ತಾಪಂ ಅಧ್ಯಕ್ಷೆ ವಿರುದ್ಧ ಪಕ್ಷಾತೀತ ಅವಿಶ್ವಾಸ

27ರಲ್ಲಿ 26ಮಂದಿ ಅವಿಶ್ವಾಸ ಮಂಡನಾ ಮನವಿ ಸಲ್ಲಿಕೆ | ಕರ್ತವ್ಯಲೋಪ, ಅನುದಾನ ದುರ್ಬಳಕೆ, ಅಗೌರವದ ಆರೋಪ

Team Udayavani, Apr 30, 2019, 2:39 PM IST

kolar-6-tdy..

ಬಂಗಾರಪೇಟೆ ತಾಪಂ ಆಧ್ಯಕ್ಷೆ ಭಾಗ್ಯಲಕ್ಷ್ಮೀ ವಿರುದ್ಧ 23 ಸದಸ್ಯರು ಅವಿಶ್ವಾಸ ನಿರ್ಣಯ ಕೋರಿ ತಾಪಂ ಇಒ ಮಂಜುನಾಥ್‌ರಿಗೆ ಮನವಿ ಸಲ್ಲಿಸಿದರು

ಬಂಗಾರಪೇಟೆ: ತಾಪಂನಲ್ಲಿ ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳಲ್ಲಿ ಏಕನಿರ್ಣಯ ಕೈಗೊಳ್ಳುವ ಮೂಲಕ ಎಲ್ಲಾ ಸದಸ್ಯರ ಕೆಂಗೆಣ್ಣಿಗೆ ಗುರಿಯಾಗಿರುವ ತಾಪಂ ಅಧ್ಯಕ್ಷೆ ಭಾಗ್ಯಲಕ್ಷ್ಮೀ ವಿರುದ್ಧ ಪಕ್ಷಾತೀತವಾಗಿ ಅವಿಶ್ವಾಸ ನಿರ್ಣಯ ಕೈಗೊಳ್ಳಲು ತಾಪಂ ಇಒ ಮಂಜುನಾಥ್‌ರಿಗೆ ಮನವಿ ಮಾಡಿದರು.

ತಾಪಂನ ಒಟ್ಟು 27 ಸ್ಥಾನಗಳಲ್ಲಿ ಬಿಜೆಪಿ 17, ಕಾಂಗ್ರೆಸ್‌ 9 ಹಾಗೂ ಒಂದು ಸ್ಥಾನವು ಪಕ್ಷೇತರರಾಗಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯಿಂದ ಗೆದ್ದಿರುವ 17 ಸ್ಥಾನಗಳಲ್ಲಿ ಬಂಗಾರಪೇಟೆ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಗೆ 10 ಸ್ಥಾನಗಳು ಹಾಗೂ ಕೆಜಿಎಫ್ ಕ್ಷೇತ್ರದ ವ್ಯಾಪ್ತಿಯಲ್ಲಿ 7 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಅಧ್ಯಕ್ಷರ ವಿರುದ್ಧ ಅವಿಶ್ವಾಸ: ತಾಪಂನ ಸಾಮಾನ್ಯ ಸಭೆಯಲ್ಲಿ ಎಲ್ಲಾ ಸದಸ್ಯರ ಒಮ್ಮತದಿಂದ ಕೈಗೊಳ್ಳುವ ನಿರ್ಣಯಗಳನ್ನು ಪಾಲಿಸದೇ, ಸ್ವಹಿತಾಸಕ್ತಿಗನುಗುಣವಾಗಿ ಕಾರ್ಯ ನಿರ್ವಹಿಸಿ ಸದಸ್ಯರ ಸಹಕಾರ ಕಳೆದುಕೊಂಡಿದ್ದಾರೆ. ಚುನಾವಣೆಯಲ್ಲಿ ಇವರಿಗೆ ಸಹಕಾರ ನೀಡಿದ ಕಾಂಗ್ರೆಸ್‌ ಸದಸ್ಯರಿಗೂ ಅಗೌರವ ಸೂಚಿಸಿರುವ ಕಾರಣ ಅಧ್ಯಕ್ಷರ ವಿರುದ್ಧ ಪಕ್ಷಾತೀತವಾಗಿ ಎಲ್ಲಾ ಸದಸ್ಯರು ಮುನಿಸಿಕೊಂಡಿದ್ದಾರೆ. ಇದಕ್ಕೆ ತಲೆಕೆಡಿಸಿಕೊಳ್ಳದೆ ಇರುವ ಅಧ್ಯಕ್ಷೆ ಭಾಗ್ಯಲಕ್ಷ್ಮೀೕ ವಿರುದ್ಧ ಕೊನೆಗೂ ಸೋಮವಾರ ಅವಿಶ್ವಾಸ ನಿರ್ಣಯ ಫ‌ಲನೀಡಿದೆ.

