ದೆಹಲಿ ರೈಲು ಸಂಚಾರಕೆ ನಾಳೆ ಚಾಲನೆ


Team Udayavani, Mar 4, 2019, 9:36 AM IST

rail.jpg

ಚಿಕ್ಕಬಳ್ಳಾಪುರ: ಜಿಲ್ಲೆಯ ರೈಲ್ವೆ ಪ್ರಯಾಣಿಕರೇ ನಿಮಗೊಂದು ಸಂತಸದ ಸುದ್ದಿ.. ನೀವು ಇನ್ಮೆàಲೆ ಚಿಕ್ಕಬಳ್ಳಾಪುರ ರೈಲ್ವೆ ನಿಲ್ದಾಣದಲ್ಲಿ ರೈಲು ಹತ್ತಿ ದೆಹಲಿ ಪ್ರವಾಸ ಮಾಡಬಹುದು. ತಿರುಪತಿ ತಿಮ್ಮಪ್ಪನ ದರ್ಶನಕ್ಕೂ ಹೋಗಬಹುದು. ಅಷ್ಟೇ ಅಲ್ಲ ಉತ್ತರ ಭಾರತದ ಯಾವುದೇ ರಾಜ್ಯಕ್ಕೂ ನೀವು ಪ್ರವಾಸ ಹೊರಡಬಹುದು.

ಹೌದು, ಕಳೆದ ಫೆ.16 ರಂದು ಜಿಲ್ಲೆಗೆ ಯಶವಂತಪುರದಿಂದ ಚಿಕ್ಕಬಳ್ಳಾಪುರಕ್ಕೆ ಪ್ಯಾಸೆಂಜರ್‌ ರೈಲು ವಿಸ್ತರಣೆಗೊಂಡ ಬೆನ್ನಲ್ಲೇ ನೈರುತ್ಯ ರೈಲ್ವೆ ಇಲಾಖೆ ಜಿಲ್ಲೆಯ ರೈಲ್ವೆ ಪ್ರಯಾಣಿಕರ ಬಹುದಿನಗಳ ಕನಸು ನನಸಾಗಿಸಲು ಮುಂದಾಗಿದ್ದು, ಚಿಕ್ಕಬಳ್ಳಾಪುರದ ಮೂಲಕ ದೆಹಲಿಗೆ ಸಂಚರಿಸುವ 06521 ಸಂಖ್ಯೆಯ ಯಶವಂತಪುರ- ನಿಜಾಮುದ್ದೀನ್‌ ಎಕ್ಸ್‌ಪ್ರೆಸ್‌ ರೈಲ್ವೆಗೆ ಹಸಿರು ನಿಶಾನೆ ತೋರಲು ಒಂದೇ ದಿನ ಬಾಕಿ ಮಾತ್ರ
ಇದೆ.
ನಾಳೆ ಸದಾನಂದಗೌಡ ಚಾಲನೆ: ಬೆಂಗಳೂರಿನ ಯಶವಂತಪುರ ವಯಾ ಚಿಕ್ಕಬಳ್ಳಾಪುರ, ಕೋಲಾರ, ಬಂಗಾರಪೇಟೆ ಮೂಲಕ ದೆಹಲಿಗೆ ಸಂಚಾರ ಮಾಡುವ ರೈಲಿಗೆ ಮಾ.5ರಂದು ಬೆಳಗ್ಗೆ 10:30ಕ್ಕೆ ಕೇಂದ್ರ
ಸಚಿವ ಡಿ.ವಿ.ಸದಾನಂದಗೌಡರು ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಲಿದ್ದು, ಈ ಭಾಗದ ರೈಲು ಪ್ರಯಾಣಿಕರಲ್ಲಿ ಸಂತಸ ಮನೆ ಮಾಡಿದೆ.

