ಒಂದೇ ಕಚೇರಿಗೆ ಇಬ್ಬರು ಅಧಿಕಾರಿಗಳ ಸಾರಥ್ಯ!


Team Udayavani, Jan 30, 2020, 3:00 AM IST

onde-kache

ಕೋಲಾರ: ವರ್ಗಾವಣೆಯ ಗೊಂದಲ ಹಾಗೂ ನ್ಯಾಯಾಲಯ ತಡೆಯಾಜ್ಞೆಯಿಂದಾಗಿ ಒಂದೇ ಕಚೇರಿಯಲ್ಲಿ ಇಬ್ಬರು ಕಾರ್ಯಪಾಲಕ ಇಂಜಿನಿಯರ್‌ಗಳು ಕಾರ್ಯನಿರ್ವಹಿಸುವಂತಾಗಿದೆ. ಇಂತಹ ಸಮಸ್ಯೆ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗದಲ್ಲಿ ಉದ್ಭವವಾಗಿದೆ. ಕಳೆದ ಒಂದು ತಿಂಗಳಿನಿಂದಲೂ ಕೋಲಾರದ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗದಲ್ಲಿ ಈ ಸಮಸ್ಯೆ ತಲೆದೋರಿದ್ದು, ಮಾರ್ಚ್‌ ಅಂತ್ಯದೊಳಗೆ ಕೋಟ್ಯಂತರ ರೂ. ಬಿಲ್‌ಗ‌ಳು ಪಾವತಿಯಾಗದಿರುವ ಬಿಕ್ಕಟ್ಟು ನಿರ್ಮಾಣವಾಗಿದೆ.

ಕೋಲಾರ ಪಂಚಾಯತ್‌ ರಾಜ್‌ ಇಂಜಿಯರಿಂಗ್‌ ವಿಭಾಗದ ಕಾರ್ಯಪಾಲಕ ಅಭಿಯಂತರಾಗಿ ಮುನಿಆಂಜಿನಪ್ಪ ಕಾರ್ಯನಿರ್ವಹಿಸುತ್ತಿದ್ದು, ಇವರಿಗೆ ಸೂಪರಿಡೆಂಟ್‌ ಇಂಜಿನಿಯರ್‌ ಹುದ್ದೆಗೆ ಪದೋನ್ನತಿ ನೀಡಿ ನಗಾಭಿವೃದ್ಧಿ ಇಲಾಖೆಗೆ ವರ್ಗಾಯಿಸಲಾಗಿತ್ತು. ಆದರೆ, ಅವರಿಗೆ ವರ್ಗಾವಣೆ ಆದೇಶದಲ್ಲಿ ಸೂಕ್ತ ಹುದ್ದೆಯನ್ನು ಸ್ಪಷ್ಟವಾಗಿ ತೋರಿಸಿರಲಿಲ್ಲ. ಇದೇ ಸ್ಥಾನಕ್ಕೆ ಮುಳಬಾಗಿಲಿನಲ್ಲಿ ಎಇಇ ಆಗಿ ಕಾರ್ಯನಿರ್ವಹಿಸುತ್ತಿದ್ದ ಬೋರೇಗೌಡರಿಗೆ ಕೋಲಾರದ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗಕ್ಕೆ ಕಾರ್ಯಪಾಲಕ ಅಭಿಯಂತರಾಗಿ ಪದೋನ್ನತಿ ನೀಡಿ ವರ್ಗಾವಣೆ ಮಾಡಲಾಗಿತ್ತು.