ಸಾಕ್ಷಿ ನಾಶದ ಆತಂಕ: ತಾಪಂ ಅಧ್ಯಕ್ಷೆ ಭಾಗ್ಯಲಕ್ಷ್ಮೀ ತಾಪಂ ವಿವಿಧ ಯೋಜನೆಗಳಲ್ಲಿ ಕೆಲಸ ಮಾಡದೇ ಅಧಿಕಾರಿಗಳು ಮತ್ತು ಸಿಬ್ಬಂದಿಯ ಮೇಲೆ ಒತ್ತಡ ತಂದು ಕೆಲಸ ಮಾಡದೇ ಬಿಲ್ ಮಾಡುವುದರ ಮೂಲಕ ಸರ್ಕಾರಿ ಅನುದಾನ ದುರುಪಯೋಗಪಡಿಸಿಕೊಂಡಿರುವ ಬಗ್ಗೆ ಜಿಪಂಗೆ ದೂರು ಸಹ ನೀಡಲಾಗಿದ್ದು, ಈ ಬಗ್ಗೆ ಜಿಪಂ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಅಧಿಕಾರದಲ್ಲಿದ್ದರೆ ಸಾಕ್ಷ್ಯ ನಾಶ ಮಾಡುತ್ತಾರೆಂಬ ಆತಂಕದಿಂದ ಎಲ್ಲಾ ಸದಸ್ಯರು ಸೇರಿ ಅವಿಶ್ವಾಸ ಮಂಡಿಸಿದ್ದಾರೆ.

ಮನವಿ ಸಲ್ಲಿಕೆ: ತಾಪಂನಲ್ಲಿ ಒಟ್ಟು 27 ಸ್ಥಾನಗಳ ಪೈಕಿ 26 ಸದಸ್ಯರು ಒಂದೆಡೆ ಸೇರಿ ತಾಪಂ ಅಧ್ಯಕ್ಷೆ ಭಾಗ್ಯಲಕ್ಷ್ಮೀ ವಿರುದ್ಧ ಅವಿಶ್ವಾಸ ನಿರ್ಣಯ ಕೈಗೊಳ್ಳುವ ಬಗ್ಗೆ ತೀರ್ಮಾನ ಕೈಗೊಂಡಿದ್ದು, ಸೋಮವಾರ ಕೋಲಾರ ಉಪವಿಭಾಗಾಧಿಕಾರಿಗಳಿಗೆ ಅವಿಶ್ವಾಸ ನಿರ್ಣಯ ಮಂಡಿಸಲು ಹೋಗಿದ್ದು, ಕಾನೂನಿನ ಪ್ರಕಾರ ತಾಪಂ ಅಧ್ಯಕ್ಷರಿಗೆ ಆಥವಾ ತಾಪಂ ಕಾರ್ಯನಿರ್ವಹಣಾಧಿಕಾರಿಗಳಿಗೆ ಅವಿಶ್ವಾಸ ನಿರ್ಣಯ ಮಂಡಿಸಬೇಕಾಗಿರುವ ಬಗ್ಗೆ ಖಚಿತ ಪಡಿಸಿಕೊಂಡು ನಂತರ ಬಂಗಾರಪೇಟೆ ತಾಪಂ ಇಒ ಮಂಜುನಾಥ್‌ರಿಗೆ ಮನವಿ ಸಲ್ಲಿಸಿದರು.

ಅವಿಶ್ವಾಸ ನಿರ್ಣಯದಲ್ಲಿ 26 ಸದಸ್ಯರು ನಮೂದು ಮಾಡಿದ್ದರೂ ಸಹ ಸುಂದರಪಾಳ್ಯದ ಜಯರಾಮರೆಡ್ಡಿ, ಚಿಕ್ಕಅಂಕಂಡಹಳ್ಳಿ ಪಿ.ಅಮರೇಶ್‌ ಹಾಗೂ ದೋಣಿಮಡುಗು ಶಿಲ್ಪ ಸಹಿ ಮಾಡಿಲ್ಲ. ಉಳಿದಂತೆ 23 ಸದಸ್ಯರು ಖುದ್ದು ಹಾಜರಾಗಿ ಮನವಿ ಸಲ್ಲಿಸಿದರು. ತಾಪಂ ಉಪಾಧ್ಯಕ್ಷೆ ಗಿರಿಜಮ್ಮ, ಸದಸ್ಯರಾದ ಜೆಸಿಬಿ ನಾರಾಯಣಪ್ಪ, ಗುಲ್ಲಹಳ್ಳಿ ವೆಂಕಟೇಶಯ್ಯ, ಹುಲಿಬೆಲೆ ನಾರಾಯಣಸ್ವಾಮಿ, ಬೂದಿಕೋಟೆ ಮಾರ್ಕಂಡೇಯಗೌಡ, ಎನ್‌.ಜಿ.ಹುಲ್ಕೂರು ನಾರಾಯಣಪ್ಪ, ಕಾಮಸಮುದ್ರ ವೆಂಕಟೇಶ್‌, ಹುನ್ಕುಂದ ವೆಂಕಟೇಶ್‌, ಬಲಮಂದೆ ಮಹದೇವ್‌, ರಾಮಸಾಗರ ಜಿ.ಬಾಬು, ಬೆಂಗನೂರು ಮಂಜುಳಾ, ಡಿ.ಕೆ.ಹಳ್ಳಿ ವರಲಕ್ಷ್ಮೀ, ಕೆಂಪಾಪುರ ಸುನಂದಮ್ಮ, ಹಂಗಳ ಮಮತಾ, ಕಮ್ಮಸಂದ್ರ ಆಶಾ, ಸೂಲಿಕುಂಟೆ ಶ್ರೀದೇವಿ, ಕಾರಹಳ್ಳಿ ವೀಣಾ, ಚಿನ್ನಕೋಠೆ ಅಂಬರೀಶ್‌, ದೊಡ್ಡವಲಗಮಾದಿ ನಾಗರತ್ನ, ಪಾರಾಂಡಹಳ್ಳಿ ಸವಿತಾ, ಬೇತಮಂಗಲ ಕೃಷ್ಣಮೂರ್ತಿ ಇತರರು ಸಹಿ ಹಾಕಿ ಅವಿಶ್ವಾಸ ಸೂಚಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.