ಮತದಾನಕ್ಕೆ ಅಡ್ಡಿ ಮಾಡಿದರೆ ಕಠಿಣ ಕ್ರಮ
Team Udayavani, Feb 6, 2019, 7:28 AM IST
ಶ್ರೀನಿವಾಸಪುರ: ಮತ ಚಲಾವಣೆ ಪ್ರತಿಯೊಬ್ಬರ ಹಕ್ಕಾಗಿದ್ದು ಅದನ್ನು ವಿರೋಧಿಸುವ ಸಂಘ ವಿದ್ರೋಹಿಗಳ ವಿರುದ್ಧ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದಿಂದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಹಶೀಲ್ದಾರ್ ಬಿ.ಎಸ್.ರಾಜೀವ್ ಹೇಳಿದರು.
ಶ್ರೀನಿವಾಸಪುರ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸೆಕ್ಟರ್ ಮತ್ತು ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ತಾಲೂಕಿನ ಯಾವುದೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಹಿಂದೆ ಅಹಿತಕರ ಘಟನೆ ನಡೆದಿದ್ದರೆ ಘಟನೆಗೆ ಸಂಬಂಧಿಸಿದವರ ವಿರುದ್ಧ ಮುಂಜಾಗ್ರತಾ ಕ್ರಮವಾಗಿ ನಿಗಾವಹಿಸಲಾಗುವುದು ಎಂದರು.
ದೌರ್ಜನ್ಯ ನಡೆಸಿದರೆ ಕ್ರಮ: ಮಹಿಳೆಯರ ವೋಟಿಂಗ್ಗೆ ಅಡಚಣೆ, ಧಮಕಿ ಹಾಕುವುದು, ಮತ ಚಲಾವಣೆಗೆ ಅಡ್ಡಿ ಪಡಿಸುವುದು, ಅಹಿತಕರ ಘಟನೆಗಳಿಗೆ ಪ್ರಚೋದನೆ, ನಮ್ಮ ಪಕ್ಷಕ್ಕೇ ಮತ ಹಾಕಬೇಕೆಂದು ದೌರ್ಜನ್ಯ ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
18ರ ಮೇಲ್ಪಟ್ಟ ಎಲ್ಲರಿಗೂ ಮತ ಚಲಾವಣೆಗೆ ಅವಕಾಶ ಮಾಡಿಕೊಡುವುದು ಮತ್ತು ಯುವ ಮತದಾರರಿಗೆ ಮñದಾನದ ವಿಶೇಷತೆ ತಿಳಿಸುವುದರೊಂದಿಗೆ ಶೇ.100 ಮತದಾನ ಮಾಡಿಸುವುದು ಮುಖ್ಯ. ಯಾವುದೇ ಘಟನೆಗಳಿಗೆ ತಾವು ನೀಡದೆ ಲೋಕಸಭೆ ಚುನಾವಣೆಯನ್ನು ಶಾಂತ ರೀತಿಯಲ್ಲಿ ನಡೆಯಲು ಎಲ್ಲರೂ ಸಹಕರಿಸಬೇಕೆಂದು ಹೇಳಿದರು.
ರಾಯಲ್ಪಾಡು ಸಬ್ಇನ್ಸ್ಪೆಕ್ಟರ್ ನಟ ರಾಜ್, ಶ್ರೀನಿವಾಸಪುರ ಸಬ್ಇನ್ಸ್ ಪೆಕ್ಟರ್ ರಾಮಚಂದ್ರಪ್ಪ, ಸೆಕ್ಟರ್ ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