ಕಠಿಣ ಲಾಕ್ ಡೌನ್ಗೆ ಕೋಲಾರ ಜಿಲ್ಲೆ ಸ್ತಬ್ಧ
Team Udayavani, May 23, 2021, 7:00 PM IST
ಕೋಲಾರ: ಕೊರೊನಾ ಸೋಂಕು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಠಿಣ ಲಾಕ್ಡೌನ್ಗೆ ಸೂಚನೆ ನೀಡಿದ್ದು, ವೈದ್ಯಕೀಯ ಸೇವೆ ಹೊರತುಪಡಿಸಿ ಮೊದಲ ದಿನ ಇಡೀ ಜಿಲ್ಲೆ ಸಂಪೂರ್ಣ ಸ್ತಬ್ಧವಾಗಿತ್ತು ಮತ್ತು ಅನಗತ್ಯವಾಗಿ ರಸ್ತೆಗಿಳಿದ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದರು.
ಭಟ್ರಹಳ್ಳಿ ಗೇಟ್ನಲ್ಲಿ ವ್ಯಕ್ತಿಯೊಬ್ಬ ಪೇದೆಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಶುಕ್ರವಾರ ಸಂಜೆಯಿಂದಲೇ ಲಾಕ್ಡೌನ್ ಕಠಿಣಗೊಳಿಸಿರುವ ಪೊಲೀಸರು ರಸ್ತೆಗಿಳಿದ ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದರಲ್ಲದೇ, ಕೆಲವುಕಡೆಗಳಲ್ಲಿ ಮಾತಿನ ಚಕಮಕಿಗೂ ಕಾರಣವಾಯಿತು.
ಹಾಲು, ವೈದ್ಯಕೀಯಸೇವೆ ಹೊರತುಪಡಿಸಿ ಉಳಿದೆಲ್ಲಾವಾಣಿಜ್ಯ ವಹಿವಾಟುಗಳಿಗೆ ನಿರ್ಬಂಧಹೇರಲಾಗಿತ್ತು. ನಗರಾದ್ಯಂತ ಎಲ್ಲೂಅಂಗಡಿಗಳು ತೆರೆಯಲಿಲ್ಲ.
ಬುದ್ದಿವಾದ ಹೇಳಿದ್ದಕ್ಕೆ ಪೇದೆ ಮೇಲೆ ಹಲ್ಲೆ: ತಾಲೂಕಿನ ಬೇತಮಂಗಲರಸ್ತೆಯ ಭಟ್ರಹಳ್ಳಿ ಗೇಟ್ನಲ್ಲಿ ಲಾಕ್ಡೌನ್ ಸಂದರ್ಭದಲ್ಲಿ ಸುಖಾಸುಮ್ಮನೇ ಓಡಾಡುತ್ತಿದ್ದ ರವಿ ಎಂಬ ಯುವಕನಿಗೆ ಪೊಲೀಸ್ ಪೇದೆ ನಾಗರಾಜ್ ಬುದ್ದಿವಾದ ಹೇಳಿದ್ದಕ್ಕೆ ಪೇದೆಯ ಲಾಠಿಯನ್ನೇ ಕಿತ್ತುಕೊಂಡು ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಪೇದೆ ನಾಗರಾಜ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸಾcರ್ಜ್ ಆಗಿದ್ದು, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಯುವಕ ರವಿ ಎಂಬುವವರ ಮೇಲೆ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ.
ರಸ್ತೆಗೆ ಬ್ಯಾರಿಕೇಡ್, ವಾಹನ ತಪಾಸಣೆ: ನಗರದ ಎಂ.ಬಿ.ರಸ್ತೆ, ಎಂ.ಜಿ. ರಸ್ತೆ, ಮೆಕ್ಕೆ ವೃತ್ತದಿಂದ ಬಂಗಾರಪೇಟೆ ವೃತ್ತದ ಕಡೆಗೆ ಹೋಗುವ ಮುಖ್ಯರಸ್ತೆ ಸೇರಿದಂತೆಎಲ್ಲಾ ರಸ್ತೆಗಳನ್ನು ಬ್ಯಾರಿಕೇಡ್ ಹಾಕಿಬಂದ್ ಮಾಡಿದ ಪೊಲೀಸರು ರಸ್ತೆಗಿಳಿದಪ್ರತಿ ವಾಹನದ ತಪಾಸಣೆ ನಡೆಸಿದರು.
ತುರ್ತು ಸೇವೆಗೆ ಹೋಗುವ ವಾಹನಗಳನ್ನು ಹೊರತುಪಡಿಸಿ ಅನಗತ್ಯವಾಗಿರಸ್ತೆಗಿಳಿದ ವಾಹನಗಳನ್ನು ಜಪ್ತಿ ಮಾಡಿ ಟೆಂಪೋಗೆ ತುಂಬಿ ನಗರದ ಕವಾಯತುಮೈದಾನದಲ್ಲಿ ಹಾಕಲಾಯಿತು.ಮದುವೆ ಮುಗಿಸಿ ಬಂದ ಟೆಂಪೋಟ್ರಾವೆಲ್ಸ್ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡ ಘಟನೆ ನಗರದ ರಾಷ್ಟ್ರೀಯಹೆದ್ದಾರಿಯಲ್ಲಿ ಕಂಡು ಬಂತು.ಮದುವೆಗೆ ಮುಗಿಸಿ ವಧುವರನೊಂದಿಗೆ ಬರುತ್ತಿರುವುದಾಗಿ ದಾಖಲೆಗಳೊಂದಿಗೆ ಮಾಹಿತಿ ನೀಡಿದ ನಂತರ ವಾಹನ ಬಿಡಲಾಯಿತು.
ಮೆಡಿಕಲ್ ಸ್ಟೋರ್ ಮತ್ತು ಹಾಲಿನಬೂತ್ ಹೊರತುಪಡಿಸಿ ಎಲ್ಲಾಅಂಗಡಿಗಳು ಮುಚ್ಚಿ ಇಡೀ ನಗರಸ್ತಬ್ಧವಾಗಿದ್ದು, ಮೇ25ರ ಮಂಗಳವಾರಬೆಳಗ್ಗೆ 6 ಗಂಟೆಯವರೆಗೂ ಇದು ಮುಂದುವರಿಯಲಿದೆ ಎಂದು ಜಿಲ್ಲಾರಕ್ಷಣಾಧಿಕಾರಿ ಕಾರ್ತಿಕ್ರೆಡ್ಡಿ ತಿಳಿಸಿದರು.ನಗರದ ಟೇಕಲ್ ರಸ್ತೆಯಲ್ಲಿ ವೃತ್ತನಿರೀಕ್ಷಕ ರಂಗಶಾಮಯ್ಯ ನೇತೃತ್ವದಲ್ಲಿಸಂಚಾರ ಪಿಎಸ್ಐ ನಾರಾಯಣಸ್ವಾಮಿಮತ್ತು ಸಿಬ್ಬಂದಿ ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ಮಾಡಿಸಿದರು. ಅಗತ್ಯ ಸೇವೆಗಳನ್ನುಹೊರತು ಪಡಿಸಿ ಉಳಿದೆಲ್ಲ ವಾಹನವಶಕ್ಕೆ ಪಡೆಯಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