ದಶಕದ ಸ್ಮಶಾನ ರಸ್ತೆಗೆ ಕೊನೆಗೂ ಕಾಯಕಲ್ಪ

ಶಾಸಕಿ ಎಂ.ರೂಪಕಲಾ ಸ್ಥಳದಲ್ಲೇ ಇದ್ದು, ಮಳೆಯಲ್ಲೇ ಕಾಂಪೌಂಡ್‌ ಹಾಕಿಸಿದರು.

Team Udayavani, May 7, 2022, 6:16 PM IST

ದಶಕದ ಸ್ಮಶಾನ ರಸ್ತೆಗೆ ಕೊನೆಗೂ ಕಾಯಕಲ್ಪ

ಬೇತಮಂಗಲ: ಸುಮಾರು ದಶಕಗಳಿಂದ ಸ್ಮಶಾನ ಹಾಗೂ ರೈತರ ಹೊಲಗಳಿಗೆ ದಾರಿಯಿಲ್ಲದೆ ಪರಿತಪಿಸುತ್ತಿದ್ದ ಗ್ರಾಮಸ್ಥರಿಗೆ ಶಾಸಕಿ ಎಂ.ರೂಪಕಲಾ ಮಳೆಯನ್ನೂ ಲೆಕ್ಕಿಸದೆ ಅಧಿಕಾರಿಗಳ ಜತೆ ಸರ್ವೇ ನಡೆಸಿ, ರಸ್ತೆ ಗುರುತಿಸಿ, ಕಾಂಪೌಂಡ್‌ ಹಾಕಿಸುವ ಮೂಲಕ ಗ್ರಾಮಸ್ಥರ ಬಹು ವರ್ಷಗಳ ಕನಸು ಈಡೇರಿಸಿದರು.

ಪಟ್ಟಣದ ಸಮೀಪದ ಸುಂದರಪಾಳ್ಯ ಗ್ರಾಪಂ ವ್ಯಾಪ್ತಿ ಸುವರ್ಣಹಳ್ಳಿ ಗ್ರಾಮದ ಸ್ಮಶಾನಕ್ಕೆ ಸಮರ್ಪಕ ರಸ್ತೆಯಿಲ್ಲದೆ ಖಾಸಗಿ ವ್ಯಕ್ತಿಗಳ ಜಮೀನಿನ ಮೂಲಕ ಹೋಗಿ ಶವ ಸಂಸ್ಕಾರ ನಡೆಸಲಾಗುತ್ತಿತ್ತು. ಆದರೆ ಖಾಸಗಿ ರೈತ ತನ್ನ ಹೊಲಕ್ಕೆ ಕಾಂಪೌಡ್‌ ನಿರ್ಮಿಸಿಕೊಂಡ ಹಿನ್ನೆಲೆ 11 ವರ್ಷಗಳಿಂದ ಗ್ರಾಮಸ್ಥರು ಪರದಾಟ ನಡೆಸುತ್ತಿದ್ದರು.

ಈ ಬಗ್ಗೆ ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದ ತಕ್ಷಣ ಅಜು-ಬಾಜಿನ ರೈತರ ಮನವೋಲಿಸಿ, ಕಾನೂನಿನ ಅಡಿಯಲ್ಲಿಯೇ 10 ಅಡಿಗಳ ರಸ್ತೆ ನಿರ್ಮಾಣಕ್ಕೆ ಸರ್ವೇ ಮಾಡಿ ರೈತರಿಗೆ, ಗ್ರಾಮಸ್ಥರಿಗೆ ಅನವು ಮಾಡಿ ಕೊಡಲು ತಹಶೀಲ್ದಾರ್‌ಗೆ ಮನವಿ ಮಾಡಿದ್ದರು. ತಹಶೀಲ್ದಾರ್‌ ಸುಜಾತ ತಂಡ ಸರ್ವೆ ಮಾಡಲು ಹೊರ ಟಾಗ ಬಿರುಗಾಳಿ ಸಹಿತ ಮಳೆ ಆರಂಭವಾಯಿತು.

ಶಾಸಕಿ ಎಂ.ರೂಪಕಲಾ ಸ್ಥಳದಲ್ಲೇ ಇದ್ದು, ಮಳೆಯಲ್ಲೇ ಕಾಂಪೌಂಡ್‌ ಹಾಕಿಸಿದರು. ರೈತರಿಗೆ ಕೃತಜ್ಞತೆ ಅರ್ಪಿಸಿದರು. ರಸ್ತೆಯನ್ನು ಗ್ರಾಪಂ ಅಧ್ಯಕ್ಷ ರಾಂ ಬಾಬು ಮತ್ತು ಪಿಡಿಒ ಏಜಾಜ್‌ ಪೂರ್ಣಗೊಳಿಸಲು ಸೂಚಿಸಿದರು. ಕಂದಾಯ ಅಧಿಕಾರಿ ನಾರಾಯಣಸ್ವಾಮಿ, ಗ್ರಾಮ ಲೆಕ್ಕಿಗ ಪ್ರೇಮ, ಸರ್ವೇ ಅಧಿಕಾರಿ ಮೌಲಾಖಾನ್‌, ಸಹಾಯಕ ಶಿವರಾಜ್‌, ಗ್ರಾಪಂ ಅಧ್ಯಕ್ಷ ರಾಂ ಬಾಬು, ಉಪಾಧ್ಯಕ್ಷ ರತ್ನಮ್ಮ ಶ್ರೀನಿವಾಸ್‌, ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ, ತಾಪಂ ಮಾಜಿ ಸದಸ್ಯ ಜಯರಾಮ ರೆಡ್ಡಿ, ವೆಂಗಸಂದ್ರ ಅಧ್ಯಕ್ಷ ಶಂಕರ್‌, ಪಿಡಿಒ ಏಜಾಜ್‌, ಕ್ಯಾಸಂಬಳ್ಳಿ ಸೊಸೈಟಿ ಅಧ್ಯಕ್ಷ ವಿಜಯರಾಘವ ರೆಡ್ಡಿ, ಮುಖಂಡರು ಹಾಜರಿದ್ದರು.

ಸಮರ್ಪಕ ರಸ್ತೆಯಿಲ್ಲದೆ, ಶವ ಸಂಸ್ಕಾರ ದಿನಗಳಲ್ಲಿ ಠಾಣೆ ಮೆಟ್ಟಲು ಅತ್ತುವಂತ ಪರಿಸ್ಥಿತಿಯಲ್ಲಿದ್ದ ಸ್ಮಶಾನ ರಸ್ತೆಯ ಸಮಸ್ಯೆಯನ್ನು 20 ವರ್ಷಗಳ ಬಳಿಕ ಇತ್ಯರ್ಥ ಪಡಿಸಿದ್ದೇನೆ. ಸ್ಮಶಾನಕ್ಕೆ ವಿಶೇಷ ಅನುದಾನ ಬಿಡುಗಡೆಗೊಳಿಸಲಾಗುವುದು.
● ಎಂ.ರೂಪಕಲಾ, ಶಾಸಕಿ

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.