ಆದರೆ, ಕೋಲಾರದ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗದ ಮುನಿಆಂಜಿನಪ್ಪ ತಮಗೆ ಪದೋನ್ನತಿ ನೀಡಿ ಸೂಕ್ತ ಹುದ್ದೆಯನ್ನು ತೋರಿಸದೆ ಇರುವುದರಿಂದ ಅವರು ತಮ್ಮ ಪದೋನ್ನತಿ ವರ್ಗಾವಣೆ ಆದೇಶಕ್ಕೆ ಕೆಇಟಿ ನ್ಯಾಯಾಲಯಕ್ಕೆ ತೆರಳಿ ಯಥಾಸ್ಥಿತಿ ಕಾಪಾಡುವ ತಡೆಯಾಜ್ಞೆ ತಂದಿದ್ದರು. ಇದರಿಂದ ಮುನಿಆಂಜಿನಪ್ಪ ಕೋಲಾರದ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗಕ್ಕೆ ಕಾರ್ಯಪಾಲಕರಾಗಿಯೇ ಉಳಿಯುವಂತಾಯಿತು. ಇವರ ಜಾಗಕ್ಕೆ ಪದೋನ್ನತಿ ಹೊಂದಿ ಬಂದಿದ್ದ ಬೋರೇಗೌಡರು ಕಚೇರಿಗೆ ಬಂದರೂ ಹುದ್ದೆ ಖಾಲಿ ಇಲ್ಲದೆ ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಬೋರೇಗೌಡರು ತಮ್ಮ ಪದೋನ್ನತಿ ಆದೇಶಕ್ಕೆ ಧಕ್ಕೆ ಬಾರದಂತೆ ಕೆಇಟಿ ನ್ಯಾಯಾಲಯದಲ್ಲಿಯೇ ಕೇವಿಯಟ್‌ ಸಲ್ಲಿಸಿದ್ದಾರೆ.

ಇಲ್ಲದ್ದನ್ನು ನೋಡಿಕೊಂಡು ಸಹಿ ಹಾಕೋದು: ಇವರಿಬ್ಬರ ವರ್ಗಾವಣೆ ವಿಚಾರವು ಫೆ.4ರಂದು ಕೆಇಟಿ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ಅಂದು ವರ್ಗಾವಣೆಯ ಕುರಿತಂತೆ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗದಲ್ಲಿ ಯಾರು ಕಾರ್ಯಪಾಲಕ ಅಭಿಯಂತರಾಗಿ ಕಾರ್ಯನಿರ್ವಹಿಸಬೇಕು ಎಂಬುದು ಇತ್ಯರ್ಥವಾಗಬಹುದು ಎಂದು ನಿರೀಕ್ಷಿಸಲಾಗುತ್ತಿದೆ. ಆದರೆ, ಈ ಗೊಂದಲದಲ್ಲಿ ಕಳೆದ ಒಂದು ತಿಂಗಳಿನಿಂದಲೂ ಅವರಿಲ್ಲದಿದ್ದಾಗ ಇವರು, ಇವರಿಲ್ಲದಿದ್ದಾಗ ಅವರು ಕಚೇರಿಗೆ ಬಂದು ಹಾಜರಾತಿ ಹಾಕಿ ಹೋಗುತ್ತಿದ್ದಾರೆ.

ಸಹಿ ಇಲ್ಲದೆ, ಬಿಲ್‌ ಪಾವತಿ ಆಗಿಲ್ಲ: ಎರಡು ದಿನಗಳಿಂದಲೂ ಮುನಿಆಂಜಿನಪ್ಪ ರಜೆಯ ಮೇಲೆ ತೆರಳಿರುವುದರಿಂದ ಬೋರೇಗೌಡರೇ ಹಾಜರಾತಿ ಹಾಕಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೂ, ಕಚೇರಿಯಲ್ಲಿ ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲದಂತಾಗಿದೆ. ಈ ಇಬ್ಬರೂ ಅಧಿಕಾರಿಗಳ ವರ್ಗಾವಣೆ ಗೊಂದಲ ಏರ್ಪಟ್ಟಾಗಿನಿಂದಲೂ ಕೋಲಾರ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗದಲ್ಲಿ ಸುಮಾರು 45 ಕೋಟಿ ರೂ. ಗುತ್ತಿಗೆ ಕೆಲಸಗಳ ಬಿಲ್‌ ಪಾವತಿಯಾಗದೆ ಸ್ಥಗಿತಗೊಂಡಿದೆ. ಇದರಿಂದ ಗುತ್ತಿಗೆದಾರರು ಆತಂಕಗೊಂಡಿದ್ದಾರೆ.

