್ಥಿನಿ.

“ವಿಶ್ವವಿದ್ಯಾಲಯದ ನಾಲ್ಕು ಗೋಡೆ ಗಳ ಮಧ್ಯೆ ಕೃಷಿ ಸಂಸ್ಕೃತಿಯನ್ನು ಕಲಿಸಲಾಗಿದೆ. ಆದರೆ, ನಾವು ಗ್ರಾಮಗಳಲ್ಲಿ ವಿದ್ಯಾರ್ಥಿಗಳಿಗೆ ನಡವಳಿಕೆಯನ್ನು ಕಲಿಸಿ ದ್ದೇವೆ. ಮೂರು ತಿಂಗಳ ಕಾಲ ವಿದ್ಯಾರ್ಥಿ ಗಳು ನಮ್ಮ ಮನೆ ಮಕ್ಕಳಂತೆ ಗ್ರಾಮದಲ್ಲಿ ಹೊಂದಿಕೊಂಡು ಕೃಷಿ ಕಾರ್ಯಾನುಭವ ಗಳಿಸಿದ್ದಾರೆ. ಅವರ ಒಡನಾಟ ನಮಗೆ ಸಂತಸ ತಂದಿದೆ.” – ನಾಗನಾಳ ಮಂಜುನಾಥ್‌, ಪ್ರಗತಿಪರ ರೈತ.

“ರೈತರು ಬಹುತೇಕ ಹಣವನ್ನು ಕೀಟ ನಾಶಕಕ್ಕೆ ವೆಚ್ಚ ಮಾಡುತ್ತಾರೆ. ಆದರೆ, ಮಾರುಕಟ್ಟೆಗೆ ಹೋಗಿ ರೈತರು ಬರಿಗೈಯಲ್ಲಿ ಹಿಂತಿರುಗುತ್ತಾರೆ. ಸರ್ಕಾರವೇ ರೈತರು ಬೆಳೆದ ಬೆಳೆ ಖರೀದಿ ಮಾಡಬೇಕು.” – ಡಿ.ಎಲ್‌.ನಾಗರಾಜ್‌, ನಿರ್ದೇಶಕ, ಕರ್ನಾಟಕ ರಾಜ್ಯ ಬೀಜ ನಿಗಮ.

ಟಾಪ್ ನ್ಯೂಸ್

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.