ಆಧಾರ್ ಟೋಕನ್ ಪಡೆಯಲು ಹರಸಾಹಸ
Team Udayavani, Jan 4, 2020, 4:09 PM IST
ಚಿಂತಾಮಣಿ: ಹೊಸ ಆಧಾರ್ ಕಾರ್ಡ್ ಟೋಕನ್ ಪಡೆಯಲು ಹಾಗೂ ಆಧಾರ್ ಕಾರ್ಡ್ ತಿದ್ದುಪಡಿ ಮಾಡಿಸಲು ತಿಂಗಳಿಗೊಮ್ಮೆ ಟೋಕನ್ ನೀಡುತ್ತಿರುವುದರಿಂದ ಗುರುವಾರ ಬೆಳಗಿನ ಜಾವ 5 ಗಂಟೆಯಿಂದಲೇ ನೂರಾರು ಮಂದಿ ಪಟ್ಟಣದ ಕೆನರಾ ಬ್ಯಾಂಕ್ ಬಳಿ ಜಮಾಯಿಸಿದ್ದ ದೃಶ್ಯ ಕಂಡು ಬಂತು.
ಸರ್ಕಾರದ ಯೋಜನೆಗಳ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ತಾಲೂಕಿನಾದ್ಯಂತ ಎಲ್ಲಾ ನಾಡ ಕಚೇರಿ ಹಾಗೂ ಗ್ರಾಪಂ ಕಚೇರಿಗಳಲ್ಲಿ ಈ ಹಿಂದೆ ಆಧಾರ್ ಕಾರ್ಡ್ಗಳನ್ನು ಮಾಡಿಕೊಡಲಾಗುತ್ತಿತ್ತು.
ಆದರೆ ಇತ್ತೀಚಿಗೆ ನೆಟ್ವರ್ಕ್ ಸಮಸ್ಯೆಯಿಂದಾಗಿನಾಡ ಕಚೇರಿ ಹಾಗೂ ಗ್ರಾಪಂಗಳಲ್ಲಿ ಆಧಾರ್ ಮಾಡಿಕೊಡುವುದನ್ನು ನಿಲ್ಲಿಸಿರುವುದರಿಂದ ಹಾಗೂ ಇಡೀ ತಾಲೂಕಿಗೆ ಚಿಂತಾಮಣಿ ನಗರದ ಕೆನರಾ ಬ್ಯಾಂಕ್ ಹಾಗೂ ಎಸ್ಬಿಐ ಬ್ಯಾಂಕ್ ಮತ್ತು ಒಂದೆರೆಡು ನಾಡ ಕಚೇರಿಗಳಲ್ಲಿ ಮಾತ್ರ ಆಧಾರ್ ಕಾರ್ಡ್ ಮಾಡಿಕೊಡಲಾಗುತ್ತಿದ್ದು, ಆಧಾರ್ ಪಡೆಯಲು ಟೋಕನ್ ತಿಂಗಳಿಗೊಮ್ಮೆ ನೀಡುತ್ತಿರುವ ಕಾರಣ ಬೆಳಗ್ಗೆ 5 ಗಂಟೆಗೆ ದೂರದ ಊರುಗಳಿಂದ ಬಂದ ಮಕ್ಕಳು, ವಯೋವೃದ್ಧರು ಹಾಗೂ ಸಾರ್ವಜನಿಕರು ಬ್ಯಾಂಕ್ ಬಳಿ ಸರದಿ ಸಾಲಿನಲ್ಲಿ ನಿಲ್ಲಬೇಕಿದೆ.
ಬೆಳಗ್ಗೆ ಹತ್ತು ಗಂಟೆ ಸಮಯಕ್ಕೆ ನೂರಾರು ಜನರು ಟೋಕನ್ ಪಡೆಯಲು ಜಮಾಯಿಸಿದ್ದರಿಂದ, ಬ್ಯಾಂಕ್ ಬಳಿ ಜನಜಂಗುಳಿ ಹೆಚ್ಚಾಗಿ ನೂಕುನುಗ್ಗಲು ಉಂಟಾಯಿತು. ಮಧ್ಯ ಪ್ರವೇಶಿಸಿದ ಬ್ಯಾಂಕ್ ಅಧಿಕಾರಿಗಳು ಜನರ ಮನವೊಲಿಸಿ ಸರದಿ ಸಾಲಿನಲ್ಲಿ ನಿಲ್ಲಿಸಿದ್ದರಿಂದ ಪರಿಸ್ಥಿತಿ ತಿಳಿಗೊಂಡು ಸಾರ್ವಜನಿಕರು ಸಾಲಾಗಿ ನಿಂತು ಟೋಕನ್ ಪಡೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