ಫೆಬ್ರವರಿ ಹದಿನೈದರೊಳಗಾಗಿ ಆನ್‌ಲೈನ್‌ನಲ್ಲಿ ಈ ವರ್ಷದ ಗುತ್ತಿಗೆ ಅನುದಾನವನ್ನು ಪೂರ್ಣವಾಗಿ ಬಳಸಿಕೊಂಡು ಪಾವತಿಸಬೇಕಾಗುತ್ತದೆ. ಇಲ್ಲವೇ, ಸರಕಾರಕ್ಕೆ ವಾಪಸ್‌ ಹೋಗುವ ಭೀತಿಯೂ ಎದುರಾಗಿದೆ. ಇಂತ ಸಂದರ್ಭದಲ್ಲಿ ಅಧಿಕಾರಿಗಳ ವರ್ಗಾವಣೆ ಗೊಂದಲ ಗುತ್ತಿಗೆದಾರರನ್ನು ಮತ್ತಷ್ಟು ಕಂಗೆಡುವಂತೆ ಮಾಡಿದೆ. ಮಾರ್ಚ್‌ ಅಂತ್ಯದೊಳಗೆ ತಾವು ನಿರ್ವಹಿಸಿರುವ ಕಾಮಗಾರಿಗಳ ಗುತ್ತಿಗೆ ಹಣ ತಮ್ಮ ಕೈಸೇರುತ್ತದೋ ಇಲ್ಲವೋ ಎಂಬ ಆತಂಕವೂ ಗುತ್ತಿಗೆದಾರರನ್ನು ಕಾಡುವಂತಾಗಿದೆ.

ಸಂಪರ್ಕಕ್ಕೆ ಸಿಗದ ಎಂಜಿನಿಯರ್‌: ಕೋಲಾರ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗದಿಂದ ಸೂಪರಿಟೆಂಡ್‌ ಎಂಜಿನಿಯರ್‌ ಆಗಿ ಪದೋನ್ನತಿ ಪಡೆದು ಯಥಾಸ್ಥಿತಿ ಆದೇಶ ತಂದಿರುವ ಮುನಿಆಂಜಿನಪ್ಪ ಈ ಕುರಿತು ಪ್ರತಿಕ್ರಿಯಿಸಲು ದೂರವಾಣಿ ಸಂಪರ್ಕಕ್ಕೆ ಸಿಗಲಿಲ್ಲ.

ಕೋಲಾರ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗದ ಕಾರ್ಯಪಾಲಕ ಅಭಿಯಂತರ ವರ್ಗಾವಣೆ ವಿಚಾರವು ಕೆಇಟಿ ನ್ಯಾಯಾಲಯದಲ್ಲಿದ್ದು, ಫೆ.4 ರಂದು ವಿಚಾರಣೆಗೆ ಬರಲಿದೆ. ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥ ಆಗದೆ ತಾವು ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲದಂತಾಗಿದೆ.
-ಎಚ್‌.ದರ್ಶನ್‌, ಸಿಇಒ, ಜಿಪಂ ಕೋಲಾರ

ಕೋಲಾರ ಪಂಚಾಯತ್‌ ಎಂಜಿನಿಯರಿಂಗ್‌ ವಿಭಾಗಕ್ಕೆ ಕಾರ್ಯಪಾಲಕ ಅಭಿಯಂತರಾಗಿ ಪದೋನ್ನತಿ ಹೊಂದಿ ತಾವು ಬಂದಿದ್ದು, ಮುನಿಆಂಜಿನಪ್ಪ ಕೆಇಟಿ ನ್ಯಾಯಾಲಯದಲ್ಲಿ ಯಥಾಸ್ಥಿತಿ ಆದೇಶ ತಂದಿರುವುದರಿಂದ ಸಮಸ್ಯೆ ಉದ್ಭವವಾಗಿದೆ. ತಾವು ನ್ಯಾಯಾಲಯಕ್ಕೆ ಕೇವಿಯಟ್‌ ಸಲ್ಲಿಸಿದ್ದು, ಫೆ.4 ವಿಚಾರಣೆ ನಡೆಯಲಿದೆ. ಆದರೂ, ವರ್ಗಾವಣೆಯಾಗಿನಿಂದಲೂ ಕಚೇರಿಗೆ ಹೋಗಿ ಬರುತ್ತಿದ್ದೇನೆ. ಸಮಸ್ಯೆಯನ್ನು ದೊಡ್ಡದಾಗಿಸದೆ ಬಗೆಹರಿಸಿಕೊಳ್ಳುವ ನಿರೀಕ್ಷೆ ಇದೆ.
-ಬೋರೇಗೌಡ, ಪದೋನ್ನತಿ ಪಡೆದ ಇಇ. ಪಿಆರ್‌ಇಡಿ

* ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.