ಪ್ರಯಾಣಿಕರ ಸಂತಸ: ಕಳೆದ ಫೆ.16 ರಂದು ಯಶವಂತಪುರದಿಂದ ದೇವನಹಳ್ಳಿವರೆಗೂ ಮಾತ್ರ ಬರುತ್ತಿದ್ದ ಪ್ಯಾಸೆಂಜರ್‌ ರೈಲನ್ನು ಚಿಕ್ಕಬಳ್ಳಾಪುರದವರೆಗೂ ವಿಸ್ತರಣೆ ಮಾಡಿದ್ದ ರೈಲ್ವೆ ಇಲಾಖೆ ಇದೀಗ ಇದೇ ಮೊದಲಬಾರಿಗೆ ಚಿಕ್ಕಬಳ್ಳಾಪುರದ ಮೂಲಕ ದೂರದ ದೆಹಲಿಗೆ ಸಂರ್ಪಕ ಕಲ್ಪಿಸುವ ರೈಲು ಸಂಚಾರಕ್ಕೆ ರೈಲ್ವೆ ಇಲಾಖೆ ಗ್ರೀನ್‌ ಸ್ನಿಗಲ್‌ನೀಡಿರುವುದು ಜಿಲ್ಲೆಯ ಮಾತ್ರವಲ್ಲದೇಅವಿಭಜಿತ ಕೋಲಾರ ಜಿಲ್ಲೆಯ ರೈಲ್ವೆ ಪ್ರಯಾಣಿಕರಲ್ಲಿ ಸಂತಸ ಮನೆ ಮಾಡಿದೆ. ನೆರೆಯ ಆಂಧ್ರಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ರೈಲು ಪ್ರಯಾಣಕ್ಕೆ ಇದೇ ಮೊದಲ ಬಾರಿಗೆ ಚಾಲನೆ ನೀಡುತ್ತಿರುವುದರಿಂದ ಜನಸಾಮಾನ್ಯರಿಗೆ ಮಾತ್ರವಲ್ಲದೇ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ಹೆಚ್ಚುಅನುಕೂಲವಾಗಲಿದೆ.

ಜನಸಾಮಾನ್ಯರಿಗೆ ವರದಾನ: ಹಲವು ದಶಕಗಳ ಕಾಲ ನ್ಯಾರೋಗೇಜ್‌ನಿಂದ ಬ್ರಾಡ್‌ಗೆàಜ್‌ ಹಳಿ ಪರಿರ್ವತನೆಗೊಳ್ಳದೇ ಕೋಲಾರ, ಚಿಕ್ಕಬಳ್ಳಾಪುರ ನಡುವೆ ರೈಲು ಸಂಚಾರ ಸ್ಥಗಿತಗೊಂಡ ಬಳಿಕ ಮೊದಲ ಬಾರಿಗೆ 2013 ನವೆಂಬರ್‌ 8 ರಂದು ನ್ಯಾರೋಗೇಜ್‌ನಿಂದ ಬ್ರಾಡ್‌ಗೆàಜ್‌ಗೆ ಹಳಿ ಪರಿವರ್ತನೆಗೊಂಡ ಕೋಲಾರ ಹಾಗೂ ಚಿಕ್ಕಬಳ್ಳಾಪುರ ನಡುವೆ ಆರಂಭಗೊಂಡ ಪ್ಯಾಸೆಂಜರ್‌ ರೈಲು ಈ ಭಾಗದ ಜನ ಸಾಮಾನ್ಯರಿಗೆ ಸಾಕಷ್ಟು ವರದಾನವಾಗಿದೆ. ದಿನೇ ದಿನೇ ಎರಡು ಜಿಲ್ಲೆಗಳಲ್ಲಿ ಬೆಂಗಳೂರಿಗೆ ಬಂದು ಹೋಗುವವರ ಸಂಖ್ಯೆಹೆಚ್ಚಾಗ ತೊಡಗಿದೆ. ಇದೇ ಕಾರಣಕ್ಕಾಗಿ ದೇವನಹಳ್ಳಿಯವರೆಗೂ ಬಂದು ಹೋಗುತ್ತಿದ್ದ ಯಶವಂತಪುರ ರೈಲನ್ನು ಚಿಕ್ಕಬಳ್ಳಾಪುರ ದವರೆಗೂ ವಿಸ್ತರಿಸಲಾಗಿದೆ. ಇದೀಗ ಮತ್ತೂಂದು ರೈಲು ದೆಹಲಿಯವರೆಗೂ ಸಂಚರಿಸುವ ರೈಲು ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಮೂಲಕ ಹಾದು ಹೋಗಲಿರುವುದು ಬರಪೀಡಿತ ಜಿಲ್ಲೆಗಳಿಗೆ ವರದಾನವೆಂದೇ ಭಾವಿಸಲಾಗಿದೆ. ಲೋಕಸಭಾ ಚುನಾವಣೆ ಹೊಸ್ತಿಲಲ್ಲಿಜಿಲ್ಲೆಗೆ ರೈಲ್ವೆ ಇಲಾಖೆ ಉದಾರತೆ ತೋರಿ ಚಿಕ್ಕಬಳ್ಳಾಪುರದ ಮೂಲಕ ದೆಹಲಿಗೆ ರೈಲುಸಂಚಾರಕ್ಕೆ ಮುಂದಾಗಿರುವುದು ಜಿಲ್ಲೆಯ ರೈತಾಪಿ ಕೂಲಿ ಕಾರ್ಮಿಕರಲ್ಲಿ ಹಾಗೂ ಸಾರ್ವಜನಿಕರಲ್ಲಿ ಸಂತಸ ಮನೆ ಮಾಡಿದೆ. ಜಿಲ್ಲೆಯ ಜನತೆ ಸದ್ಬಳಕೆ ಮಾಡಿಕೊಳ್ಳುವ ಮೂಲಕ ರೈಲ್ವೆ ಇಲಾಖೆಗೆ ಆದಾಯ ತಂದುಕೊಟ್ಟು ರೈಲು ಶಾಶ್ವತವಾಗಿ ಚಿಕ್ಕಬಳ್ಳಾಪುರದ ಮೂಲಕ ದೆಹಲಿ ಸಂಚರಿಸುವಂತಾಗಲಿ ಎಂಬುದು ಎಲ್ಲರ ಆಶಯವಾಗಿದೆ.

