ಕೋಚಿಮುಲ್ಗೆ ಕೆ.ಸಿ.ವ್ಯಾಲಿ ನೀರು ಬಳಸಲು ಚಿಂತನೆ


Team Udayavani, Aug 28, 2019, 1:20 PM IST

kolar-tdy-2

ಕೋಲಾರ ತಾಲೂಕಿನ ಬೀಚಗೊಂಡನಹಳ್ಳಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ 2018-19ನೇ ಸಾಲಿನ ಸರ್ವ ಸದಸ್ಯರ ಸಭೆ, ನೂತನ ಕಟ್ಟಡಕ್ಕೆ ಕೋಚಿಮುಲ್ ನಿರ್ದೇಶಕ ಡಿ.ವಿ.ಹರೀಶ್‌ ಚಾಲನೆ ನೀಡಿದರು.

ಕೋಲಾರ: ಕೋಲಾರ, ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ನೀರಿಗಾಗಿ ವರ್ಷಕ್ಕೆ 1.75 ಕೋಟಿ ರೂ. ಖರ್ಚು ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಕೆ.ಸಿ. ವ್ಯಾಲಿ ನೀರನ್ನು ಸಂಸ್ಕರಿಸಿ ಬಳಸಲು ಚಿಂತನೆ ನಡೆಸಿದೆ ಎಂದು ಒಕ್ಕೂಟದ ನಿರ್ದೇಶಕ ಡಿ.ವಿ.ಹರೀಶ್‌ ತಿಳಿಸಿದರು.

ತಾಲೂಕಿನ ಬೀಚಗೊಂಡನಹಳ್ಳಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ 2018-19ನೇ ಸಾಲಿನ ಸರ್ವ ಸದಸ್ಯರ ಸಭೆಗೆ ಚಾಲನೆ ನೀಡಿ, ‘ಕ್ಷೀರಭಾಗ್ಯ’ ನೂತನ ಕಟ್ಟಡವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ರೈತರ ಹಿತ ಕಾಯುವಲ್ಲಿ ಸದಾ ನಿರತವಾಗಿದ್ದು, ಹಾಲು ಉತ್ಪಾದಕರು ಹಾಗೂ ಅವರ ಮಕ್ಕಳ ಶ್ರೇಯೋಭಿ ವೃದ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇದರ ಸದುಪಯೋಗ ಪಡೆದುಕೊಳ್ಳಲು ಸಲಹೆ ನೀಡಿದರು. 13 ಲಕ್ಷ ರೂ. ವೆಚ್ಚದಲ್ಲಿ ಬಿಎಂಸಿ(ಬಲ್ಕ್ ಮಿಲ್ಕ್ ಕೂಲರ್‌) ಸ್ಥಾಪಿಸಿದ್ದು, ಸೊಸೈಟಿಗೆ ಗುಣಮಟ್ಟದ ಹಾಲನ್ನು ಪೂರೈಸಿ ಲಾಭ ಗಳಿಸಿ ಎಂದು ಕಿವಿಮಾತು ಹೇಳಿದರು.

ಆತ್ಮಹತ್ಯೆ ಮಾಡಿಕೊಳ್ಳುವ ಚಿಂತನೆ ಇಲ್ಲ: ರಾಜ್ಯದಲ್ಲಿ ಬರದಿಂದ ರೈತರು ಕಂಗೆಟ್ಟು ಆತ್ಮಹತ್ಯೆಯಂತಹ ಸುದ್ದಿಗಳು ಬರುತ್ತಿವೆ. ಆದರೆ, ಜಿಲ್ಲೆಯ ಜನತೆ ಅಂತಹ ಕೃತ್ಯಗಳತ್ತ ಆಲೋಚನೆ ಯನ್ನೂ ಮಾಡುವುದಿಲ್ಲ. ನಮ್ಮ ರೈತರಿಗೆ ಹೈನೋದ್ಯಮ ಜೀವನಾಡಿಯಾಗಿದೆ. ಜಿಲ್ಲೆಯಲ್ಲಿ ಕೃಷಿಗೆ ನೀರಿನ ಕೊರತೆ ಕಾಡುತ್ತಿದೆ, ಈಗ ಪ್ರತಿಕುಟುಂಬವೂ ಹೈನೋದ್ಯಮದತ್ತ ನೋಡುತ್ತಿದೆ ಎಂದು ಹೇಳಿದರು.

ಹಲವು ಯೋಜನೆ ಜಾರಿ: ಕ್ಷೀರಸಿರಿ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡುವುದು, ಹೈನುಗಾರರ ಮಕ್ಕಳಿಗೆ ವಸತಿ ನಿಲಯ, ರಾಸುಗಳಿಗೆ, ಉತ್ಪಾದಕರಿಗೆ ವಿಮಾ ಯೋಜನೆ ಸೌಲಭ್ಯ, ಜಿಲ್ಲಾಧಿಕಾರಿ ಆಗಿದ್ದ ದಿ.ಡಿ.ಕೆ.ರವಿ ಮಂಜೂರು ಮಾಡಿರುವ ಭೂಮಿಯಲ್ಲಿ ಕೊಳವೆ ಬಾವಿ ಕೊರೆಯಿಸಿ ಒಕ್ಕೂಟಕ್ಕೆ ನೀರು ಪೂರೈಕೆ, ಮುಂತಾದ ಕ್ರಿಯಾತ್ಮಕ ಯೋಜನೆ ಜಾರಿಗೆ ತರಲಾಗುವುದು ಎಂದರು.

ಸಂಸ್ಕರಣೆ ಮಾಡಿ ಬಳಸಿ: ಒಕ್ಕೂಟದಲ್ಲಿ ನೀರಿಗಾಗಿಯೇ ಪ್ರತಿ ವರ್ಷ 1.75 ಕೋಟಿ ರೂ. ಖರ್ಚು ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಕೆ.ಸಿ. ವ್ಯಾಲಿ ನೀರು ಬಂದರೆ ಅದನ್ನು ಸಂಸ್ಕರಣೆ ಮಾಡಿ ಬಳಸಿಕೊಳ್ಳುವುದಾಗಿ ತಿಳಿಸಿದರು.

ಕೋಚಿಮುಲ್ ಉಪವ್ಯವಸ್ಥಾಪಕ ಎ.ಸಿ.ಶ್ರೀನಿವಾಸಗೌಡ, ವಿಸ್ತರಣಾಧಿಕಾರಿಗಳಾದ ಶ್ರೀನಿವಾಸ್‌, ಗ್ರಾಪಂ ಸದಸ್ಯ ಚನ್ನಕೇಶವ, ಲಕ್ಷ್ಮಮ್ಮ, ನಿರ್ದೇಶಕರಾದ ಚಿದಾನಂದ, ಚೆನ್ನಬಸವಯ್ಯ, ಬಿ.ಸಿ.ಮುರಳಿ, ನಾಗೇಶ್‌, ಎಸ್‌.ಆರ್‌.ಜಗದೀಶ್‌, ಚಂದ್ರಪ್ಪ, ಬೈಯ್ಯಮ್ಮ, ರಾಮಪ್ಪ, ನಾಗರಾಜಪ್ಪ, ರಾಜಪ್ಪ, ಸಿಇಒ ಪುರುಷೋತ್ತಮ್‌, ರವಿಚಂದ್ರ, ನಾಗೇಗೌಡ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.