ರೈಲು ಸಂಖ್ಯೆ ಮೂರಕ್ಕೆ ಏರಿಕೆ
ಯಶವಂತಪುರದಿಂದ ದೆಹಲಿಗೆ ಹೊರಡುವ ರೈಲಿಗೆ ಹಸಿರು ನಿಶಾನೆ ತೋರುತ್ತಿರುವುದರಿಂದ ಕೋಲಾರ, ಚಿಕ್ಕಬಳ್ಳಾಪುರದ ನಡುವೆ ಸಂಚರಿಸುವ ರೈಲುಗಳ ಸಂಖ್ಯೆ ಮೂರಕ್ಕೆ ಏರಿದೆ. ಈಗಾಗಲೇ ಕೋಲಾರ ಚಿಕ್ಕಬಳ್ಳಾಪುರದ ನಡುವೆ ದಿನ ನಿತ್ಯ ಎರಡು ಬಾರಿ ಪ್ಯಾಸೆಂಜರ್‌ ರೈಲು ಓಡಾಡುತ್ತಿದ್ದು, ಇದರ ಮಧ್ಯೆ ಯಶವಂತಪುರ ಚಿಕ್ಕಬಳ್ಳಾಪುರದ ನಡುವೆ ಇತ್ತೀಚೆಗೆ ಪ್ಯಾಸೆಂಜರ್‌ ರೈಲು ವಿಸ್ತರಣೆಗೊಂಡಿದೆ. ಹೀಗಾಗಿ ಒಟ್ಟು
ಮೂರು ರೈಲು ಜಿಲ್ಲೆಯ ಮೂಲಕ ಹಾದು ಹೋಗಲಿದ್ದು, ಪ್ರಯಾಣಿಕರ ಸಂಖ್ಯೆ ನೋಡಿಕೊಂಡು ಜೊತೆಗೆ ಬಂಗಾರಪೇಟೆ ರೈಲ್ವೆ ಜಂಕ್ಷನ್‌ ಮೇಲೆ ಒತ್ತಡ ಕಡಿಮೆ ಮಾಡಲು ಚಿಕ್ಕಬಳ್ಳಾಪುರದ ಮೂಲಕ ಹೆಚ್ಚು ರೈಲು ಸಂಚಾರಕ್ಕೆ ರೈಲ್ವೆ ಇಲಾಖೆ ಗಂಭೀರ ಚಿಂತನೆ ನಡೆಸಿದೆ.

ಈ ರೈಲು ತಿರುಪತಿಗೂ ಹೋಗುತ್ತೆ
ಬೆಂಗಳೂರಿನ ಯಶವಂತಪುರದ ರೈಲ್ವೆ ನಿಲ್ದಾಣದಿಂದ ವಯಾ ಚಿಕ್ಕಬಳ್ಳಾಪುರದ ಮೂಲಕ ಸಂಚರಿಸಲಿರುವ ರೈಲು ನೆರೆಯ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿ ಮೂಲಕವೇ ದೆಹಲಿಗೆ ಹೊರಡಲಿರುವುದರಿಂದ ಅವಿಭಜಿತ ಕೋಲಾರ ಜಿಲ್ಲೆಯ ತಿರುಮಲ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಹೆಚ್ಚು ಅನುಕೂಲವಾಗಲಿದೆ. ಪ್ರತಿ
ದಿನವು ಜಿಲ್ಲೆಯಿಂದ ತಿರುಪತಿಗೆ ಹೋಗುವ ಭಕ್ತರ ಸಂಖ್ಯೆ ಅಧಿಕವಾಗಿರುವುದರಿಂದಸಹಜವಾಗಿಯೇ ಯಶವಂತಪುರ ಚಿಕ್ಕಬಳ್ಳಾಪುರದ ಮೂಲಕ ದೆಹಲಿಗೆ ರೈಲು ಸಂಚರಿಸುವುದರಿಂದ ತಿಮ್ಮಪ್ಪನ ಭಕ್ತರಲ್ಲಿ ಹರ್ಷ ತಂದಿ¨ದ. 

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.